Headlines

ತುಂಗಾ ನದಿಗೆ ಬಾಗಿನ ಅರ್ಪಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ತೀರ್ಥಹಳ್ಳಿಯ ಪವಿತ್ರ ತುಂಗಾ ನದಿಯ ನೀರು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ಗುರುವಾರ ಸಂಜೆ ರಾಜ್ಯ ಸರ್ಕಾರದ ಗೃಹಸಚಿವರು, ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ  ಬಾಗಿನ ಅರ್ಪಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಮಳೆ ಎಷ್ಟು ಬೇಕಾದರೂ ಬರಲಿ, ನದಿ ಉಕ್ಕಿ ಹರಿಯಲಿ ಅದು ಸಮೃದ್ಧಿಯ ಸಂಕೇತ ಆದರೆ ಎಲ್ಲೂ ಕೂಡ ಹನಿಯಾಗದ ರೀತಿಯಲ್ಲಿ ಕಾಪಾಡು ಎಂದು ರಾಮೇಶ್ವರನಲ್ಲಿ ಬೇಡಿ ಬಾಗಿನ ಅರ್ಪಿಸಿದ್ದೇವೆ…

Read More

ಸಾಗರದಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ : ಪೊಲೀಸರು ಸಾಗರ ಶಾಸಕರ ಕೈಗೊಂಬೆಯಾಗಿದ್ದಾರೆ : ಬೇಳೂರು ಗೋಪಾಲಕೃಷ್ಣ

 ಮಾರ್ಚ್17 ರಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಯಲ್ಲಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸದ ಕ್ರಮ ಖಂಡಿಸಿ ಗುರುವಾರ ಬ್ರಾಹ್ಮಣ ವೀರಶೈವ ಒಕ್ಕೂಟದ ವತಿಯಿಂದ ಡಿವೈಎಸ್‌ಪಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಂಡಿಎಫ್‌ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡ ಶ್ರೀಪಾದ ಹೆಗಡೆ…

Read More

ಹೊಸನಗರ ತಾಲೂಕಿನಾದ್ಯಂತ ನಾಳೆ(14-07-2022) ಶಾಲೆಗಳಿಗೆ ರಜೆ ಘೋಷಣೆ :

ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ (14-07-2022)ರಂದು ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ.ಮತ್ತೊಮ್ಮೆ ಪರಿಸ್ಥಿತಿ ಪರಿಶೀಲಿಸಿ ತಹಶೀಲ್ದಾರ್,ಹೊಸನಗರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಮತದೊಂದಿಗೆ ಇಡೀ ಹೊಸನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ _14-07-2022 ರಂದು ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಮೊದಲು ನಗರ ಹೋಬಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ಇನ್ನುಳಿದ ಹೋಬಳಿಗಳ ಪೋಷಕರ ಒತ್ತಡ ಹಾಗೂ ಮಳೆಯ…

Read More

ಹೊಸನಗರ ತಾಲೂಕಿನ ನಗರ ಹೋಬಳಿಯ ಶಾಲೆಗಳಿಗೆ ಮಾತ್ರ ರಜೆ : ಸಾಗರ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ : ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಪತ್ತೆ

ಹೊಸನಗರ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತ ದೃಷ್ಟಿಯಿಂದ ನಾಳೆ ಗುರುವಾರ ದಿನಾಂಕ 14/07/2022 ರಂದು ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರವರು ತಿಳಿಸಿದ್ದಾರೆ.  (ಹೆಚ್ ಆರ್ ಕೃಷ್ಣಮೂರ್ತಿ BEO ಹೊಸನಗರ) ತಾಲ್ಲೂಕಿನ ಇತರೆ 3 ಹೋಬಳಿಗಳಲ್ಲಿ ಎಡಬಿಡದೆ ಸುರಿಯುತ್ತಿರುವ  ಮಳೆಯಿಂದ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತಿದ್ದಲ್ಲಿ ಅಂತಹ ಮಕ್ಕಳ ಪೋಷಕರಿಗೆ ಶಾಲೆಗೆ ಮಕ್ಕಳನ್ನು ಕಳಿಸಿವುದು ಬೇಡವೆಂದು ತಿಳಿಸುವುದು. …

Read More

ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ

ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ  ಗುರು ಪೂರ್ಣಿಮೆಯ ಪ್ರಯುಕ್ತ  ಆಯೋಜಿಸಲಾಗಿದ್ದ  ಧಾರ್ಮಿಕ ಸಮಾರಂಭದ  ಸಾನಿಧ್ಯ ವಹಿಸಿ ಆಶೀರ್ವಚನ  ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…

Read More

ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್‌ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….

Read More

ಗರ್ತಿಕೆರೆ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ : ರಿಪ್ಪನ್‌ಪೇಟೆ – ತೀರ್ಥಹಳ್ಳಿ ಮಾರ್ಗ ಬಂದ್!!!!

ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾಮಳೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಅನೇಕ ಅನಾಹುತಗಳು ಸಂಭವಿಸುತ್ತಿವೆ. ಗರ್ತಿಕೆರೆ ಬಳಿಯ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೃಹತ್ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೋಣಂದೂರು – ರಿಪ್ಪನ್‌ಪೇಟೆ ಸಂಪರ್ಕ ಕಡಿತಗೊಂಡಿದೆ‌. ಬದಲಿ ಮಾರ್ಗವಾಗಿ ಹೆದ್ದಾರಿಪುರ – ಬಿದರಹಳ್ಳಿ ಮಾರ್ಗವಾಗಿ ಗರ್ತಿಕೆರೆ ಮೂಲಕ ವಾಹನಗಳು ಸಂಚರಿಸುತ್ತಿದ್ದು ಈ ಮಾರ್ಗವು ಕಿರಿದಾಗಿರುವ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಅಮೃತ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರ…

Read More

ಅಕ್ರಮ ಗಾಂಜಾ ಬೆಳೆ ಪತ್ತೆ ಹಚ್ಚಿ ಸರ್ಕಾರಕ್ಕೆ ಎಚ್ಚರಿಸಿದ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ನಗರ ಪ್ರದೇಶಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಸ್ಥಳವನ್ನು ಗುರುತಿಸಿ ಅಪರಾಧಿಗಳನ್ನ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಕಣ್ಣು ಮುಚ್ಚಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಎಚ್ಚರಿಸುವ ಕೆಲಸ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾಡಿದ್ದಾರೆ. ಹೌದು, ಕೇವಲ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಬೆಳೆಗಳ ನಡುವೆ ಗೌಪ್ಯವಾಗಿ ಬೆಳೆಯುತ್ತಿರುವ ಮತ್ತು ಮಾರಾಟ ಮಾಡುವ ವಿಷಯ ಕೇಳಲಾಗುತ್ತಿತ್ತು. ಆದರೀಗ ಇದು ನಗರ ಪ್ರದೇಶದವರೆಗೂ ಹಬ್ಬಿರುವುದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ತೆಹಚ್ಚಿದ್ದಾರೆ. ಬೆಂಗಳೂರಿನ ಆರ್ ಟಿ ನಗರದ…

Read More

ತಾಯಿಯ ಮೃತದೇಹ ಮನೆಯಲ್ಲಿ : ಶವ ಸಂಸ್ಕಾರ ಮುಂದೂಡಿ ಪರೀಕ್ಷೆ ಬರೆದ ಮಗಳು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಸಮೀಪದ ಶಾಂತಪುರ ಗ್ರಾಮದ ನಾಗರಾಜ್ ಎಂಬುವರ ಪತ್ನಿ ಅನುರಾಧ (45) ಎಂಬ ಮಹಿಳೆ ಸೋಮವಾರ ತೀವ್ರ ರಕ್ತದೊತ್ತಡದಿಂದ ಅನಾರೋಗ್ಯಕ್ಕೆ ತುತ್ತಾಗಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.  ಸೋಮವಾರ ಮೃತ ಮಹಿಳೆಯ ಶವವನ್ನು ಮನೆಗೆ ತರಲಾಯಿತು ಆದರೆ ಮಂಗಳವಾರ ಮೃತ ಮಹಿಳೆ ಅನುರಾಧ ರವರ ಮಗಳು ಸ್ಪೂರ್ತಿ ಎಂಬ ಯುವತಿ ಬಿಎಸ್ ಸಿ ಕೃಷಿ ಪದವಿಗೆ ಕೃಷಿ ಕೋಟದಲ್ಲಿ ಪ್ರವೇಶ ಪಡೆಯಲು ಪ್ರಾಯೋಗಿಕ ಪರೀಕ್ಷೆ ಇತ್ತು .ಅಮ್ಮನ ಶವ ಮನೆಯಲ್ಲಿದ್ದರೂ…

Read More

ಹಳೇ ದ್ವೇಷದ ಹಿನ್ನಲೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ !!!???

 ಮೂತ್ರ ವಿಸರ್ಜನೆಗೆಂದು ಹೊರ ಹೋದ ಯುವಕನ ಮೇಲೆ ಕೆಲ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 10 ಗಂಟೆಯ ಆಸುಪಾಸಿನ ಸಮಯದಲ್ಲಿ ನೆಡೆದಿದೆ. ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ  ತಮ್ಮ ಮನೆಯ ಬಳಿ ಕಾಂತರಾಜು (27) ಮನೆಯಿಂದ ಹೊರ ಬಂದು ಮೂತ್ರ ವಿಸರ್ಜನೆ ಮಾಡುವಾಗ ಹಿಂಬದಿಯಿಂದ ಬಂದ ನಾಲ್ಕೈದು ಜನ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಯುವಕ ಅವರ ಬಳಿ ಇದ್ದ ಆಯುಧಗಳನ್ನು  ಕಸಿದುಕೊಂಡು ತಮ್ಮ ಕುಟುಂಬ…

Read More