Headlines

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರಿಗೆ ಕ್ಲೀನ್ ಚೀಟ್ ಸಿಕ್ಕ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಾನು ಮೊದಲೇ ಹೇಳಿದ್ದೆ ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಗೆದ್ದು ಬರುತ್ತೇನೆ ಎಂದಿದ್ದೆ. ಇದೀಗ ಹಾಗೆ ಆಗಿದೆ. ದೇವರು ನನ್ನ ಪರವಾಗಿರುವುದಕ್ಕೆ ಸಂತೋಷವಾಗಿದೆ ಎಂದರು. ನನ್ನಿಂದಾಗಿ ನನ್ನ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗಿತ್ತಲ್ಲ ಎಂಬ ನೋವಿತ್ತು. ಏನೂ ತಪ್ಪು ಮಾಡದ…

Read More

ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮರು ತನಿಖೆ ನಡೆಸುವಂತೆ ಆಗ್ರಹ

ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿಯೊಬ್ಬರ ಮೇಲೆ ಹಿರಿಯ ವೈದ್ಯರೊಬ್ಬರಿಂದ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ಈ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಪೀಪಲ್ಸ್ ಲಾಯರ್ ಗಿಲ್ಡ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕಳೆದ ಶುಕ್ರವಾರ ಅಂದರೆ ದಿನಾಂಕ:15-07-2022 ರಂದು ಸಿಮ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಹಿರಿಯ ಶಸ್ತ್ರ ಚಿಕಿತ್ಸೆ ವೈದ್ಯರಾದ ಆಶ್ವಿನ್ ಹೆಬ್ಬಾರ್, ಎಂಬುವರಿಂದ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಉತ್ತರಭಾರತೀಯ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸಿಮ್ಸ್  ನಿರ್ದೇಶಕರಿಗೆ ಲಿಖಿತ ದೂರನ್ನು…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಪ್ರಮೀಳಾ ಲಕ್ಷ್ಮಣಗೌಡ ಪದವಿ ಸ್ವೀಕಾರ

ರಿಪ್ಪನ್‌ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಜೀವನ ಸಾಗಿಸುತ್ತಿರುವ ಇಂದಿನ ನಾಗರಿಕರಿಗೆ  ಮಾನಸಿಕ ನೆಮ್ಮದಿ ಅತ್ಯಂತ ಅಗತ್ಯವಾದ ಸಂಗತಿಯಾಗಿದೆ. ಮಾನವ ಸಮಾಜ ಸೇವೆಯಲ್ಲಿ ಪಡೆದುಕೊಂಡಾಗ ಮಾತ್ರ ನೆಮ್ಮದಿಯನ್ನು ಕಾಣಬಹುದು ಎಂದು ರೋಟರಿ ಸಂಸ್ಥೆಯ ಮಾಜಿ ಗವರ್ನರ್ ರೊಟೇರಿಯನ್ ಎಚ್ ಎಲ್ ರವಿ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ವಿಶ್ವಮಾನವ ಸಮುದಾಯಭವನದಲ್ಲಿ ಅಯೋಜಿಸಲಾಗಿದ್ದ ರೋಟರಿ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ  ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ಜಗತ್ತಿನಲ್ಲಿ…

Read More

ಬಡವರ ಕಣ್ಣೀರು ತಾಲೂಕ್ ಆಡಳಿತಕ್ಕೆ ಕಾಣಿಸುತ್ತಿಲ್ಲವೇ .???? : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ತಾಲೂಕಿನ ತಹಶೀಲ್ದಾರರು ಬಿಬಿಎಂಪಿ ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದವರು ಈಗ ಹಳ್ಳಿಗೆ ಬಂದಿದ್ದಾರೆ, ಮಳೆಗಾಲದಲ್ಲಿ ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಅರಿವು ಅವರಿಗೆ ಹೆಚ್ಚು ತಿಳಿದಂತೆ ಇಲ್ಲ.ಕೊನೆ ಪಕ್ಷ ಬೇರೆಯವರ ಬಳಿ ಕೇಳಿ ತಿಳಿದುಕೊಂಡು ಬಡವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ತಾಲೂಕು ಆಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಬೆಟ್ಟಮಕ್ಕಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

Read More

ರಾಜ್ಯ ಗೃಹ ಮಂತ್ರಿಗಳ ಕ್ಷೇತ್ರ ಕರಡಿಗ-ಬೆಳಕೋಡು ಗ್ರಾಮದಲ್ಲಿ ಹೊಳೆದಾಟುವ ಹರಸಾಹಸಾದಲ್ಲಿ ಶಾಲಾ-ಕಾಲೇಜು ಮಕ್ಕಳು,ಗ್ರಾಮಸ್ಥರು : ಸಾರ್ವಜನಿಕರ ಗೋಳು ಕೇಳುವವರು ಯಾರು…..!?

ರಿಪ್ಪನ್‌ಪೇಟೆ;- ರಾಜ್ಯದ ಗೃಹ ಮಂತ್ರಿಗಳು ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಆರಗ ಜ್ಞಾನೇಂದ್ರ ರವರ ಕ್ಷೇತ್ರದ ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬೆಳಕೋಡು-ಕರಡಿಗ ಗ್ರಾಮದ ಸಂಪರ್ಕವೂ ಮೃತ್ಯುವಿನ ಜೊತೆಗೆ ಸರಸವಾಡಿದಂತಾಗಿದ್ದು ಪ್ರತಿನಿತ್ಯ ನೂರಾರು ಜನ ಇಲ್ಲಿನ ಅಸುರಕ್ಷಿತ ಕಾಲಸಂಕ ಬಳಸಿ ತಮ್ಮ ದೈನಂದಿನ ಕಾರ್ಯಚಟುವಟಿಕೆಗಾಗಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ. ಪ್ರತಿವರ್ಷದ ಮಳೆಗಾಲದಲ್ಲಿ ಗ್ರಾಮದ ಜನರು ನಿತ್ಯ ಸಂಚಾರದ ಮಾರ್ಗ ಹಳ್ಳದ ಹರಿವಿನಿಂದ ಕಡಿತಗೊಂಡು ಸುತ್ತಿಬಳಸಿ ದೂರದ ಪ್ರಯಾಣದಿಂದ ಜನರು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಪೇಟೆ…

Read More

ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕಾರ್ಯಗಾರ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತಲೂ ಮಿಗಿಲಾದದ್ದು ಶಿಕ್ಷಣ : ಎಸ್ ಎಲ್ ಭೋಜೇಗೌಡ

ರಿಪ್ಪನ್ ಪೇಟೆ : ಆಧುನಿಕ ಸಮಾಜದಲ್ಲಿ ಎಲ್ಲಕ್ಕಿಂತ ಮಿಗಿಲಾದುದು ಶಿಕ್ಷಣ ಮತ್ತು ಆರೋಗ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಹೇಳಿದರು. ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಕಾರ್ಯಾಗಾಗಾರ  ಹಾಗೂ ನಿವೃತ್ತ ಪ್ರಾಚಾರ್ಯರು ಮತ್ತು ಉಪನ್ಯಾಸಕರಿಗೆ  ಅಭಿನಂದನಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸರಕಾರಿ ಕಾಲೇಜುಗಳ ಹಾಗೂ ಶಾಲೆಗಳ ಪರಿಸ್ಥಿತಿ ಹೇಳಿಕೊಳ್ಳುವಷ್ಟು ಚೆನ್ನಾಗಿಲ್ಲ. ಇಡೀ ರಾಜ್ಯದಲ್ಲಿ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳು  ಮೂಲ ಸೌಕರ್ಯಗಳಿಲ್ಲದೆ…

Read More

ರಿಪ್ಪನ್‌ಪೇಟೆಯ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಪಟ್ಟಣದ ಜನರ ಹಲವು ವರ್ಷಗಳ ಬೇಡಿಕೆ ದ್ವಿಪಥ ರಸ್ತೆಗೆ  ರಾಜ್ಯ ಸರ್ಕಾರ ಸ್ಪಂದನೆ ನೀಡಿದ್ದು ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ  ಚಾಲನೆ ನೀಡಲಾಗುವುದು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಿಂದ ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೆ ಹಾಗೂ ವಿನಾಯಕ ವೃತ್ತದಿಂದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶಬರೀಶನಗರದವರೆಗೂ ದ್ವಿಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸೆಪ್ಟೆಂಬರ್ ನಲ್ಲಿ…

Read More

ಬಸವಾಪುರ : ರಸ್ತೆ ಅಗೆದು ಕೆರೆಯ ಕೋಡಿ ನೀರನ್ನು ಹರಿಯಬಿಟ್ಟ ಪ್ರಭಾವಿ ವ್ಯಕ್ತಿಗಳು,ಜೆಸಿಬಿ ತಡೆದು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾವಪುರ ಗ್ರಾಮದ ಸರ್ವೆ ನಂ 26 ರ  ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ಖಾಸಗಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುವ ಉದ್ದೇಶದಿಂದ ಸರ್ಕಾರಿ ರಸ್ತೆಯ ಮೇಲೆ ಜೆಸಿಬಿ ಮೂಲಕ ಕಾಲುವೆ ತೋಡಿ ನೀರನ್ನು ಹರಿಯಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.  ಬಸಾವಪುರ ಗ್ರಾಮದ ಗುಂಡೂರು ಮೂಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆಯ ಮೇಲೆ ಖಾಸಗಿ ಪ್ರಭಾವಿ ವ್ಯಕ್ತಿಗಳು ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ರಸ್ತೆಯ ಮೇಲೆ…

Read More

ಮಲಗಿದ್ದ ತಾಯಿ,ಮಗಳ ಮೇಲೆ ಗೋಡೆ ಕುಸಿತ : ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ಮನೆಯಲ್ಲಿ‌ ಮಲಗಿದ್ದವರ ಮೇಲೆ ಏಕಾಏಕಿ ಗೋಡೆ ಕುಸಿದು ತಾಯಿ ಮತ್ತು ಮಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಶಾಂತಿನಗರ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಾಲ್ಕನೇ ಕ್ರಾಸ್​​ನ ಯತಿರಾಜ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದ ಉಮಾ ಹಾಗೂ ಮಗಳು ಕಾವ್ಯ ಎಂಬುವರ ಮೇಲೆ ಇಂದು ಬೆಳಿಗ್ಗೆ ಮನೆಯ ಗೋಡೆ‌ ಕುಸಿದಿದೆ. ಉಮಾ ಅವರ ಕಾಲು ಮುರಿದಿದ್ದು, ಕಾವ್ಯ ಅವರ ಬಲಗೈ ಮುರಿತವಾಗಿದೆ. ಗೋಡೆಯು ಯತಿರಾಜ್ ಅವರ ಕಡೆಯೂ ಬಿದ್ದಿದ್ದರಿಂದ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಗೊಂಡಿರುವ…

Read More

ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ

ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ  ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್‌ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…

Read More