Headlines

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…

Read More

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ ರಿಪ್ಪನ್ ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಗೌರಿಯ ಪ್ರತಿಮೆಗೆ ಅಲಂಕಾರ ಮಾಡಿ ಹೂವಿನ ಶೃಂಗಾರದಿಂದ ಸಿಂಗರಿಸಲಾಯಿತು. ಮಂಗಳಾರತಿ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಂದಿರದ ವಾತಾವರಣ…

Read More

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ ರಿಪ್ಪನ್‌ಪೇಟೆ;-ಶ್ರದ್ದಾ ಭಕ್ತಿಯಿಂದ ಗೌರಮ್ಮ ದೇವಿಯ ಪೂಜಾ ಕಾರ್ಯಕ್ರಮ ಜರುಗಿತು.ಇತಿಹಾಸ ಪ್ರಸಿದ್ದ ಶ್ರೀಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಗೌರಮ್ಮ ದೇವಿಯನ್ನು ದೇವಸ್ಥಾನದ ಪ್ರಧಾನ ಆರ್ಚಕ ಚಂದ್ರಶೇಖರಭಟ್ ಮತ್ತು ಗುರುರಾಜ್‌ಭಟ್ ಇವರ ನೇತೃತ್ವದಲ್ಲಿ ಪಕ್ಕದ ಬಾವಿಯಲ್ಲಿ ಗಂಗೆಯನ್ನು ಸುಮಂಗಳೆಯರು ತರುವುದರೊಂದಿಗೆ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷ ಅಲಂಕಾರ ಪೂಜೆಯೊಂದಿಗೆ ಮಹಾಂಮಗಳಾರತಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಮತ್ತು ಮುತೈದೆಯರು ಸೇರಿದಂತೆ ಹಲವು ಭಕ್ತರು ಪಾಲ್ಗೊಂಡು ದೇವಿಗೆ ಹರಿಕೆ ಹಣ್ಣು ಕಾಯಿ…

Read More

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ

ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹೇಳಿದರು. ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ  “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ, ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ…

Read More

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More