Headlines

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೊರೊನಾ ಸೋಂಕು : ರಿಪ್ಪನ್ ಪೇಟೆಯ ಸರಕಾರಿ ಪದವಿ ಹಾಗೂ ಪಿಯು ಕಾಲೇಜು ಸೀಲ್ ಡೌನ್……!

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕು ದಂಡಾಧಿಕಾರಿಗಳ ಆದೇಶದ ಮೇರೆಗೆ  ರಿಪ್ಪನ್ ಪೇಟೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಎರಡು ಕಾಲೇಜುಗಳನ್ನು ಸೀಲ್ ಡೌನ್ ಮಾಡಿದ್ದಾರೆ.  ಕಳೆದ ಒಂದು ವಾರದಲ್ಲಿ ಪದವಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ  ಸೋಂಕು  ತಗಲಿದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಸೀಲ್ ಡೌನ್ ಮಾಡಲಾಗಿದೆ….

Read More

ಪಿಯು ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊವೀಡ್ ಸೋಂಕು ಧೃಡ : ಸೋಮವಾರ ಶಾಲೆಗೆ ರಜೆ ಘೋಷಣೆ

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿದ್ದು ಸೋಮವಾರ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ವಾಣಿಜ್ಯ ವಿಭಾಗದ ವಿದ್ಯಾರ್ಥಿಯೊಬ್ಬನಿಗೆ ಗುರುವಾರ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲಾಗಿತ್ತು. ಗುರುವಾರ ರಿಪ್ಪನ್ ಪೇಟೆಯ ಪಿಹೆಚ್ ಸಿ ಯಲ್ಲಿ ಕೊವೀಡ್ ಟೆಸ್ಟಿಂಗ್ ಕಿಟ್ ಕೊರತೆಯ ಹಿನ್ನಲೆಯಲ್ಲಿ ಶುಕ್ರವಾರ ಕೊವೀಡ್ ಪರೀಕ್ಷೆ ನಡೆಸಲಾಗಿತ್ತು. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ…

Read More

ಗವಟೂರು ಹೊಳೆಯ ಒಡಲು ಬಗೆಯುತ್ತಿರುವ ಮರಳು ದಂಧೆಕೋರರು : ಈ ಮಾಫ಼ಿಯಾ ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಸಹಯಕರೋ.. ? ಅಸಮರ್ಥರೋ…?

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಗವಟೂರು ಶ್ರೀ ಸಿದ್ಧೇಶ್ವರ ದೇವಸ್ಥಾನದ ಪಾರ್ಶ್ವದಲ್ಲಿರುವ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಸುವುದು ಅಕ್ರಮ ಮರಳು ದಂಧೆಕೋರರಿಗೆ ದಿನಪ್ರತಿಯ ಕಸುಬಾಗಿದೆ. ಶರ್ಮಣ್ಯಾವತಿ (ಗವಟೂರು ಹೊಳೆ) ನದಿಯಿಂದ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಟ್ಯೂಬ್, ಬಕೇಟ್, ಬುಟ್ಟಿಯನ್ನು ಉಪಯೋಗಿಸಿಕೊಂಡು ಹಗಲು ಹೊತ್ತಿನಲ್ಲಿ ನದಿ ಮಧ್ಯದಿಂದ ಮರಳನ್ನು ತೆಗೆದು ಸಂಗ್ರಹಿಸಿಟ್ಟುಕೊಂಡು ರಾತ್ರಿಯಾಗುತ್ತಿದ್ದಂತೆ ವಾಹನಗಳೊಂದಿಗೆ ಬೇರೆ ಬೇರೆ ತಾಲೂಕುಗಳಿಗೆ ಮರಳು ಸರಬರಾಜು ಮಾಡುವ ವಹಿವಾಟು ನಡೆಸಲಾಗುತ್ತಿದೆ  ಇಲ್ಲಿ…

Read More

ವರದಕ್ಷಿಣೆಗಾಗಿ ಪತ್ನಿಯ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ನಾಲ್ವರ ವಿರುದ್ಧ ಪ್ರಕರಣ ದಾಖಲು

ರಿಪ್ಪನ್ ಪೇಟೆ : ವರದಕ್ಷಿಣೆಗಾಗಿ ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ-ಮಾವ ಸೇರಿದಂತೆ ನಾಲ್ವರ ವಿರುದ್ಧ ಮಹಿಳೆಯೊಬ್ಬರು ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶಂಗೇರಿಯ ವೆಲ್ ಕಮ್ ಗೇಟ್‌ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕಿನ ಹುಂಚ ಹೋಬಳಿಯ ಗ್ರಾಮವೊಂದರ ಸಂತ್ರಸ್ತೆಗೆ ಮತ್ತು ಶೃಂಗೇರಿ ವೆಲೆ ಕಮ್ ಗೇಟ್‌ನ ಸಲ್ಮಾನ್ ಜೊತೆ ವಿವಾಹ…

Read More

ಇಬ್ಬರ ಅಪಪ್ರಚಾರ : ಮೂರು ಜೀವಗಳು ಬಲಿ

ಮಹಿಳೆಯಿಂದ ಲಕ್ಷಾಂತರ ರೂ ಹಣ ಪಡೆದು ಹಣ ವಾಪಾಸ್ ಕೊಡದೆ ಸತಾಯಿಸುತ್ತಿದ್ದವನು ಹಣ ವಾಪಾಸ್ ಪಡೆಯಲು ಬಂದ ಮಹಿಳೆಯ ವಿರುದ್ಧ ಬೇರೆಯವರ ಜೊತೆ ಅನೈತಿಕ ಸಂಬಂಧವಿದೆ ಎಂದು ಅಪಪ್ರಚಾರ ಮಾಡಿದ್ದರ ಪರಿಣಾಮ ಬೇಸತ್ತ ಮಹಿಳೆ ಇಬ್ಬರು ಮಕ್ಕಳೊಂದಿಗೆ  ಭದ್ರಾ ಚಾನೆಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಸಂತೋಷ್ ಅರಹತೊಳಲು ಎಂಬಾತನು ಈ ಹಿಂದೆ ಯಡೇಹಳ್ಳಿ ವೀಣಾ (32) ಎಂಬುವರಿಂದ 8 ಲಕ್ಷ ರೂ.ಹಣ ಸಾಲವಾಗಿ ಪಡೆದಿದ್ದನು. ಹಣ ವಾಪಾಸ್ ಕೇಳಲು ಹೋದ  ಸಂತೋಷ್…

Read More

ಮಾನವಿಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಸಚಿವರು ಇಂದು ಬೆಂಗಳೂರಿನಿಂದ ಬರುತ್ತಿರುವಾಗ ಮಾರ್ಗ ಮಧ್ಯದ ಬಿ ಆರ್ ಪಿಯಲ್ಲಿ  ಮುತ್ತಿನಕೊಪ್ಪದ ದಂಪತಿಗಳು ಮಗುವಿನೊಂದಿಗೆ ಬೈಕ್ ನಲ್ಲಿ ತೆರಳುವಾಗ ಹಸುವಿಗೆ  ಬೈಕ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಗುವಿಗೆ ಗಾಯವಾಗಿತ್ತು. ಅದೇ ಸಂದರ್ಭಕ್ಕೆ ಅದೇ ಮಾರ್ಗದಲ್ಲಿ ಅಲ್ಲಿಗೆ ಬಂದ ಸಚಿವರು ತಮ್ಮ ಬೆಂಗಾವಲು ವಾಹನದಲ್ಲಿ ಬಿ ಆರ್ ಪಿಯ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮಾನವಿಯತೆ ಮೆರೆದಿದ್ದಾರೆ. ಗೃಹ ಸಚಿವರ ಮಾನವೀಯತೆಯ ಕಾರ್ಯಕ್ಕೆ ಸಾಮಾಜಿಕ ಜಾಲಾತಾಣದಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Read More

ಕೋಣಂದೂರಿನ ಬಿಜೆಪಿ ಬೆಂಬಲಿತ ಸದಸ್ಯನ ದೌರ್ಜನ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಸೋಮವಾರ ಪತಿಭಟನೆ : ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ : ಗುರುವಾರ ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿಗ ಸದಸ್ಯ ರವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಗ್ರಾಮ‌ ಪಂಚಾಯತ್ ಸದಸ್ಯತ್ವವನ್ನು  ರದ್ದುಗೊಳಿಸ ಬೇಕೆಂದು ಆಗ್ರಹಿಸಿ ಸೋಮವಾರ ದಿನಾಂಕ 17/01/2022 ರಂದು ಮಾಜಿ ಸಚಿವರಾದ  ಕಿಮ್ಮನೆ ರತ್ನಾಕರ್ ರವರ ನೇತೃತ್ವದಲ್ಲಿ ತಾಲ್ಲೂಕು ತಹಶಿಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ತಿಳಿಸಿದ್ದಾರೆ.             (…

Read More

ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ : ಇಬ್ಬರು ಆಸ್ಪತ್ರೆಗೆ ದಾಖಲು

ಕೋಣಂದೂರು : ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೆಳಿಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದ್ದು, ಇಬ್ಬರೂ ಆಸ್ಪತ್ರೆ ದಾಖಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿತ  ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.  ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್…

Read More

ರಿಪ್ಪನ್ ಪೇಟೆಯ ಕಾಲೇಜುಗಳಿಗೆ ವಕ್ಕರಿಸಿರುವ ಮಹಮಾರಿ ಕೊರೊನಾ : ಇಂದು ಸಹ ಒಬ್ಬ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಧೃಡ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಈ ಕಾಲೇಜಿನಲ್ಲಿ ಸುಮಾರು 605 ವಿದ್ಯಾರ್ಥಿಗಳು ಇದ್ದಾರೆ. ಕಳೆದ ಮೂರು ದಿನಗಳ ಹಿಂದೆ ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದ ಕಾರಣ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿ ಕೊಡಲಾಗಿದೆ,ಹಾಗೂ ಕಾಲೇಜನ್ನು ಸಂಪೂರ್ಣವಾಗಿ…

Read More

ರಿಪ್ಪನ್ ಪೇಟೆ : ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ : ರಾಷ್ಟ್ರೀಯ ಯುವ ದಿನದ ಇತಿಹಾಸ

ರಿಪ್ಪನ್ ಪೇಟೆ : ರಾಷ್ಟ್ರೋತ್ಥಾನ ಬಳಗದ ವತಿಯಿಂದ ಇಲ್ಲಿಯ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೆಸ್ಸೆಸ್ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ ಮಾತನಾಡಿ  ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. 18ನೇ ಶತಮಾನದಲ್ಲಿ ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ ಅವರ 159ನೇ ಜನ್ಮಜಯಂತಿ ದಿನವನ್ನು ಇಂದು ನಾವು ರಾಷ್ಟ್ರೀಯ…

Read More