Headlines

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ – ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಎರಡು ಕೆರೆಗಳ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಶಂಕುಸ್ಥಾಪನೆ ನೆರವೇರಿಸಿದರು. ಕೆಂಚನಾಲ ಗ್ರಾಮ ಪಂಚಾಯತ್ ಕೆಂಚನಾಲ ಈರಣ್ಣನ ಕೆರೆ ಹಾಗೂ ಮಸರೂರು ವಡ್ಡಿನ ಕೆರೆ ಏರಿ ಮೇಲೆ ರಸ್ತೆ ಸುರಕ್ಷತಾ ಕಾಮಗಾರಿಗೆ (ರೋಡ್ ಸೇಫ್ಟಿ ಕ್ರಾಶ್ ಬ್ಯಾರಿಯರ್ ) ಹೊಸನಗರ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಮೊತ್ತ 25 ಲಕ್ಷ…

Read More

ಹೊಸನಗರ -SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ , ದೂರು ದಾಖಲು

SSLC ವಿಧ್ಯಾರ್ಥಿ ಶಾಲೆಯಿಂದ ನಾಪತ್ತೆ – ದೂರು ದಾಖಲು ಹೊಸನಗರ ತಾಲೂಕು ಸೊನಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಎನ್ ಆರ್ ಮನೋಜ ಅಲಿಯಾಸ್ ಮನು ಸೋಮವಾರ ಶಾಲೆಗೆ ತೆರಳಿದ್ದು ಮಧ್ಯಾಹ್ನ 12:45 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದು ಶಾಲಾ ಅವಧಿ ಮುಗಿದು ಸಂಜೆಯಾದರೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾನೆ. ಮಗನು ಮನೆಗೆ ಬಾರದ ಕಾರಣ ಅವನ ತಂದೆ ತಾಯಿ ಮುಂಬಾರು ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಬೇಹಳ್ಳಿಯ ರವಿ ಹಾಗೂ ಶಶಿಕಲಾ ಶಾಲೆಯಲ್ಲೂ…

Read More

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ

ಫೆಂಗಲ್ ಚಂಡಮಾರುತ – ಶಿವಮೊಗ್ಗ ಜಿಲ್ಲಾದ್ಯಂತ ಡಿ.3 ರಂದು ಶಾಲಾ , ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಪದವಿ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಪ್ರಭಾರ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ಅಪಘಾತ ತಡೆ ಅಭಿಯಾನ – ಕೆಂಚನಾಳದಲ್ಲಿ ರಿಪ್ಪನ್‌ಪೇಟೆ ಪೊಲೀಸರ ಕಾರ್ಯಾಚರಣೆ

ಬೆಳಗ್ಗೆ ಬೆಳಗ್ಗೆ ಇದ್ದಿದ್‌ ತಿಂದ್ಕೊಂಡ್‌ ಕೆಲಸಕ್ಕೆ ಹೋಗೋ ಟೈಂನಲ್ಲಿ ಪೊಲೀಸ್‌ ಜೀಪ್‌ ಸೀದಾ ಊರೊಳಗೆ ಬರ್ತಿದ್ದರೇ, ಎಂತಾಯ್ತೋ ಏನೋ? ಏನ್‌ ಕಥೆಯೋ ಏನೋ? ಇದೆಲ್ಲಿ ಬೇಡದಿರೋ ವ್ಯಾಪಾರ ಅಂತಾ ಅನ್ನಿಸದೇ ಇರದು. ಇಂದು ರಿಪ್ಪನ್‌ ಪೇಟೆ ಪೊಲೀಸರು ಕೆಂಚನಾಳ ಗ್ರಾಮಕ್ಕೆ ಎಂಟ್ರಿ ಕೊಟ್ಟಾಗ ಅಲ್ಲಿದ್ದವರಿಗೂ ಹಾಗೆ ಅನ್ನಿಸಿತ್ತೇನೋ? ಆದರೆ ಪೊಲೀಸರು ಬೇರೆಯದ್ದೆ ಕಾರಣಕ್ಕೆ ಅಲ್ಲಿಗೆ ಹೋಗಿದ್ದರು. ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಇಂದು ಕೆಂಚನಾಳ ಗ್ರಾಪಂ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ತೆರಳಿ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಗಳಿಗೆ…

Read More

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ  ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…

Read More

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ದ ಅವಾಚ್ಯವಾಗಿ ನಿಂದನೆ – ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪರನ್ನು ಅವಾಚ್ಯವಾಗಿ ನಿಂದನೆ – ದೂರು ದಾಖಲು ಶಿವಮೊಗ್ಗ : ಸಾಮಾಜಿಕ ಮಾಧ್ಯಮ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಠಾಣೆ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡಿದ್ದಾರೆ. ಮೋಹಿತ್ ನರಸಿಂಹ ಮೂರ್ತಿ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ನಿಮ್ಮಪ್ಪನ ಮನೆ ದುಡ್ಡಲ್ಲಿ ಏನಾದ್ರು ಅವರಿಗೆ ಶಿಕ್ಷಣ ಕೊಡ್ತಿರಿ?…

Read More