ಜಿಲ್ಲಾ ಸುದ್ದಿ:
ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :
ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…
ರಿಪ್ಪನ್ಪೇಟೆಯಲ್ಲಿ ನೂತನ ಕಿರಣ್ ಹೆಲ್ತ್ ಕೇರ್ ಪ್ರಾರಂಭ : ಲಕ್ಷಾಂತರ ಸಂಬಳ ತಿರಸ್ಕರಿಸಿ ಹುಟ್ಟೂರಲ್ಲೇ ಸೇವೆ ಸಲ್ಲಿಸಲು ಮುಂದಾದ MBBS ವೈದ್ಯ
ರಿಪ್ಪನ್ ಪೇಟೆ: ಸಮಾಜದಲ್ಲಿನ ದುರ್ಬಲ ವರ್ಗದವರು ಮತ್ತು ಬಡವರ ಉತ್ತಮ ಆರೋಗ್ಯಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಿದ್ದೇನೆ ಎಂದು ಡಾ. ಕಿರಣ್ ಶಾಸ್ತ್ರಿ ಹೇಳಿದರು. ರಿಪ್ಪನ್ ಪೇಟೆ ಪಟ್ಟಣ ವಿನಾಯಕ ವೃತ್ತದಲ್ಲಿ ನೂತನವಾಗಿ ಆರಂಭವಾಗಿರುವ ಕಿರಣ್ ಶಾಸ್ತ್ರಿ ಹೆಲ್ತ್ ಕೇರ್ ನಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ವೈದ್ಯಕೀಯ ವೃತ್ತಿಯು ಸಮಾಜದಲ್ಲಿ ಗೌರವಾನ್ವಿತ ವೃತ್ತಿಯಾಗಿದ್ದು, ಸಮಾಜದಲ್ಲಿನ ನಾಗರಿಕರಿಗೆ ಉತ್ತಮ ಆರೋಗ್ಯದ ಅರಿವನ್ನು ಮೂಡಿಸಲು ಈ ವೃತ್ತಿ ಸಹಕಾರಿಯಾಗಿದೆ ಎಂದ ಅವರು ರಿಪ್ಪನ್ ಪೇಟೆ…
ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :
ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…
ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಬಾಲಕನ ಮನೆಗೆ ಬೇಳೂರು ಭೇಟಿ :
ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು. ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು….
ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲ್ಲಲು ಸಿದ್ದರಾಮಯ್ಯನವರ ಕಾಣಿಕೆಯೂ ಇದೆ : ಕೆ ಎಸ್ ಈಶ್ವರಪ್ಪ
ಶಿವಮೊಗ್ಗ: ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಮೂವರ ಗೆಲುವು ಸಾಧಿಸಿದ್ದಾರೆ. ಮೋದಿ ಅವರಿಗೆ ರಾಜ್ಯ ನಿಮ್ಮ ಜೊತೆ ಇದೆ ಎನ್ನುವ ಸಂದೇಶ ಈ ಫಲಿತಾಂಶದಿಂದ ರವಾನೆಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ರಾಜ್ಯಸಭೆ ಚುನಾವಣಾ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೂರನೇ ಅಭ್ಯರ್ಥಿ ಗೆಲ್ಲಲ್ಲು ಸಿದ್ದರಾಮಯ್ಯ ಪಾತ್ರ ಪ್ರಮುಖವಾಗಿದೆ. ಮೂರನೇ ಅಭ್ಯರ್ಥಿ ಗೆಲ್ಲಲು ಕಾಂಗ್ರೆಸ್ ನೇರ ಕಾರಣ. ಈ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಪಕ್ಷವನ್ನು ಯಾರೂ…
ಶಿವಮೊಗ್ಗದಲ್ಲಿ ಪ್ರಾರಂಭವಾಗದ ಆಯುಷ್ ವಿಶ್ವವಿದ್ಯಾಲಯ : ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಖಂಡನೆ
ಶಿವಮೊಗ್ಗ ನಗರದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಮಂಜೂರು ಮಾಡಿದ್ದು, ದಿನಾಂಕ: 17-022022ರಂದು ರಾಜ್ಯಪತ್ರದಲ್ಲಿ ಮಂಜೂರಾತಿ ಆದೇಶ ಪ್ರಕಟವಾಗಿದ್ದು, ಹಲವು ತಿಂಗಳು ಕಳೆದರೂ ಆಯುಷ್ ವಿವಿ ಪ್ರಾರಂಭವಾಗದೇ ಇರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ಸಮೀಪದ ಸೋಗಾನೆಯಲ್ಲಿ ಅಂದಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಶಿಫಾರಸ್ಸಿನ ಮೇರೆಗೆ…
ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.
ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…
ಸಾಗರ ನಗರಸಭೆ ವಿರುದ್ದ ಪ್ರತಿಭಟನೆ ನಡೆಸಿದ್ದ ಹೋರಾಟಗಾರನಿಗೆ ಪೌರಕಾರ್ಮಿಕ ಸಂಘದ ಅಧ್ಯಕ್ಷರಿಂದ ಧಮ್ಕಿ : ಆಡಿಯೋ ವೈರಲ್
ಸಾಗರ: ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ವೈಖರಿಯನ್ನು ಖಂಡಿಸಿ ಬುಧವಾರ ನಗರಸಭಾ ಕಾಂಗ್ರೆಸ್ ಸದಸ್ಯೆ ಮಧುಮಾಲತಿ ಪೌರಾಯುಕ್ತರ ಕೊಠಡಿ ಎದುರು ಏಕಾಂಗಿ ಧರಣಿ ನಡೆಸಿ, ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ್ದರು ಈ ಸಂಧರ್ಭದಲ್ಲಿ ಅವರಿಗೆ ಬೆಂಬಲಿಸಿದ ಹೋರಾಟಗಾರ ಅನ್ವರ್ ಭಾಷಾ ರವರಿಗೆ ನಗರಸಭೆ ಪೌರ ಕಾರ್ಮಿಕ ಸಂಘದ ಅಧ್ಯಕ್ಷರಾದ ನಾಗರಾಜ್ ರವರು ಕರೆ ಮಾಡಿ ಧಮ್ಕಿ ಹಾಕಿದ್ದಾರೆ ಎನ್ನುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏಕೋ ಏನೋ ಇತ್ತೀಚೆಗೆ ಸಾಗರ ನಗರಸಭೆ ಜಿಲ್ಲೆಯಲ್ಲಿ…
ರಿಪ್ಪನ್ಪೇಟೆಯ ನೂತನ ಹೈಟೆಕ್ ಶೌಚಾಲಯ ಲೋಕಾರ್ಪಣೆ :
ರಿಪ್ಪನ್ಪೇಟೆ: ಪಟ್ಟಣದ ವಿನಾಯಕ ವೃತ್ತದ ಸಮೀಪ ಸ್ಥಳೀಯ ಗ್ರಾಮಾಡಳಿತ ನೂತನವಾಗಿ ನಿರ್ಮಿಸಿರುವ ಸಮುದಾಯ ಶೌಚಾಲಯವನ್ನು ಗುರುವಾರ ಗ್ರಾಪಂ ಅಧ್ಯಕ್ಷರಾದ ಮಂಜುಳ ಕೇತಾರ್ಜಿ ರಾವ್ ರವರು ಸರಳ ಸಮಾರಂಭದ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಮಂಜುಳ ಕೇತಾರ್ಜಿ ರಾವ್ ದುರಸ್ಥಿಯಾಗಿದ್ದ ಹಳೆಯ ಶೌಚಾಲಯವನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಯೋಜನೆಯನ್ನು ಗ್ರಾಮ ಪಂಚಾಯತಿ ಕೈಗೆತ್ತಿಕೊಂಡ ಸಂದರ್ಭದಲ್ಲಿ ಅನೇಕ ಅಡೆತಡೆಗಳು ಎದುರಾದವು ಎಂದರು. ಗ್ರಾಮ ಪಂಚಾಯತಿಯ 15 ಲಕ್ಷ ರೂ. ಅನುದಾನದಲ್ಲಿ ಶೌಚಾಲಯವು ನಿರ್ಮಾಣಗೊಂಡಿದ್ದು, ಮಹಿಳೆ…
ಕಿಡ್ನಿ ಸಂಬಂಧಿತ ಚಿಕಿತ್ಸೆಗಾಗಿ ಶಿವಮೊಗ್ಗದ ವಿದ್ಯಾರ್ಥಿನಿಯನ್ನು ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ :
ಭದ್ರಾವತಿಯ18 ವರ್ಷದ ರಾಧಿಕ ಎಂಬ ವಿದ್ಯಾರ್ಥಿನಿಗೆ ತುರ್ತು ಲಿವರ್ ಕಸಿ ಅವಶ್ಯಕತೆ ಇದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಜೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು. ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಮೂರು ಖಾಸಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈ ಮೊದಲು ಭದ್ರಾವತಿಯ ನಿರ್ಮಲ ಆಸ್ಪತ್ರೆಗೆ ರಾಧಿಕಾರನ್ನ ಸೇರಿಸಲಾಗಿತ್ತು. ರಕ್ತ ಪರೀಕ್ಷೆ ನಡೆಸಿದ ನಂತರ ಯುವತಿಯ ಖಾಯಿಲೆ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಐದು ದಿನದ ನಂತರ…