Headlines

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್‌ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….

Read More

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್

ಲಾಡ್ಜ್ ಮೇಲೆ ಪೊಲೀಸರ ದಾಳಿ – ಹನ್ನೊಂದು ಮಂದಿ ವಿರುದ್ದ ಕೇಸ್ ಲಾಡ್ಜ್‌ವೊಂದ ಮೇಲೆ ಪೊಲೀಸರು ದಾಳಿ ನಡೆಸಿ ಅಂದರ್‌ ಬಾಹರ್‌ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿರುವ ಲಾಡ್ಜ್‌ನ ಕೊಠಡಿ ಸಂಖ್ಯೆ 303ರಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿದ ಪೊಲೀಸರು ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದು ಕೇಸ್ ದಾಖಲೊಸಿದ್ದಾರೆ. ದೊಡ್ಡಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳ ವಿರುದ್ಧ…

Read More

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ  ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ…

Read More

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ

ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ

ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ  ಮೊಹಮದ್ ಬಿಲಾಲ್ ಆಯ್ಕೆ ಶಿವಮೊಗ್ಗ: SGFI ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ  ಶಿವಮೊಗ್ಗದ  ಮೊಹಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್‌ ನಲ್ಲಿ ಡಿಸೆಂಬರ್ 19ರಿಂದ 24ರವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾನೆ. ದಾವಣಗೆರೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದಾನೆ. ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ…

Read More

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More