ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆಯ ನೂತನ ಹೈಟೆಕ್ ಶೌಚಾಲಯ ಲೋಕಾರ್ಪಣೆ :
ರಿಪ್ಪನ್ಪೇಟೆ: ಪಟ್ಟಣದ ವಿನಾಯಕ ವೃತ್ತದ ಸಮೀಪ ಸ್ಥಳೀಯ ಗ್ರಾಮಾಡಳಿತ ನೂತನವಾಗಿ ನಿರ್ಮಿಸಿರುವ ಸಮುದಾಯ ಶೌಚಾಲಯವನ್ನು ಗುರುವಾರ ಗ್ರಾಪಂ ಅಧ್ಯಕ್ಷರಾದ ಮಂಜುಳ ಕೇತಾರ್ಜಿ ರಾವ್ ರವರು ಸರಳ ಸಮಾರಂಭದ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಮಂಜುಳ ಕೇತಾರ್ಜಿ ರಾವ್ ದುರಸ್ಥಿಯಾಗಿದ್ದ ಹಳೆಯ ಶೌಚಾಲಯವನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಯೋಜನೆಯನ್ನು ಗ್ರಾಮ ಪಂಚಾಯತಿ ಕೈಗೆತ್ತಿಕೊಂಡ ಸಂದರ್ಭದಲ್ಲಿ ಅನೇಕ ಅಡೆತಡೆಗಳು ಎದುರಾದವು ಎಂದರು. ಗ್ರಾಮ ಪಂಚಾಯತಿಯ 15 ಲಕ್ಷ ರೂ. ಅನುದಾನದಲ್ಲಿ ಶೌಚಾಲಯವು ನಿರ್ಮಾಣಗೊಂಡಿದ್ದು, ಮಹಿಳೆ…
ಕಿಡ್ನಿ ಸಂಬಂಧಿತ ಚಿಕಿತ್ಸೆಗಾಗಿ ಶಿವಮೊಗ್ಗದ ವಿದ್ಯಾರ್ಥಿನಿಯನ್ನು ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ :
ಭದ್ರಾವತಿಯ18 ವರ್ಷದ ರಾಧಿಕ ಎಂಬ ವಿದ್ಯಾರ್ಥಿನಿಗೆ ತುರ್ತು ಲಿವರ್ ಕಸಿ ಅವಶ್ಯಕತೆ ಇದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಜೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು. ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಮೂರು ಖಾಸಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈ ಮೊದಲು ಭದ್ರಾವತಿಯ ನಿರ್ಮಲ ಆಸ್ಪತ್ರೆಗೆ ರಾಧಿಕಾರನ್ನ ಸೇರಿಸಲಾಗಿತ್ತು. ರಕ್ತ ಪರೀಕ್ಷೆ ನಡೆಸಿದ ನಂತರ ಯುವತಿಯ ಖಾಯಿಲೆ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಐದು ದಿನದ ನಂತರ…
ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!
ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ…
ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್
ರಿಪ್ಪನ್ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು . ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ …
ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್
ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್ನಲ್ಲಿರುವ ಚೋರ್ಬಜಾರ್ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್ ಅಡಿಯಲ್ಲಿ ಕೇಸ್ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…
ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ
ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….
ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ – ಬಿ ವೈ ರಾಘವೇಂದ್ರ
ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಬಗ್ಗೆ ಕೆಲವು ನಾಯಕರು ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜಕಾರಣ ಮಾಡಲು ಬೇರೆ ವಿಚಾರಗಳಿದೆ. ಅದನ್ನೆಲ್ಲ ಬಿಟ್ಟು ಅಲ್ಲಿ ಆರ್ ಎಸ್ ಎಸ್ ಅನ್ನು ಎಳೆಯುವಂತಹದ್ದು ಸರಿಯಲ್ಲ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ತೀರ್ಥಹಳ್ಳಿಯಲ್ಲಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ ಆರ್ ಎಸ್ ಎಸ್ ಎಂಬುದು ದೇಶಕ್ಕೋಸ್ಕರ, ಹಿಂದೂ ರಾಷ್ಟ್ರಕ್ಕೊಸ್ಕರ…
ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ KSRTC ಬಸ್ಸುಗಳು ಸಂಚರಿಸುತ್ತಿಲ್ಲವೇಕೆ…?? ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ…???ಖಾಸಗಿ ಬಸ್ ಮಾಲೀಕರುಗಳ ಹುನ್ನಾರವೇ…..?
ರಿಪ್ಪನ್ ಪೇಟೆ: ರಾಜ್ಯ ಹೆದ್ದಾರಿ 1ರ ಆನಂದಪುರ ದಿಂದ ತೀರ್ಥಹಳ್ಳಿ ಮಾರ್ಗದಲ್ಲಿ ಒಂದೇ ಒಂದು ಕೆಎಸ್ಆರ್ಟಿಸಿ ಬಸ್ಸುಗಳು ಸಂಚರಿಸುತ್ತಿಲ್ಲ. ಇದಕ್ಕೆ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ. ಖಾಸಗಿ ಬಸ್ ಮಾಲೀಕರುಗಳ ಹುನ್ನಾರವೇ ಕಾರಣವೇ ಎಂಬ ಯಕ್ಷಪ್ರಶ್ನೆ ಸಾರ್ವಜನಿಕರಲ್ಲಿ ಉಂಟುಮಾಡಿದೆ. ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಸಾರ್ವಜನಿಕರು ವಿವಿಧ ಉದ್ಯೋಗ ನಿಮಿತ್ತ ದಿನನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಈ ಮಾರ್ಗದಲ್ಲಿ ಮುಂದೆ ಒಂದು ಕೆ ಎಸ್ ಆರ್ ಟಿ ಸಿ ಬಸ್…
ಮಲೆನಾಡಿನಲ್ಲಿ ಸ್ಯಾಟಲೈಟ್ ಪೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ : ಆರಗ ಜ್ಞಾನೇಂದ್ರ
ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆ ಕೈಗೊಂಡಿದ್ದಾರೆ. “ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ…
ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ್ ಪರಿಷತ್ ಗೆ ನಿವೇಶನ ಮಂಜೂರು ಮಾಡಿಸಿಕೊಡುವಂತೆ ಶಾಸಕ ಹಾಲಪ್ಪ ರವರಿಗೆ ಮನವಿ :
ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪನವರಿಗೆ ಮನವಿ ಸಲ್ಲಿಸಲಾಯಿತು. ಇಂದು ಪ್ರವಾಸಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ವೀರಶೈವ ಲಿಂಗಾಯತ ಪರಿಷತ್ ನ ಅಧ್ಯಕ್ಷರಾದ ಆನಂದ್ ಮೆಣಸೆ ರವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರಾದ ಹರತಾಳು ಹಾಲಪ್ಪ ವೀರಶೈವ ಲಿಂಗಾಯತ ಸಮಾಜವು ಎಲ್ಲ ಕ್ಷೇತ್ರದಲ್ಲಿ ಮುಂದುವರಿದಿದ್ದು ತಾಲ್ಲೂಕಿನಲ್ಲಿ ಪ್ರಸ್ತುತ ಅವಶ್ಯಕತೆಯನ್ನು ಅಷ್ಟೆ ಚಿಂತಿಸುವುದಲ್ಲದೆ ಮುಂದಿನ ಐವತ್ತು ವರ್ಷಗಳಿಗೆ…