Headlines

ತೀರ್ಥಹಳ್ಳಿ ಹೊಸ ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ  ಕಾರ್ಯಗಳನ್ನು ವೀಕ್ಷಿಸಿದರು.  ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು  ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ…

Read More

ರಿಪ್ಪನ್ ಪೇಟೆ ಪಂಚಾಯತ್ ದಿವಸ್ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ : ಗೊಂದಲಗಳ ನಡುವೆ ನಡೆದ ಕಾರ್ಯಕ್ರಮ

ರಿಪ್ಪನ್‌ಪೇಟೆ: ಜನರು ತಮ್ಮ ಕೆಲಸಕಾರ್ಯಗಳಿಗಾಗಿ ಕಛೇರಿಗಳಿಗೆ ಬರುವ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು ಅಸಡ್ಡೆ ತೋರಬಾರದು. ಜನರೇ ಇಲ್ಲದಿದ್ದರೆ ಜನಪ್ರತಿನಿಧಿಗಳ ಅಸ್ಥಿತ್ವವೇ ಇರುತ್ತಿರಲಿಲ್ಲವೆಂಬ ಸತ್ಯ ಮನದಲ್ಲಿಟ್ಟುಕೊಳ್ಳಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗ್ರಾ.ಪಂ. ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಪಂಚಾಯತ್ ರಾಜ್ ದಿವಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮ ಪಂಚಾಯತಿಗಳು ಸ್ಥಳೀಯ ಸರಕಾರವಾಗಿದೆ. ಜನರು ಕೆಲಸವಿಲ್ಲದೆ ಕಛೇರಿಗೆ ಬರುವುದಿಲ್ಲ. ಸುಮ್ಮನೆ ಬರಲು ಸರ್ಕಾರಿ ಕಛೇರಿಗಳು ಅವರ ಮಾವನ ಮನೆಯೂ ಅಲ್ಲ, ಅತ್ತೆ ಮನೆಯೂ ಅಲ್ಲ ಕೆಲಸವಿದ್ದಾಗ ಮಾತ್ರ…

Read More

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More

ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯ : ಶಾಸಕ ಹರತಾಳು ಹಾಲಪ್ಪ

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ. ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು. ಮೋದಿಯವರು ದೇಶದ ಸಮಗ್ರತೆಗಾಗಿ…

Read More

ಮಳೆ ಬಂದಾಗ ಕೆಸರು ಗದ್ದೆಯಂತಾಗುವ ಬೆನವಳ್ಳಿ – ಮಸರೂರು ರಸ್ತೆ : ಜನಪ್ರತಿನಿಧಿಗಳೇ ಇನ್ನಾದರೂ ಇತ್ತ ಗಮನಹರಿಸಿ!!!!!

ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ-ಮಸರೂರು-ಆಚಾಪುರ ಸಂಪರ್ಕದ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ರಸ್ತೆಮಳೆ ಬಂದಾಗ ಕೆಸರು ಗದ್ದೆಯಂತಾಗಿ ಸಾರ್ವಜನಿಕರು ಓಡಾಡದ ಸ್ಥಿತಿ ನಿರ್ಮಾಣವಾಗುತ್ತಿದೆ.  ಬೆನವಳ್ಳಿಯಿಂದ ಮಸರೂರು, ಮಾಣಿಕರೆ, ಹಾಲಬಾವಿ, ಕೆಂಚನಾಲ, ಆಲುವಳ್ಳಿ, ಗಾಳಿಬೈಲು, ವಿರಕ್ತಮಠ, ಕಮದೂರು, ಮಾದಾಪುರ, ಕುರುಬರಜಡ್ಡು, ಲಕ್ಕವಳ್ಳಿ, ಕೆರೆಹಿತ್ತಲು, ಗಿಳಾಲಗುಂಡಿ, ಮುರುಘಾಮಠ ಆಚಾಪುರ ಇಸ್ಲಾಂಪುರ ಅಂದಾಸುರ ಹೀಗೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯ ಸಂಪರ್ಕದ ರಸ್ತೆಯಾಗಿದ್ದು ಈ ರಸ್ತೆಯನ್ನು ಕಳೆದ ಹಲವಾರು ವರ್ಷಗಳಿಂದ ಈ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್. ಸಿ ( SC) ಕಾಲೋನಿಯಲ್ಲಿ ಗೊಚ್ಚೆ ಗುಂಡಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಇದ್ದು  ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಲಿ ಎಂಬ ವರದಿಯನ್ನು ಮಂಗಳವಾರ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು. ವರದಿಯಾದ 24 ಗಂಟೆಯೊಳಗೆ ಕೊಚ್ಚೆ ಗುಂಡಿಯಲ್ಲಿ ಇದ್ದ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ”ಯನ್ನು ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.  ಜನರ ಆರೋಗ್ಯದ…

Read More

ಪಿಎಫ಼್ ಐ & ಎಸ್ ಡಿಪಿಐ ನಿಷೇದಕ್ಕೆ ಎಲ್ಲಾ ತಯಾರಿ ನಡೆದಿದೆ : ಶಿಕ್ಷಣ ಸಚಿವ ಡಾ| ಅಶ್ವತ್ ನಾರಾಯಣ್

ಶಿವಮೊಗ್ಗ: ಪಿಎಫ್‌ಐ, ಎಸ್‌ ಡಿಪಿಐ ಸಂಘಟನೆ ನಿಷೇಧ ಮಾಡುವ ದಿಕ್ಕಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ನಡೆದಿದೆ. ಅದಕ್ಕೆ ಬೇಕಾದ ಪೂರ್ವಭಾವಿ ತಯಾರಿ, ದಾಖಲೆಗಳ ಸಂಗ್ರಹ ಆಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ್ ನಾರಾಯಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ, ಎಸ್‌ಡಿಪಿಐ ಸಂಸ್ಥೆಗಳು ಸಮಾಜದಲ್ಲಿ ಸಾಕಷ್ಟು ಗೊಂದಲ ನಿರ್ಮಾಣ ಮಾಡ್ತಿವೆ. ಈ ಬಗ್ಗೆ ಮೇಲ್ನೋಟಕ್ಕೆ ಹೇಳಿಕೆ ಕೊಡೋದಲ್ಲ. ಕಾಂಗ್ರೆಸ್‌ ಸರಕಾರವಿದ್ದಾಗ ಅವರ ಬದ್ಧತೆ ಏನಿತ್ತು. ಅಧಿಕಾರದಲ್ಲಿ ಇದ್ದಾಗ ಅವರ ಮೇಲಿದ್ದ ಕೇಸ್‌ ಹಿಂಪಡೆದು ಈಗ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More

ಶಾಂತ ರೀತಿಯಲ್ಲಿದ್ದ ಕರ್ನಾಟಕದಲ್ಲಿ ಗಲಭೆ,ದೊಂಬಿ ಎಬ್ಬಿಸುವ ಷಡ್ಯಂತ್ರ ನಡೆಯುತ್ತಿದೆ,ಇದು ಖಂಡನಾರ್ಹ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

 ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋಧಿಸುವ ಹೇಳಿಕೆ‌ ಕೊಡುತ್ತಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ,…

Read More