ಜಿಲ್ಲಾ ಸುದ್ದಿ:
ಹೊಸನಗರ ಜೆಸಿಐ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ “ಹೇರ್ ಡೊನೇಷನ್” ಕಾರ್ಯಕ್ರಮ
ಹೊಸನಗರ:- ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಜೆಸಿಐ ಹೊಸನಗರ ಕೊಡಚಾದ್ರಿಯ ಅಧ್ಯಕ್ಷರು ಸೀಮಾಕಿರಣ್ ಸೆರಾವ್ ರವರ ನೇತೃತ್ವದಲ್ಲಿ ಹೇರ್ ಡೊನೇಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜೆಸಿಐ ಹೊಸನಗರ ಕೊಡಚಾದ್ರಿ, ಜೆಸಿ ಸದಸ್ಯರು ಮತ್ತು ಪದಾಧಿಕಾರಿಗಳು ಮತ್ತು ಕುಟುಂಬದವರು ಮತ್ತು ಬೆಂಗಳೂರಿನಿಂದ ಹೇರ್ ಡೋನೆಷನ್ ಟ್ರಸ್ಟ್ ನವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಡಾ!ಚಡಗ ಕಾಂಪ್ಲೆಕ್ಸ್ ಸಿಯಂಟೋ ಬ್ಯೂಟಿ ಸಲೂನ್ ನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಜೆಸಿಐ ಕೊಡಚಾದ್ರಿ ಹೊಸನಗರ ಅಧ್ಯಕ್ಷರಾದ ಸೀಮಾ ಕಿರಣ್ ಮತ್ತು ಅವರ ಮಗಳಾದ ಅರ್ಚನಾ…
ಕನ್ನಡ ಭಾಷೆ-ಸಂಸ್ಕೃತಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು : ಡಿ ಮಂಜುನಾಥ್
ಹೊಸನಗರ : ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಲು-ಬೆಳೆಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಂದು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಐದು ವರ್ಷಗಳ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ lಮಾತನಾಡಿದರು.ಕನ್ನಡ ಭಾಷೆ ಪ್ರಪಂಚದ ಅನೇಕ ಪ್ರಚಲಿತ ಭಾಷೆಗಳಲ್ಲಿ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದೆ. ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಹಾಗೂ ಪ್ರಪಂಚದ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಗೌರವ…
ತರಗತಿಯಲ್ಲಿ ಹಿಜಾಬ್ ಧರಿಸಿ ವಿಧ್ಯಾರ್ಥಿನಿಯರು ಹಾಜರ್ : ಸಿಹಿ ಹಂಚಿ, ಹಿಜಾಬ್ ಗೆ ಅಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು
ರಿಪ್ಪನ್ಪೇಟೆ: ಶಾಸಕ ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಬಿಜೆಪಿ ಕಾರ್ಯಕರ್ತರು ಶ್ರೀಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸಿಹಿ ವಿತರಿಸುವ ಸಂದರ್ಭದಲ್ಲಿ ಹಿಜಾಬ್ಗೆ ಆಕ್ಷೇಪವ್ಯಕ್ತ ಪಡಿಸಿರುವ ಘಟನೆ ಇಂದು ನಡೆದಿದೆ. ವಿಶೇಷ ಪೂಜೆಯ ನಂತರ ಪಕ್ಕದ ಸರ್ಕಾರಿ ಶಾಲೆಗೆ ತೆರೆಳಿದ ಬಿಜೆಪಿ ಮುಖಂಡರ ತಂಡ ತರಗತಿಯ ಒಳಗಡೆ ಮಕ್ಕಳಿಗೆ ಸಿಹಿ ಹಂಚುವ ಸಮಯದಲ್ಲಿ ಕೆಲವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವುದು ಗಮನಿಸಿದ್ದಾರೆ. ಅಸಮಧಾನಗೊಂಡ ಮುಖಂಡರು ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡು…
ಸಾಗರದ ಗಣಪತಿ ಕೆರೆಯಲ್ಲಿ ನೀರುನಾಯಿ ಪ್ರತ್ಯಕ್ಷ :
ಸಾಗರದ ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಮತ್ತೆ ನೀರುನಾಯಿ ಹಿಂಡು ಪ್ರತ್ಯಕ್ಷವಾಗಿದೆ. ಜೊಂಡು ತೆಗೆದು ಸ್ವಚ್ಛವಾಗಿರುವ ಕೆರೆಯಲ್ಲಿ ಕಳೆದ ವರ್ಷವೂ ಇವು ಕಂಡುಬಂದಿದ್ದವು. ಶರಾವತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾಧ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ. ಗುಂಪು ಗುಂಪಾಗಿ ವಾಸಿಸುವ ನೀರು…
ಶಾಸಕ ಹರತಾಳು ಹಾಲಪ್ಪ ಜನ್ಮ ದಿನದ ಪ್ರಯುಕ್ತ ರಿಪ್ಪನ್ ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ :
ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಇಡೀ ಕ್ಷೇತ್ರದ ಮನೆ ಮಾತಾಗಿರುವ ರಾಜಕಾರಣಿ. ಇಂದು ಹರತಾಳು ಹಾಲಪ್ಪ ರವರ ಜನ್ಮ ದಿನದ ಪ್ರಯುಕ್ತ, ಕೆರೆಹಳ್ಳಿ ಹೋಬಳಿಯ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ರಿಪ್ಪನಪೇಟೆಯ ಇತಿಹಾಸ ಪ್ರಸಿದ್ದ ಶ್ರೀ ಸಿದ್ದೀವಿನಾಯಕ ದೇವಸ್ಥಾದಲ್ಲಿ ವಿಶೇಷ ಪೂಜೆ ಸಲ್ಲಿಸಿ,ಶಾಸಕರಿಗೆ ಉತ್ತಮ ಆರೋಗ್ಯ, ದೀರ್ಘಯುಷ್ಯ, ಉನ್ನತ ಅಧಿಕಾರ ಹಾಗೂ ಸಾರ್ವಜನಿಕ ಸೇವೆ ಮಾಡಲು…
ಚೆಕ್ ಡ್ಯಾಂ ನಿರ್ಮಾಣದ ವೇಳೆ ಮಣ್ಣಿನೊಂದಿಗೆ ಸ್ಮಶಾನದಲ್ಲಿ ಹೂತಿದ್ದ ಶವಗಳನ್ನೂ ಹಾಕುತ್ತಿರುವ ಆಘಾತಕಾರಿ ಪ್ರಕರಣ ಬೆಳಕಿಗೆ : ವೀಡಿಯೋ ವೈರಲ್
ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದ ಚೆಕ್ ಡ್ಯಾಂ ನಿರ್ಮಾಣದ ವೇಳೆ ಏರಿ ಹೊಯ್ಯಲು ಮಣ್ಣಿನೊಂದಿಗೆ ಸ್ಮಶಾನದಲ್ಲಿ ಹೂತಿದ್ದ ಶವಗಳನ್ನೂ ಹಾಕುತ್ತಿರುವ ಆಘಾತಕಾರಿ ದೃಶ್ಯ ವೈರಲ್ ಆಗಿದೆ. ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹಳೇಮಂಡಿಯ ನೀರು ಶುದ್ಧೀಕರಣ ಘಟಕದ ಸಮೀಪದ ತುಂಗಾ ನದಿಗೆ ಅಡ್ಡಲಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ನಗರಕ್ಕೆ 24 ಗಂಟೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯ ಭಾಗವಾಗಿ ಈ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕಾಗಿ ಮಣ್ಣಿನ…
ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ 25 ಲಕ್ಷ ಪರಿಹಾರದ ಚೆಕ್ ವಿತರಿಸಿದ ಯಡಿಯೂರಪ್ಪ
ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ನಡೆದಿತ್ತು. ಕರ್ನಾಟಕ ಸರ್ಕಾರ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಣೆ ಮಾಡಿತ್ತು.ಇಂದು ಪರಿಹಾರದ ಚೆಕ್ ಹಸ್ತಾಂತರ ಮಾಡಲಾಗಿದೆ. ಭಾನುವಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಮನೆಗೆ ಇಂದು ಭೇಟಿ ನೀಡಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರ್ಕಾರದ ವತಿಯಿಂದ 25 ರೂ. ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿದರು. ಫೆಬ್ರವರಿ 20ರಂದು ರಾತ್ರಿ ಹರ್ಷ ಕೊಲೆಯಾಗಿತ್ತು….
ಸಾಗರದ ಎಲ್ ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ :
ಜೀವರಕ್ಷಣೆಗೆ ಕಾರಣವಾಗುವ ರಕ್ತದಾನದಂತಹ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ರೋಟರಿ ರಕ್ತನಿಧಿ ವೈದ್ಯಾಧಿಕಾರಿಗಳಾದ ಬಿ ಜಿ ಸಂಗಮ್ ಹೇಳಿದರು ನಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ ಜಿ.ಎ.ನಾರಿಬೋಲಿ ಮಹಾವಿದ್ಯಾಲಯ , ಲಯನ್ಸ್ ಕ್ಲಬ್ ಸಾಗರ ಹಾಗೂ ರೋಟರಿ…
ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಒಂದು ವಾರದೊಳಗೆ ಎನ್ಐಎಗೆ ಹಸ್ತಾಂತರ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಹರ್ಷನ ಕೊಲೆ ಪ್ರಕರಣವನ್ನ ಇನ್ನೊಂದು ವಾರದೊಳಗೆ ಎನ್ಐಎ ತನಿಖಾ ತಂಡಕ್ಕೆ ಒಪ್ಪಿಸಲಾಗುವುದು ಎಂದು ಕೃಷಿ ಮತ್ತು ರೈತರ ಕಲ್ಯಾಣ ಕೇಂದ್ರ ಮಂತ್ರಿ ಶೋಭ ಕರದ್ಲಾಂಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳಿಗೆ ಮಾತನಾಡಿ ಹರ್ಷನ ಸಾವು ಕೇವಲ ಕುಟುಂಬಕ್ಕೆ ದುಖ ತಂದಿಲ್ಲ ಬದಲಿಗೆ ಇಡೀ ದೇಶಕ್ಕೆ ನೋವುತಂದಿದೆ ಎಂದರು. ಹರ್ಷನ ಸಾವಿನ ಹಿಂದೆ ಅಂತರಾಷ್ಟ್ರೀಯ ಷಡ್ಯಂತರ ಅಡಗಿದೆ ಎಂಬ ಶಂಕೆ ಇದೆ. ಈ ಹೇಳಿಕೆಯನ್ನ…
ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಥಳಿಸಿ ಕ್ರೌರ್ಯ ಮೆರೆದ ಹೊಸನಗರ ಪಿಎಸ್ ಐ : ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು ??????
ಪೊಲೀಸರು ಮಹಜರ್ ಗೆ ಹೋದಾಗ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಲಾಠಿ ರುಚಿ ತೋರಿಸಿದ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪ ಹತ್ತಿರ ಬಾಣಿಗ ಗ್ರಾಮದಲ್ಲಿ ಘಟನೆಯೊಂದಕ್ಕೆ ಪೊಲೀಸರು ಮಹಜರ್ ಗೆ ಹೋದಾಗ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಮನಸೋಇಚ್ಚೇ ಥಳಿಸಲಾಗಿದೆ ಎನ್ನಲಾಗಿದೆ. ಹೊಸನಗರ ಪಿಎಸ್ ಐ ರಾಜೇಂದ್ರ ಎ ನಾಯ್ಕ್ ಹಾಗೂ ಜೀಪ್ ಚಾಲಕ ಅವಿನಾಶ್ ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಈ…