Headlines

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ ಶಿವಮೊಗ್ಗ:   ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಮಂಗೋಟೆ ಗ್ರಾಮದಲ್ಲಿ ಹಾಸನದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ಕೊಟ್ಟು 7 ಲಕ್ಷ ರೂ. ವಂಚಿಸಿದ ಪ್ರಕರಣ 24 ಗಂಟೆಯ ಒಳಗಾಗಿ ಇತ್ಯರ್ಥ ಕಂಡಿದೆ. ಪ್ರಕರಣದಲ್ಲಿ ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50)  ಎಂಬವರನ್ನು ಹೊಳೆಹೊನ್ನೂರು ಠಾಣೆಯ ಪೊಲೀಸರು ಬಂಧನ  ಮಾಡಿದ್ದಾರೆ. ಹಾಸನ ಅಮುಲ್ ಡೈರಿಯಲ್ಲಿ ಕೆಲಸ ಮಾಡ್ತಿದ್ದ ಗಿರಿಗೌಡ ಎಂಬ ವ್ಯಕ್ತಿಗೆ ಚನ್ನಗಿರಿ…

Read More

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು…

Read More

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ ಮಂಜೂರಾತಿಗೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು,…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!?

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!? ಹೊಸನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊಪ್ಪರಗುಂಡಿ ಸೇತುವೆ ಬಳಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು , ಎಂ ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ , ಕೋಡುರು ಸಮೀಪದಲ್ಲಿ ಮುಖ್ಯ…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ 12.53 ಗಂಟೆಗೆ (ಮೂಲಾ ನಕ್ಷತ್ರ) ದೇವರ ಶ್ರೀ ರಥಾರೋಹಣ…

Read More