ಜಿಲ್ಲಾ ಸುದ್ದಿ:
ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ
ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…
ಖ್ಯಾತ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
ಖ್ಯಾತ ನಟ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಖ್ಯಾತ ನಟ, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ. ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ…
ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು
ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ತರಲು ಸಾಧ್ಯ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ…
ಆಗುಂಬೆ ಘಾಟ್ ನಲ್ಲಿ ಧರೆ ಕುಸಿದು ನೆಲಕ್ಕುರುಳಿದ ಮರ – ಸಂಚಾರ ವ್ಯತ್ಯಯ
ಆಗುಂಬೆ ಘಾಟ್ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಸಂಜೆ ವೇಳೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಭಾರೀ ತೊಂದರೆಗೆ ಒಳಗಾಗಿದ್ದಾರೆ. ಮರ ಬಿದ್ದುದರಿಂದ ರಸ್ತೆ ಸಂಪೂರ್ಣ ಮುಚ್ಚಿಕೊಂಡಿದ್ದು, ತೆರವು ಕಾರ್ಯ ಕೂಡಾ ಗೊಂದಲಮಯವಾಗಿದೆ. ಸ್ಥಳೀಯರ ಪ್ರಕಾರ…
ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ
ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್ಪೇಟೆಯ ಹಳೆಯ ಸಂತೇಮಾರ್ಕೆಟ್ ರಸ್ತೆಯಲ್ಲಿರುವ ಬಾಲಕರ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿದರು. ಯಾವುದೇ ಪೂರ್ವ ಸೂಚನೆ ಇಲ್ಲದೆ ದಿಡೀರ್ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಸಾಮಾನ್ಯವಾಗಿ ಸಭಾಂಗಣಗಳಲ್ಲಿ, ವೇದಿಕೆಗಳ ಮೇಲೆ ಮಾತ್ರ ಕಾಣುವ ನಾಯಕರು ಈ ಬಾರಿ ಮಕ್ಕಳ ನಡುವೆ ನಿಂತು ಅವರ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು…
ರಿಪ್ಪನ್ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ
ರಿಪ್ಪನ್ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ ರಿಪ್ಪನ್ಪೇಟೆಯಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭಕ್ಕೆ ಹಲವು ಗಣ್ಯರು ಹಾಜರಿದ್ದರೂ, ಪ್ರಮುಖವಾಗಿ ಇಬ್ಬರು ಅತಿಥಿಗಳು ಮಾತ್ರ ಮಾತನಾಡಿ ತಮ್ಮ ಚಿಂತನೆಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಉಪನ್ಯಾಸಕರಾದ ಡಾ ಗಣೇಶ್ ಆಚಾರ್ ವಿಶ್ವಕರ್ಮ ಜಯಂತಿ ಶ್ರಮಜೀವಿಗಳ ಹಬ್ಬವಾಗಿದ್ದು, ಸಮಾಜದ ನೈತಿಕ ಶಕ್ತಿ ಹಾಗೂ ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಹೇಳಿದರು. “ಬಡಗಿ, ಕಮ್ಮಾರರು, ಕಾರ್ಮಿಕರು ತಮ್ಮ ಪರಿಶ್ರಮದಿಂದಲೇ ಸಮಾಜಕ್ಕೆ ಆಧಾರವಾಗಿದ್ದಾರೆ. ಅವರ ಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ”…
ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು
ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು ಶಿವಮೊಗ್ಗ : , ಸೆಪ್ಟೆಂಬರ್ 17: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ ಅಡಕೆ ತೋಟವೊಂದರಲ್ಲಿ ನಡೆದಿದೆ. ಹರಮಘಟ್ಟ ಗ್ರಾಮದ ನಿವಾಸಿ ವೆಂಕಟೇಶ್ (45) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ವಿದ್ಯುತ್ ಸ್ಪರ್ಶದಿಂದ ಗಂಭೀರ ಸ್ಥಿತಿಯಲ್ಲಿದ್ದ ವೆಂಕಟೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಕಾರ್ಮಿಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತ ಕಾರ್ಮಿಕನು…
ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ತಾಯಿಯನ್ನು ನೋಡಲು ಬಂದ ಯುವಕ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣು
ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ತಾಯಿಯನ್ನು ನೋಡಲು ಬಂದ ಯುವಕ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣು ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಾಮಫಲಕಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣಿಗೆ ಶರಣಾದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುರಹೊನ್ನೆಯ ನಿವಾಸಿ ಆಕಾಶ್ (28) ನೇಣಿಗೆ ಶರಣಾಗಿದ್ದಾನೆ. ಆಕಾಶ್ ತಾಯಿಗೆ ಹುಷಾರಿಲ್ಲದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಾಯಿಯ ಅರೈಕೆಗಾಗಿ ಆಸ್ಪತ್ರೆಗೆ ಬಂದಿದ್ದ ಆಕಾಶ್ ಒಪಿಡಿಗೆ ಅಡ್ಮಿಷನ್ ಪತ್ರ ಪಡೆಯುವ ಪಕ್ಕದಲ್ಲಿ ಸೂಪರ್ ಸ್ಪೆಷಾಲಿಟಿಗೆ ದಾರಿ ಎಂಬ ನಾಮಫಲಕಕ್ಕೆ ನೇಣು ಬಿಗಿದುಕೊಂಡಿದ್ದಾನೆ….