ಜಿಲ್ಲಾ ಸುದ್ದಿ:
ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ MSIL ಉದ್ಯೋಗಿ ನವೀನ್ ಕುಮಾರ್ ಕುಟುಂಬಕ್ಕೆ 5 ಲಕ್ಷದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ
ರಿಪ್ಪನ್ಪೇಟೆ : ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ ಪಟ್ಟಣದ MSIL ಮದ್ಯ ಮಾರಾಟ ಮಳಿಗೆಯಲ್ಲಿ ADO ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಸಾಳು ನಿವಾಸಿ ನವೀನ್ ಕುಮಾರ್ ರವರ ಕುಟುಂಬಕ್ಕೆ MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ರವರು MSIL ವತಿಯಿಂದ 5 ಲಕ್ಷ ರೂ ಪರಿಹಾರ ಧನದ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು. ಇತ್ತೀಚೆಗೆ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ…
ಹಿಂದೂ ಹರ್ಷನ ಸಹೋದರಿ ಅಶ್ವಿನಿ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು??? ಈ ಸುದ್ದಿ ನೋಡಿ
ನ್ಯಾಯ ಕೇಳಲು ಹೋದರೆ, ಗೃಹ ಸಚಿವರು ಬೈದು ಕಳಿಸಿದ್ದಾರೆ ಎನ್ನುವ ಹರ್ಷ ಸಹೋದರಿ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅವರು ಏನೇನೋ ಮಾತನಾಡಿದ್ರು, ಆ ರೀತಿ ಮಾತನಾಡಿದ್ರೆ ನಾವೇನು ಮಾಡೋಣ ಎಂದು ಸಚಿವರು ಪ್ರಶ್ನಿಸಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅರಗ ಜ್ಞಾನೇಂದ್ರ, ರಾಜು ನನ್ನ ಅತ್ಯಂತ ಆಪ್ತ ಮಿತ್ರ ಎಂದು ಮೊದಲು ಹೇಳಿದರು. ಈ ವೇಳೆ ಪತ್ರಕರ್ತರು ರಾಜು ಅಲ್ಲ ಹರ್ಷ ಎಂದು ನೆನಪಿಸಿದ್ದು, ಈ ವೇಳೆ ಸಚಿವರು, ಸಾರಿ ಹರ್ಷ ನನ್ನ…
ಮುಂದುವರಿದ ಭಾರಿ ಮಳೆ : ಹೊಸನಗರ, ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ :
ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 8ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ
ರಿಪ್ಪನ್ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…
MSIL ರಾಯಭಾರಿಯಾಗಿ ಆಯ್ಕೆಯಾದ ರಾಷ್ಟ್ರೀಯ ಹಾಕಿ ಕ್ರೀಡಾಪಟು ರಿಪ್ಪನ್ಪೇಟೆಯ ಪೂಜಿತಗೌಡ : 5 ಲಕ್ಷದ ಚೆಕ್ ವಿತರಿಸಿದ ಹರತಾಳು ಹಾಲಪ್ಪ
ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪ್ರತಿಭಾನ್ವಿತ ಕ್ರೀಡಾ ತಾರೆ ಪೂಜಿತ ಗೌಡ 5 ವರ್ಷಕ್ಕೆ ಕರ್ನಾಟಕ ಎಂಎಸ್ ಐಎಲ್ ಸಂಸ್ಥೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಕ್ರೀಡಾ ಪ್ರತಿಭೆ ಪೂಜಿತ ಗೌಡ ರವರಿಗೆ ಎಂಎಸ್ ಐ ಎಲ್ ವತಿಯಿಂದ ಚೆಕ್ ವಿತರಿಸಿದರು. ನಂತರ ಮಾತನಾಡಿದ ಶಾಸಕರು ಗ್ರಾಮೀಣ ಭಾಗದ ಹಾಕಿ ಪ್ರತಿಭೆಯೊಬ್ಬಳು ರಾಷ್ಟ್ರ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶನ…
ಮುಂದುವರೆದ ಭಾರಿ ಮಳೆ : ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ :
ಮಲೆನಾಡಿನಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ(07-07-2022) ಸಹ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಸಶಕ್ತವಾದ ಸ್ವಾಭಿಮಾನಿ ಸಮಾಜ ನಿರ್ಮಿಸಬಹುದು : ಸೀಮಾ ಕಿರಣ್
ರಿಪ್ಪನ್ಪೇಟೆ : ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ, ಹೆಣ್ಣು ಮಕ್ಕಳು ಮನಸ್ಸು ಮಾಡಿ ನಿಂತರೆ ಸಾಕು ಸಶಕ್ತವಾದ ಸಧೃಡ ಸ್ವಾಭಿಮಾನಿ ಸಮಾಜವನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ ಎಂದು ಜೆಸಿಐ ಅಧ್ಯಕ್ಷೆ ಸೀಮಾ ಕಿರಣ್ ಹೇಳಿದರು ಅವರು ಪಟ್ಟಣದ ಶ್ರೀ ರಾಮ ಸಭಾ ಭವನ ಮಹಿಳೆಯರು ನೂತನವಾಗಿ ಆರಂಭಿಸಿದ ಹೊಸನಗರ ತಾಲೂಕ್ ರೈಸ್ ಅಂಡ್ ಶೈನ್ ಬ್ಯೂಟಿಷಿಯನ್ ಅಸೋಶಿಯೇಷನ್ ಸಂಘವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮನೆ, ಕುಟುಂಬ ಸೇರಿದಂತೆ ಇಡೀ ಸಮಾಜವನ್ನು ಸಶಕ್ತವಾಗಿ ಸದೃಡವಾಗಿ ಮುನ್ನಡೆಸುವ ಶಕ್ತಿಯು ಹೆಣ್ಣು…
ಭಾರಿ ಮಳೆಯ ಹಿನ್ನಲೆ ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ :
ಮಲೆನಾಡಿನಾದ್ಯಂತ ಮಳೆ ಅಬ್ಬರಿಸುತ್ತಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಕವಲೆದುರ್ಗ ಗ್ರಾಮದ ಕೆರೆಯಲ್ಲಿ ಯುವಕನ ಶವ ಪತ್ತೆ !!! ಸಾವಿನ ಸುತ್ತ ಅನುಮಾನದ ಹುತ್ತ!!!!????
ತೀರ್ಥಹಳ್ಳಿ: ಸಹಕಾರಿ ಕ್ಷೇತ್ರದ ನಾಯಕ ಕಟ್ಟೆಗದ್ದೆ ಹಾಲಪ್ಪ ಅವರ ಪುತ್ರ ಆಕರ್ಷ ರಾಜ್ ಅವರ ಶವ ಮಂಗಳವಾರ ತಾಲೂಕಿನ ಕವಲೇದುರ್ಗ ಕೆರೆಯಲ್ಲಿ ಪತ್ತೆಯಾಗಿದೆ. ಭಾನುವಾರ ರಾತ್ರಿಯಿಂದ ಕಾಣೆಯಾಗಿದ್ದ ಬಿಇ ಪದವೀಧರ ಕಟ್ಟೆಗದ್ದೆ ಆಕರ್ಷ ರಾಜ್ (26) ಮೃತದೇಹ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುರ್ಗಾ ಕ್ರಾಸ್ ಸಮೀಪದ ಕೆರೆಯಲ್ಲಿ ಮುಂಜಾನೆ ಪತ್ತೆಯಾಗಿದ್ದು ಇದೀಗ ಹಲವು ಅನುಮಾನ ವ್ಯಕ್ತವಾಗುತ್ತಿದೆ. ಗುತ್ತಿಗೆದಾರರಾಗಿದ್ದ ಆಕರ್ಷ ರಾಜ್ ಬೆಂಗಳೂರಿನಲ್ಲಿ ಬಿಇ ಪದವಿ ಪಡೆದಿದ್ದರು. ಭಾನುವಾರ ಸಂಜೆ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವಲೇದುರ್ಗ…
ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ನೀಡಿ ಯುವ ಸಮಾಜಕ್ಕೆ ಪ್ರೇರಣೆಯಾದ ಕಾಲೇಜಿನ ಯುವತಿ :
ರಿಪ್ಪನ್ಪೇಟೆ : ದಾನ ಮಾಡುವವರಿಗೆ ಇಂತಹದೇ ಎಂಬ ನಿಯಮವೇನು ಇಲ್ಲ ಯಾವುದಾದರೇನು ಕೊಡುವ ಮನಸ್ಸು ಇದ್ದರೆ ಏನು ಬೇಕಾದರೂ ಕೊಡಬಹುದು ಎಂಬುದಕ್ಕೆ ಇಲ್ಲಿನ ಶಬರೀಶ್ ನಗರದ ನಿವಾಸಿ ಕುಮಾರಿ ಚಂದನ ಜಿ.ನಾಯಕ್ ಮಾದರಿಯಾಗಿದ್ದಾಳೆ. ಕಣ್ಣು-ರಕ್ತ – ವಸ್ತ-ಅನ್ನದಾನ-ವಿದ್ಯಾದಾನ ಗೋ ದಾನ, ಧನ ದಾನ ಹೀಗೆ ಹತ್ತು ಹಲವು ವಿಧದಲ್ಲಿ ದಾನ ಮಾಡುವುದನ್ನು ನಾವು ಕೇಳಿರುತ್ತೇವೆ ಅದರೆ ಇಲ್ಲಿನ ಯುವತಿಯೊಬ್ಬಳು ತನ್ನ ಕೇಶವನ್ನು ಕ್ಯಾನ್ಸರ್ ರೋಗಿಗಳಿಗೆ ನೀಡಿ ಧೈರ್ಯ ತುಂಬುವ ಕೆಲಸ ಮಾಡಿದ್ದಾಳೆ. ಕ್ಯಾನ್ಸರ್ ರೋಗಿಗಳಿಗೆ ಮಾರಕ ರೋಗದ…