Headlines

ಒಂದೇ ಮಳೆಗೆ ಬಯಲಾಯಿತು 50ಲಕ್ಷ ರೂ ಮೌಲ್ಯದ ಕಾಂಕ್ರೀಟ್ ರಸ್ತೆಯ ಕಳಪೆ ಕಾಮಗಾರಿ : ಸಿಡಿದೆದ್ದ ಗ್ರಾಮಸ್ಥರು

 ಕೆಲ ತಿಂಗಳ ಹಿಂದೆ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ತೀರಾ ಕಳಪೆಯಾಗಿದ್ದು ಒಂದೇ ಮಳೆಗೆ ಜಲ್ಲಿ ಕಿತ್ತು ಬರುತ್ತಿದೆ ಎಂದು ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ-ಕೊಳವಂಕ ಗ್ರಾಮಸ್ಥರು ಆರೋಪಿಸಿದ್ದಾರೆ.  ಶರಾವತಿ ಮುಳುಗಡೆ ಸಂತ್ರಸ್ಥರೆ ಹೆಚ್ಚಿರುವ ಕೊಳವಂಕ- ಬಸವಾಪುರ ಸಂಪರ್ಕ ರಸ್ತೆ ನಿರ್ಮಿಸುವಂತೆ ಸುಮಾರು 30 ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಕೊಳವಂಕ – ಬಸವಾಪುರ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವರ್ಷಗಳ ಹಿಂದೆ 50 ಲಕ್ಷಕ್ಕೂ ಹೆಚ್ಚು ಹಣ ಮಂಜೂರಾಗಿತ್ತು. ಮಲೆನಾಡಿಗರ…

Read More

ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ…

Read More

ಶಿವಮೊಗ್ಗ ಜಿಲ್ಲೆಯ ಬಿಜೆಪಿಯಲ್ಲಿ ಈ ಬಾರಿ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗುವುದಿಲ್ಲ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಮೂವರು ಅಪ್ಪಂದಿರರಿಗೆ ಟಿಕೇಟ್ ಸಿಗೊಲ್ಲವೆಂಬ ಮಾಹಿತಿ ಇದೆ. ಇದರಲ್ಲಿ ಎರಡು ಅಪ್ಪಂದಿರರಾದ ಈಶ್ವರಪ್ಪ ಮತ್ತು ಯಡಿಯೂರಪ್ಪನವರಿಗೆ ಟಿಕೇಟ್ ನೀಡೊಲ್ಲವೆಂಬ ಮಾಹಿತಿ ಮೊದಲೇ ಇತ್ತು. ಆದರೆ ಮೂರನೇ ಅಪ್ಪ ಬಹುಶಃ ಹಾಲಪ್ಪ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರ ನಿರ್ಗಮನಕ್ಕೆ ಈಶ್ವರಪ್ಪ, ಸಂತೋಷ್ ಮತ್ತು ಸಿಟಿ ರವಿ ಕಾರಣವೆಂದು ತಿರುಗೇಟು ನೀಡಿದರು.‌ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರನ್ನ ದೋಷ ಮುಕ್ತಗೊಳಿಸಿರುವುದು ನಗೆಪಾಟಿಗೆ ಒಳಗಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ಗುಡುಗಿದ್ದಾರೆ. ಸಂತೋಷ್…

Read More

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

 ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ। ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ.  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ…

Read More

26 ಸಾವಿರ ಮೌಲ್ಯದ ಮರ ಮುಟ್ಟುಗಳನ್ನು 1ಕೋಟಿ ರೂಪಾಯಿಗೆ ಹರಾಜು ಕೂಗಿದ ಜನಪರ ಹೋರಾಟಗಾರ…..!!!!? ತಬ್ಬಿಬ್ಬಾದ ಅಧಿಕಾರಿಗಳು….

ರಿಪ್ಪನ್ ಪೇಟೆ : ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ 26 ಸಾವಿರ ಮೌಲ್ಯದ ಹಳೆ ಕಟ್ಟಡದ ಸಾಮಗ್ರಿಗಳಾದ ಮರ ಮುಟ್ಟು ಗಳನ್ನು ಹರಾಜಿನಲ್ಲಿ 1 ಕೋಟಿ ರೂಪಾಯಿಗೆ ಹರಾಜು ಕರೆದ ಪ್ರಸಂಗ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಹಳೆ ನಾಟಕ್ಕೆ ಸರ್ಕಾರಿ ಮೌಲ್ಯ 26,388 ನಿಗದಿ ಮಾಡಿತ್ತು.ಇಂದು ಹರಾಜು ಪ್ರಕ್ರಿಯೆಯಲ್ಲಿ ಮೊದಲು 2 ಸಾವಿರದಿಂದ ಹರಾಜು ಪ್ರಾರಂಭವಾಗಿ ಹರಾಜುದಾರರು 4 ಸಾವಿರ ಎಂದು ಕೂಗುತಿದ್ದಾಗ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ…

Read More

ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ಯಡಿಯೂರಪ್ಪ :

 ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಪುತ್ರ ವಿಜಯೇಂದ್ರ ಅವರು ಚುನಾವಣಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಬದಲು ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕು ಎಂದು ಇಲ್ಲಿನ ಮತದಾರರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿಯೂ ವಿಜಯೇಂದ್ರ…

Read More

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ  ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ…

Read More

ನಾಳೆ (21-07-2022) ರಿಪ್ಪನ್‌ಪೇಟೆಯಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮ

ರಿಪ್ಪನ್‌ಪೇಟೆ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ನಾಳೆ (21-07-2022)ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ಜಿ ಎಸ್ ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು,ಕರ್ನಾಟಕ ಜನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿಪ್ಪನ್‌ಪೇಟೆ ಹೋಬಳಿ ಸಮಿತಿ ವತಿಯಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಂತವೇರಿ ಗೋಪಾಲಗೌಡರ ಒಡನಾಡಿಗಳು ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಗೋಪಾಲಗೌಡರ ಒಡನಾಡಿಗಳಾದ ಬಿ ಆರ್ ಜಯಂತ್…

Read More

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರಿಗೆ ಕ್ಲೀನ್ ಚೀಟ್ ಸಿಕ್ಕ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಾನು ಮೊದಲೇ ಹೇಳಿದ್ದೆ ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಗೆದ್ದು ಬರುತ್ತೇನೆ ಎಂದಿದ್ದೆ. ಇದೀಗ ಹಾಗೆ ಆಗಿದೆ. ದೇವರು ನನ್ನ ಪರವಾಗಿರುವುದಕ್ಕೆ ಸಂತೋಷವಾಗಿದೆ ಎಂದರು. ನನ್ನಿಂದಾಗಿ ನನ್ನ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗಿತ್ತಲ್ಲ ಎಂಬ ನೋವಿತ್ತು. ಏನೂ ತಪ್ಪು ಮಾಡದ…

Read More

ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮರು ತನಿಖೆ ನಡೆಸುವಂತೆ ಆಗ್ರಹ

ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿಯೊಬ್ಬರ ಮೇಲೆ ಹಿರಿಯ ವೈದ್ಯರೊಬ್ಬರಿಂದ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ಈ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಪೀಪಲ್ಸ್ ಲಾಯರ್ ಗಿಲ್ಡ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕಳೆದ ಶುಕ್ರವಾರ ಅಂದರೆ ದಿನಾಂಕ:15-07-2022 ರಂದು ಸಿಮ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಹಿರಿಯ ಶಸ್ತ್ರ ಚಿಕಿತ್ಸೆ ವೈದ್ಯರಾದ ಆಶ್ವಿನ್ ಹೆಬ್ಬಾರ್, ಎಂಬುವರಿಂದ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಉತ್ತರಭಾರತೀಯ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸಿಮ್ಸ್  ನಿರ್ದೇಶಕರಿಗೆ ಲಿಖಿತ ದೂರನ್ನು…

Read More