ಜಿಲ್ಲಾ ಸುದ್ದಿ:
ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ
ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…
ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ
ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್ಎನ್ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…
ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ
ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಆಗ್ರಹಿಸಿದ್ದಾರೆ. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು ವಿಶ್ವ…
ವಿಟಮಿನ್ ಎ ಡ್ರಾಪ್ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ
ವಿಟಮಿನ್ ಎ ಡ್ರಾಪ್ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ ಶಿವಮೊಗ್ಗ: ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…
ಮಕ್ಕಳು ಅಸ್ವಸ್ಥ ಪ್ರಕರಣ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಅಂಗನವಾಡಿಯ 13 ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ ಮಕ್ಕಳು ವಿಟಮಿನ್ ಡ್ರಾಪ್ ಯಡವಟ್ಟಿನಿಂದ…
RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ
RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಿದ ನಂತರದಲ್ಲಿ ಈ ರೀತಿಯಾಗಿ ಸಮಸ್ಯೆಯಾಗಿದೆ ಎಂದು ಪೋಷಕರು ಆರೋಪಿಸುತಿದ್ದರೆ ಸ್ಥಳೀಯ ನೀರಿನ ಸಮಸ್ಯೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಬಹುದು ಎಂದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳುತಿದ್ದಾರೆ. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ…
RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ
RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್ಪೇಟೆ ವಲಯದಲ್ಲಿ ಡಿಆರ್ಎಫ್ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…
ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ
ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಹುಂಚ : ಇತ್ತೀಚೆಗೆ ಪ್ರಕಟವಾದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಗೊಂಡ ಪ್ರಜ್ವಲ್ ಅವರಿಗೆ ಇಂದು ಅವರ ಹುಟ್ಟೂರಾದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವತಿಯಿಂದ ಆತ್ಮೀಯ ಸನ್ಮಾನ ಏರ್ಪಡಿಸಲಾಗಿತ್ತು. ಹುಂಚ ಗ್ರಾಮದ ಪ್ರಜ್ವಲ್ ನಿವಾಸಕ್ಕೆ ತೆರಳಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಹಿರಿಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಪ್ರಜ್ವಲ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂಧರ್ಭದಲ್ಲಿ…
ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!
ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.! ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ….
ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ
ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಹೃದಯಾಘಾತ…