Headlines

ತಾಯಿಯ ಮೃತದೇಹ ಮನೆಯಲ್ಲಿ : ಶವ ಸಂಸ್ಕಾರ ಮುಂದೂಡಿ ಪರೀಕ್ಷೆ ಬರೆದ ಮಗಳು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಂತಪುರ ಗ್ರಾಮದ ನಾಗರಾಜ್ ಎಂಬುವರ ಪತ್ನಿ ಅನುರಾಧ (45) ಎಂಬ ಮಹಿಳೆ ಸೋಮವಾರ ತೀವ್ರ ರಕ್ತದೊತ್ತಡದಿಂದ ಅನಾರೋಗ್ಯಕ್ಕೆ ತುತ್ತಾಗಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.  ಸೋಮವಾರ ಮೃತ ಮಹಿಳೆಯ ಶವವನ್ನು ಮನೆಗೆ ತರಲಾಯಿತು ಆದರೆ ಮಂಗಳವಾರ ಮೃತ ಮಹಿಳೆ ಅನುರಾಧ ರವರ ಮಗಳು ಸ್ಪೂರ್ತಿ ಎಂಬ ಯುವತಿ ಬಿಎಸ್ ಸಿ ಕೃಷಿ ಪದವಿಗೆ ಕೃಷಿ ಕೋಟದಲ್ಲಿ ಪ್ರವೇಶ ಪಡೆಯಲು ಪ್ರಾಯೋಗಿಕ ಪರೀಕ್ಷೆ ಇತ್ತು .ಅಮ್ಮನ ಶವ ಮನೆಯಲ್ಲಿದ್ದರೂ…

Read More

ಹಳೇ ದ್ವೇಷದ ಹಿನ್ನಲೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ !!!???

 ಮೂತ್ರ ವಿಸರ್ಜನೆಗೆಂದು ಹೊರ ಹೋದ ಯುವಕನ ಮೇಲೆ ಕೆಲ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 10 ಗಂಟೆಯ ಆಸುಪಾಸಿನ ಸಮಯದಲ್ಲಿ ನೆಡೆದಿದೆ. ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ  ತಮ್ಮ ಮನೆಯ ಬಳಿ ಕಾಂತರಾಜು (27) ಮನೆಯಿಂದ ಹೊರ ಬಂದು ಮೂತ್ರ ವಿಸರ್ಜನೆ ಮಾಡುವಾಗ ಹಿಂಬದಿಯಿಂದ ಬಂದ ನಾಲ್ಕೈದು ಜನ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಯುವಕ ಅವರ ಬಳಿ ಇದ್ದ ಆಯುಧಗಳನ್ನು  ಕಸಿದುಕೊಂಡು ತಮ್ಮ ಕುಟುಂಬ…

Read More

ಮುಂದುವರಿದ ಭಾರಿ ಮಳೆ : ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ(12-07-2022) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 12ರ ಮಂಗಳವಾರದಂದು ರಜೆ ಘೋಷಿಸಲಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Read More

ತೀರ್ಥಹಳ್ಳಿ ಗಾಂಧಿಚೌಕ್ ನಲ್ಲಿ ದಂಪತಿಗಳ ಹೈಡ್ರಾಮ : ಮಗುವಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಂದೆ ಅರೆಸ್ಟ್

ತೀರ್ಥಹಳ್ಳಿ: ಹುಚ್ಚುತನದ ಪರಮಾವಧಿಯಾಗಿ ಧರ್ಮದ ಅಮಲಿನಲ್ಲಿ ತನ್ನ ಎಳೆಯ ಕಂದಮ್ಮನನ್ನು ಮಳೆಯಲ್ಲಿ ನೆನೆಸುತ್ತಾ ಹುಚ್ಚು ಹುಚ್ಚಾಗಿ ಅರಚುತ್ತಿದ್ದ ತಂದೆಯನ್ನು ಅನುಮಾನದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆತನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಸಣ್ಣ ಮಗುವನ್ನು ಹಿಡಿದುಕೊಂಡು ಮಳೆಯಲ್ಲೇ ಅದನ್ನು ಮೇಲೆತ್ತಿ ಹಾಕುತ್ತ ಹಿಂಸೆ ನೀಡುತ್ತಿರುವ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ಫರ್ನಾಂಡಿಸ್ ಎಂದು ಗುರುತಿಸಿದ್ದು ಈತ ಕಾರಿನ ಮೇಲೆ ವಿವಿಧ ಧರ್ಮದ ಅಮಲಿನಲ್ಲಿ ಬರಹ ಬರೆದು…

Read More

ಮಾಸ್ತಿಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಖಾಸಗಿ ಬಸ್ :

ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್’ಗೆ ಖಾಸಗಿ ಬಸ್ ಗುದ್ದಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು ಮನೆಯ ಮುಂಭಾಗದ ಕಾಂಪೌಡ್ ಪುಡಿಪುಡಿಯಾಗಿವೆ.  ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಹೋಗುತ್ತಿದ್ದ KA 20 ಸಿ 6293 ಸಂಖ್ಯೆಯ ಶ್ರೀ ದುರ್ಗಾಂಬಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೆ ಗುದ್ದಿದೆ. ಹಾನಿಗೊಳಗಾದ…

Read More

ರಿಪ್ಪನ್ ಪೇಟೆ : ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು.  ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ  ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು.     ರಿಪ್ಪನ್ ಪೇಟೆಯಲ್ಲಿ ಮಳೆ ಹಿನ್ನಲೆಯಲ್ಲಿ  ಮೆರವಣಿಗೆಯನ್ನು ಸ್ಥಗಿತಗೊಳಿಸಿ ಗುಂಪು…

Read More

ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಬುಕ್ಕಿವರೆ – ಬೆಳ್ಳೂರು – ರಿಪ್ಪನ್‌ಪೇಟೆ ಮಾರ್ಗಕ್ಕೆ ನೂತನ KSRTC ಬಸ್ ಸೌಲಭ್ಯ : ಕುಗ್ರಾಮದ ಜನರ ಮೊಗದಲ್ಲಿ ಮೂಡಿದ ಸಂತಸ

ರಿಪ್ಪನ್‌ಪೇಟೆ : ಬೆಳ್ಳೂರು-ಬುಕ್ಕಿವರೆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯವು ಪ್ರಾರಂಭವಾಗಿದ್ದು ಎಲ್ಲರ ಮೊಗದಲ್ಲಿ ಮಂದಹಾಸ ತಂದಿದೆ. ಶರಾವತಿ, ಚಕ್ರಾ, ವರಾಹಿ, ಮಾಣಿ, ಮಡೆನೂರು ಡ್ಯಾಂ ನಿರ್ಮಾಣಕ್ಕಾಗಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಮುಳುಗಡೆ ಸಂತ್ರಸ್ತ ಕುಟುಂಬದವರೇ ಹೆಚ್ಚು ವಾಸಿಸುತ್ತಿರುವ ಕುಗ್ರಾಮಗಳಾದ ಬೆಳ್ಳೂರು, ಬುಕ್ಕಿವರೆ, ಚಾಣಬೈಲು, ದೋಬೈಲು, ಮಸ್ಕಾನಿ, ಕಳಸೆ, ಹಾರೋಹಿತ್ತಲು, ಬಸವಾಪುರ, ಕಲ್ಲುಹಳ್ಳ, ಗುಳಿಗುಳಿ ಶಂಕರ, ಗುಬ್ಬಿಗಾ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಮತ್ತು ಶಾಲಾ – ಕಾಲೇಜ್ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರು…

Read More

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಖಡಕ್ ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆ ಹಾನಿ ನಿರ್ವಹಣೆ ಕುರಿತು ಅಗತ್ಯ…

Read More