ಜಿಲ್ಲಾ ಸುದ್ದಿ:
ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ : ಎರಡು ದಿನ ಉಚಿತ ವೀಕ್ಷಣೆಗೆ ವ್ಯವಸ್ಥೆ
ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಪುತ್ರ ಕೆ.ಇ.ಕಾಂತೇಶ್ ಅವರು ‘ದಿ ಕಾಶ್ಮೀರ ಫೈಲ್ಸ್’ ಉಚಿತ ವೀಕ್ಷಣೆಗೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಉಚಿತ ವ್ಯವಸ್ಥೆ ಮಾಡಿದ್ದು, ಹೆಚ್ಚಿನ ಸಂಖ್ಯೆಯ ಜನ ಸಿನಿಮಾ ನೋಡಿದ್ದಾರೆ. ಸಚಿವ ಈಶ್ವರಪ್ಪ ಅವರು ಪತ್ನಿ ಹಾಗೂ ಕುಟುಂಬ ಸಹಿತ ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಕುಂಚಿಟಿಗರ ಸಂಸ್ಥಾನದ ಸ್ವಾಮೀಜಿ ಅವರೊಂದಿಗೆ…
ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್
ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ ಹೊಸನಗರದ ಸಾರ್ವಜನಿಕರು ಪಿಎಸ್ ಐ ಮೇಲೆ ಇರುವ ಆರೋಪಕ್ಕೆ ಎಳೆ ಎಳೆಯಾಗಿ ಉತ್ತರ ನೀಡಿದ್ದಾರೆ. ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಯಾಕಿಷ್ಟು ಧ್ವೇಷ ಎಂದೂ ಕೆದಕುತ್ತಾ ಹೊರಟರೇ ಕೊನೆಗೆ ಸಿಗುವುದೇ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಫ಼ಿಯಾ!!! ಹೌದು ರಾಜೇಂದ್ರನಾಯ್ಕ್ ಕರ್ತವ್ಯಕ್ಕೆ ಬಂದ ನಂತರದ ದಿನಗಳಿಂದ ಮರಳು…
ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು
ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…
ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ…
ರಿಪ್ಪನ್ ಪೇಟೆ ಸುತ್ತಮುತ್ತ ನಿರಂತರ ಕಾಡಾನೆ ದಾಳಿ, ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ :
ರಿಪ್ಪನ್ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿಕುಳಿತಂತಿದೆ. ಅರಸಾಳು ಹಾಗೂ ಹೆದ್ದಾರಿಪುರ ಗ್ರಾಮ ಪಂಚಾಯತ್ನಿ ವ್ಯಾಪ್ತಿಯ ಕಾನಗೋಡು ತಮ್ಮಡಿಕೊಪ್ಪ ಹಾರಂಬಳ್ಳಿ ಬಾಳೆಕೊಡ್ಲು, ಕಾರೆಹೊಂಡ, ಕಗಚಿ, ತಳಲೆ, ಸುಳಕೋಡು ಗ್ರಾಮದ ರೈತರ ಜಮೀನಿಗೆ ನಿರಂತರ ದಾಳಿಯಿಡುತ್ತಿದೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಕಬ್ಬು ಬೆಳೆಗಳನ್ನು ಮುರಿದು ತಿಂದು ನಷ್ಟಮಾಡುತ್ತಿದೆ. ಈ ಭಾಗದಲ್ಲಿ ಆನೆ ಬೀಡುಬಿಟ್ಟಿರುವ ಮಾಹಿತಿಯಿದ್ದರೂ ಅರಣ್ಯ ಇಲಾಖೆ ಮಾತ್ರ ರಾತ್ರಿ ಗಸ್ತು…
ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರಿಂದ ದಿಡೀರ್ ಪ್ರತಿಭಟನೆ :
ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಯಲದಲ್ಲಿ ಮೂಲಭೂತ ಸೌಕರ್ಯದ ಕೊರತೆಯನ್ನ ವಿರೋಧಿಸಿ ಹಾಗೂ ಮೊನ್ನೆ ವಿದ್ಯಾರ್ಥಿನಿಯರಿಗೆ ಫುಡ್ ಪಾಯಸನ್ ಆಗಿರುವುದಕ್ಕೆ ಇಲ್ಲಿನ ಅವ್ಯವಸ್ಥೆಯೇ ಕಾರಣವೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿನಿಯರು ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಪ್ರತಿಭಟಜನೆ ನಡೆಸಿದರು. ಶೌಚಾಲಯ ಸ್ವಚ್ಚವಿಲ್ಲದೇ ಇರುವುದು, ಒಂದು ಕೊಠಡಿಯಲ್ಲಿ 11 ಜನ ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳಲು ಅವಕಾಶ ನೀಡಿರುವುದು. ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು ಈ ದಿಡೀರ್ಪ್ರತಿಭಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಪ್ರತಿಭಟನೆಯಲ್ಲಿ ಸಹ್ಯಾದ್ರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಅವ್ಯವಸ್ಥೆಯನ್ನ…
ಶಿವಮೊಗ್ಗದ ಮೊದಲ ಎಫ್.ಎಂ ರೇಡಿಯೋ ಆರಂಭ; ಉತ್ತಮ ಸ್ಪಂದನೆ
ದಶಕದಿಂದ ಮಲೆನಾಡಿಗೊಂದು ಎಫ್.ಎಂ. ರೇಡಿಯೋ ಬೇಕು ಎಂಬ ಬೇಡಿಕೆ ಇತ್ತು. ಜನರ ಬೇಡಿಕೆ ತಣಿಸುವ ಸಲುವಾಗಿ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಕೊಡುಗೆಯಾಗಿ ಸಿಕ್ಕಿದೆ. ಸದ್ಯ ಎಫ್.ಎಂ. ರೇಡಿಯೋ ಟೆಸ್ಟಿಂಗ್ ಹಂತದಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡುವ ಸಾಧ್ಯತೆ ಇದೆ. ಕೊಡಚಾದ್ರಿ ಇಂಟಿಗ್ರೇಟೆಡ್ ಡೆವಲಪ್ಮೆಂಟ್ ಸೊಸೈಟಿ ಎಂಬ ಸರ್ಕಾರೇತರ ಸಂಸ್ಥೆ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಆರಂಭಿಸಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಈ ರೇಡಿಯೋಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈಗ ಬೆಳಗ್ಗೆ 9…
ಮಗನಿಗಾಗಿ ಮತ್ತೆ ಜೊತೆಯಾದ ತಂದೆ-ತಾಯಿ
ವಿಚ್ಚೇದನ ಪಡೆಯಲು ಮುಂದಾಗಿದ್ದ ತಂದೆ ಮತ್ತು ತಾಯಿಯನ್ನು ಅವರ 10ನೇ ತರಗತಿಯ ಮಗ ಒಂದು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗೆ ಜಿಲ್ಲೆ ಹೊಸನಗರ ತಾಲೂಕಿನ ಕಡೆಗದ್ದೆಯ ನಿವಾಸಿಗಳಾದ ಗಣೇಶಮೂರ್ತಿ ಮತ್ತು ಪೂರ್ಣಿಮಾ ದಂಪತಿ 17 ವರ್ಷಗಳ ಕಾಲ ಸುಖವಾಗಿ ಸಂಸಾರ ನಡೆಸಿದ್ದರು.ಸಣ್ಣದಾದ ಮನಸ್ತಾಪದಿಂದಾಗಿ ಮೂರು ವರ್ಷದ ಹಿಂದೆ ತವರು ಸೇರಿದ್ದ ಪೂರ್ಣಿಮಾ ಮರಳಿ ಗಂಡನ ಮನೆಗೆ ಬಂದಿರಲಿಲ್ಲ. ಕಳೆದ ಮೂರು ವರ್ಷಗಳಿಂದ ದೂರ ಇದ್ದ ದಂಪತಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇತ್ತ…
ಅಕಾಲಿಕ ಮರಣಕ್ಕೆ ತುತ್ತಾದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಪಟು : ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಆರ್ಥಿಕ ನೆರವು
ರಿಪ್ಪನ್ ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಭರತ್ ರಾಜ್ (ಬೆಳ್ಳಿ) ಎಂಬ ಬಾಲಕ 21-10-2021 ರಂದು ಹಾರಂಬಳ್ಳಿ ಮನೆಯ ಸಮೀಪ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟಿದ್ದನು. ಇಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಮೃತ ಭರತ್ ರಾಜ್ ರವರ ತಾಯಿ ಶ್ರೀಮತಿ ಲಕ್ಷ್ಮಿ ವಾಸುದೇವ ರವರಿಗೆ ಪ್ರಕೃತಿ ವಿಕೋಪ ನಿಧಿಯಿಂದ ಮಂಜೂರಾದ 5 ಲಕ್ಷ ರೂ ಗಳ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಇಂದು…
ಸಂಘದ ಬಾಕಿ ಹಣ ಕೇಳಲು ಹೋದ ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು
ರಿಪ್ಪನ್ ಪೇಟೆ : ಸಂಘದ ಬಾಕಿ ಹಣ ಕೇಳಲು ಹೋದ ಸಂಘದ ಮಹಿಳೆಯರ ಮೇಲೆಯೇ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಘಟನೆ ಕಮದೂರು ಗ್ರಾಮದಲ್ಲಿ ನಡೆದಿದೆ. ಕಮದೂರು ಗ್ರಾಮದ ಭಾಗಿರಥಮ್ಮ ಎಂಬುವವರು ಶ್ರೀ ರೇಣುಕಾಂಬ ಸಂಘ ಆಲುವಳ್ಳಿ ಯ ಸದಸ್ಯೆಯಾಗಿದ್ದು ಸಾಲ ಪಡೆದಿರುತ್ತಾರೆ.ಕಳೆದ ಹಲವಾರು ದಿನಗಳಿಂದ ಸಾಲ ಮರು ಪಾವತಿ ಮಾಡುತ್ತಿಲ್ಲವೆಂದು ಸಂಘದ ಎಲ್ಲಾ ಸದಸ್ಯರು ಅವರ ಮನೆಗೆ ಸಾಲ ವಸೂಲಿಗೆ ಹೋಗಿದ್ದಾರೆ.ಈ ಸಂಧರ್ಭದಲ್ಲಿ ಭಾಗಿರಥಮ್ಮ ರವರ ಮಗ ಸತೀಶ್ ಎಂಬುವವನು ಸಾಲ ವಸೂಲಿಗೆ ಹೋಗಿದ್ದ…