ಜಿಲ್ಲಾ ಸುದ್ದಿ:
HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ
HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ ಹೊಸನಗರ ಪಟ್ಟಣದ ಉಪವಿಭಾಗದಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ ಗ್ರಾಮ ಪಂಚಾಯಿತಿ…
ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ
ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ
ರಿಪ್ಪನ್ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…
ಮಾಜಿ ಸಚಿವ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ
ಮಾಜಿ ಸಚಿವ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ ರಿಪ್ಪನ್ ಪೇಟೆ : ಹರತಾಳು ಗ್ರಾಮದಲ್ಲಿ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ…
ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ
ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ…
ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!
ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ! ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ…
ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…
ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ
ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…
ಭತ್ತದ ಗದ್ದೆಯಲ್ಲಿ ಕಂದುಜಿಗಿ ಹುಳು ಬಾಧೆಗೆ ನೂರಾರು ಎಕರೆ ಬೆಳೆ ನಾಶ – ಈ ಹುಳುವಿನ ಹತೋಟಿ ಕ್ರಮ ಏನೇನು.!? ಇಲ್ಲಿದೆ ಸಂಪೂರ್ಣ ಮಾಹಿತಿ..!
ಕಳೆದ ಬೇಸಿಗೆಯಲ್ಲಿ ಸೈನಿಕ ಹುಳುಬಾಧೆ, ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಜೋಳ ಬೆಳೆ ಕಳೆದುಕೊಂಡ ರೈತರೀಗ ಕಂದುಜಿಗಿ ಹುಳು ಬಾಧೆಯಿಂದ ಭತ್ತದ ಬೆಳೆಯನ್ನೂ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ. ಭತ್ತದ ಬೆಳೆಯಿಂದ ಲಾಭ ಕಡಿಮೆ. ಹೀಗಾಗಿ ಹೆಚ್ಚು ಬೆಲೆಯ ಕೀಟನಾಶಕ ಸಿಂಪಡಿಸುವುದು ಕಷ್ಟಸಾಧ್ಯ. ಸಾಮಾನ್ಯ ಕೀಟನಾಶಕಗಳನ್ನು ಸಿಂಪಡಿಸುವುರಿಂದ ಹತೋಟಿ ಸಾಧ್ಯವಿಲ್ಲ. ಹೀಗಾಗಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಪರಿಣಾಮಕಾರಿ ಗುಣಮಟ್ಟದ ಕೀಟನಾಶಕವನ್ನು ಒದಗಿಸಿ ರೈತರ ಹಿತ ಕಾಯಬೇಕಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ…
ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ
ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….