ಜಿಲ್ಲಾ ಸುದ್ದಿ:
ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ
ರಿಪ್ಪನ್ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ ಮುಕ್ತಿ ನೀಡದಿದ್ದಲ್ಲಿ ಮೂಗುಡ್ತಿ ವನ್ಯಜೀವಿ ವಲಯ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರೊಂದಿಗೆ ಮಾಜಿ ಸಚಿವರು ಅರಣ್ಯಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಗೆ ಆಗಮಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳಿಂದ ಆನೆ ಹಿಮ್ಮೆಟ್ಟಿಸುವ…
ಸಾಗರದ ಎಲ್ಬಿ ಕಾಲೇಜಿನಲ್ಲಿ ಶಿಮುಲ್ ಅಧ್ಯಕ್ಷ ಶ್ರೀಪಾದ್ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ
ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ. ಶಿಮುಲ್ ಅಧ್ಯಕ್ಷರಾದ ಶ್ರೀಪಾದ್ ಹೆಗೆಡೆ ರವರು ಎಲ್ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್ಬಿ ಕಾಲೇಜಿನಲ್ಲಿ ಜನರಲ್ ಬಾಡಿ ಮೀಟಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…
ಶಿವಮೊಗ್ಗದಲ್ಲಿ ಮುಸ್ಲಿಂ ಸಂಘಟನೆಗಳು ಕರೆಕೊಟ್ಟಿದ್ದ ಒಕ್ಕೂಟ ಬಂದ್ ಬಹುತೇಕ ಯಶಸ್ವಿ :
ಮುಸ್ಲಿಂ ಸಂಘಟನೆಗಳ ಒಕ್ಕೂಟ ಇಂದು ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಮುಸ್ಲಿಂ ಅಂಗಡಿ ಮತ್ತು ಮಳಿಗೆಗಳು ಬಹುತೇಕ ಬಂದ್ ಮಾಡಲಾಗಿದೆ. ಹಿಜಬ್ ಬೆಂಬಲಿಸಿ ಕರೆಯಲಾದ ಬಂದ್ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲಾಗಿತ್ತು. ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿತ್ತು. ಶಿವಮೊಗ್ಗದಲ್ಲಿಯೂ ಸಹ 19 ಮುಸ್ಲಿಂ ಸಂಘನೆಗಳು ಬಂದ್ ನಡೆಸಲು ತೀರ್ಮಾನಿಸಿತ್ತು. ತೀರ್ಮಾನದಂತೆ ಹಲವಾರು ಉದ್ಯಮಗಳ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಗೈರು ಹಾಜರಿದ್ದರು. ಅಮೀರ್ ಅಹ್ಮದ್ ವೃತ್ತ, ಓಟಿ ರಸ್ತೆ ಕೆ.ಆರ್ ಪುರಂ,…
ಲವ್ ಜಿಹಾದ್ ಗೆ ಬಲಿಯಾದ ಗೃಹಿಣಿ | ಕುಟುಂಬಸ್ಥರ ಆರೋಪ
ಶಿವಮೊಗ್ಗ: ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. 19 ವರ್ಷದ ಗೃಹಿಣಿ ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು ಮೃತ ದುರ್ದೈವಿ. ಜಿಲ್ಲೆಯ ಸೊರಬದ ನಿವಾಸಿಯಾಗಿದ್ದ ಭೂಮಿಕಾ ಅಂತರ್ ಧರ್ಮೀಯನನ್ನು ಪ್ರೀತಿಸಿ ವಿವಾಹವಾಗಿದ್ದರು. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವರಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ…
ನಿರಂತರ ಕಾಡಾನೆ ಹಾವಳಿಗೆ ಸ್ಪಂದಿಸದ ಅರಣ್ಯಾಧಿಕಾರಿಗಳ ವಿರುದ್ದ ನಾಳೆ ಮೂಗೂಡ್ತಿ ಕಛೇರಿ ಎದುರು ರೈತರ ಪ್ರತಿಭಟನೆ : ಕಿಮ್ಮನೆ,ಬೇಳೂರು,ಆರ್ ಎಂಎಂ ಸೇರಿದಂತೆ ಅನೇಕರು ಭಾಗಿ
ರಿಪ್ಪನ್ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಂತಿದೆ.ಇದರಿಂದ ಆಕ್ರೋಶಗೊಂಡಿರುವ ರೈತರು ನಾಳೆ ಬೆಳಿಗ್ಗೆ 10 ಗಂಟೆಗೆ ಮೂಗೂಡ್ತಿ ಅರಣ್ಯ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಸಭೆಗೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಆರ್ ಎಂ ಮಂಜುನಾಥ್ ಗೌಡ ಸೇರಿದಂತೆ ಅನೇಕ ಮುಖಂಡರು ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರಾದ ಗ್ರಾಪಂ ಸದಸ್ಯ…
ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಜೀವ ಭಯ ಬಿಟ್ಟು ಪೆಟ್ರೋಲ್ ತುಂಬಿಸಿಕೊಳ್ಳಲು ಜನರಿಂದ ನೂಕುನುಗ್ಗಲು
ಶಿವಮೊಗ್ಗ: ಜಾವಳ್ಳಿ ಸಮೀಪದಲ್ಲಿ ಇಂದು ಮದ್ಯಾಹ್ನ ಪೆಟ್ರೋಲ್ ತುಂಬಿದ ಟ್ಯಾಂಕರ್ವೊಂದು ಪಲ್ಟಿಯಾಗಿರುವ ಘಟನೆ ವರದಿಯಾಗಿದೆ. ಜಾವಳ್ಳಿ ಅರಬಿಂದೂ ಶಾಲೆಯ ಸಮೀಪ ಸೊಲ್ಲಾಪುರ ಮತ್ತು ಮಂಗಳೂರು ಹೈವೆ ರಸ್ತೆಯಲ್ಲಿ ಸಾಗುತ್ತಿದ್ದ ಪೆಟ್ರೋಲ್ ತುಂಬಿದ ಲಾರಿಯೊದು ಪಕ್ಕಕ್ಕೆ ಉರುಳಿ ಬಿದ್ದಿದೆ. ಮಂಗಳೂರಿನಿಂದ 12½ ಸಾವಿರ ಲೀಟರ್ ಪೆಟ್ರೋಲ್ ನ್ನ ಹೊತ್ತು ಹೋಗುತ್ತಿದ್ದ ಲಾರಿ ರಸ್ತೆಗೆ ಉರುಳಿದೆ. ಅಕ್ಕಪಕ್ಕದ ಜನ ಕೊಡಪಾನ ಬಕೆಟ್ ನಲ್ಲಿ ತುಂಬಿಸಿಕೊಂಡು ಹೋಗಿರುವಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಪೊಲೀಸರು ಬಂದು ಸಾರ್ವಜನಿಕರನ್ನ ಚದುರಿಸಿದ್ದಾರೆ. ಟ್ಯಾಂಕರ್ ಪಲ್ಟಿಯಾದ ಸಮಯದಲ್ಲಿ ಜನರು…
ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ : ಎರಡು ದಿನ ಉಚಿತ ವೀಕ್ಷಣೆಗೆ ವ್ಯವಸ್ಥೆ
ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಪುತ್ರ ಕೆ.ಇ.ಕಾಂತೇಶ್ ಅವರು ‘ದಿ ಕಾಶ್ಮೀರ ಫೈಲ್ಸ್’ ಉಚಿತ ವೀಕ್ಷಣೆಗೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಉಚಿತ ವ್ಯವಸ್ಥೆ ಮಾಡಿದ್ದು, ಹೆಚ್ಚಿನ ಸಂಖ್ಯೆಯ ಜನ ಸಿನಿಮಾ ನೋಡಿದ್ದಾರೆ. ಸಚಿವ ಈಶ್ವರಪ್ಪ ಅವರು ಪತ್ನಿ ಹಾಗೂ ಕುಟುಂಬ ಸಹಿತ ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಕುಂಚಿಟಿಗರ ಸಂಸ್ಥಾನದ ಸ್ವಾಮೀಜಿ ಅವರೊಂದಿಗೆ…
ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳ ಹಿಂದಿದೆಯಾ ಮರಳು ಮಾಫ಼ಿಯಾ?????? ಪಿಎಸ್ ಐ ಪರವಾಗಿ ಹೊಸ ವೀಡಿಯೋ ವೈರಲ್
ಹೊಸನಗರ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಇತ್ತೀಚೆಗೆ ಹೊಸನಗರ ಪಟ್ಟಣದ ನಾಗರೀಕರು ಮಾಡಿದ್ದ ವೀಡಿಯೋ ಗೆ ವಿರುದ್ದವಾಗಿ ಇಂದು ಕೆಲವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದು ಮಾತನಾಡಿರುವ ಹೊಸನಗರದ ಸಾರ್ವಜನಿಕರು ಪಿಎಸ್ ಐ ಮೇಲೆ ಇರುವ ಆರೋಪಕ್ಕೆ ಎಳೆ ಎಳೆಯಾಗಿ ಉತ್ತರ ನೀಡಿದ್ದಾರೆ. ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಯಾಕಿಷ್ಟು ಧ್ವೇಷ ಎಂದೂ ಕೆದಕುತ್ತಾ ಹೊರಟರೇ ಕೊನೆಗೆ ಸಿಗುವುದೇ ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಮಾಫ಼ಿಯಾ!!! ಹೌದು ರಾಜೇಂದ್ರನಾಯ್ಕ್ ಕರ್ತವ್ಯಕ್ಕೆ ಬಂದ ನಂತರದ ದಿನಗಳಿಂದ ಮರಳು…
ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು
ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್…
ನಾಳೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ : ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ…