ಜಿಲ್ಲಾ ಸುದ್ದಿ:
ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ
ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…
ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ
ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…
ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್ಪೇಟೆಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ
ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್ಪೇಟೆಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ ರಿಪ್ಪನ್ಪೇಟೆ : ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF), ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಹಾಗೂ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ಶಿವಮೊಗ್ಗ ರಸ್ತೆಯಿಂದ ಪ್ರಾರಂಭಗೊಂಡ ಈ ಪಥಸಂಚಲನ ವಿನಾಯಕ ವೃತ್ತ ಸೇರಿ ಪಟ್ಟಣದ ನಾಲ್ಕು…
ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ
ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (28-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸುವಂತೆ ನಾಳೆ (ಆಗಸ್ಟ್ 28, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ…
ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ
ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…
ರಿಪ್ಪನ್ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ
ರಿಪ್ಪನ್ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…
RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ
RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ ರಿಪ್ಪನ್ ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಗೌರಿಯ ಪ್ರತಿಮೆಗೆ ಅಲಂಕಾರ ಮಾಡಿ ಹೂವಿನ ಶೃಂಗಾರದಿಂದ ಸಿಂಗರಿಸಲಾಯಿತು. ಮಂಗಳಾರತಿ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಂದಿರದ ವಾತಾವರಣ…
RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ
RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ ರಿಪ್ಪನ್ಪೇಟೆ;-ಶ್ರದ್ದಾ ಭಕ್ತಿಯಿಂದ ಗೌರಮ್ಮ ದೇವಿಯ ಪೂಜಾ ಕಾರ್ಯಕ್ರಮ ಜರುಗಿತು.ಇತಿಹಾಸ ಪ್ರಸಿದ್ದ ಶ್ರೀಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಗೌರಮ್ಮ ದೇವಿಯನ್ನು ದೇವಸ್ಥಾನದ ಪ್ರಧಾನ ಆರ್ಚಕ ಚಂದ್ರಶೇಖರಭಟ್ ಮತ್ತು ಗುರುರಾಜ್ಭಟ್ ಇವರ ನೇತೃತ್ವದಲ್ಲಿ ಪಕ್ಕದ ಬಾವಿಯಲ್ಲಿ ಗಂಗೆಯನ್ನು ಸುಮಂಗಳೆಯರು ತರುವುದರೊಂದಿಗೆ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷ ಅಲಂಕಾರ ಪೂಜೆಯೊಂದಿಗೆ ಮಹಾಂಮಗಳಾರತಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಮತ್ತು ಮುತೈದೆಯರು ಸೇರಿದಂತೆ ಹಲವು ಭಕ್ತರು ಪಾಲ್ಗೊಂಡು ದೇವಿಗೆ ಹರಿಕೆ ಹಣ್ಣು ಕಾಯಿ…
ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ
ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಹೇಳಿದರು. ರಿಪ್ಪನ್ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…
ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ, ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್
ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…