ಜಿಲ್ಲಾ ಸುದ್ದಿ:
RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ
RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ ರಿಪ್ಪನ್ಪೇಟೆ : ಪಟ್ಟಣದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಹೋಳಿಗೆ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತದಿಂದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಹಿಂಭಾಗದ ಕೂರ ತಂಝಲ್ ಸಭಾ ಭವನಕ್ಕೆ ತೆರಳಿದ ವೇಳೆಯಲ್ಲಿ…
ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ
ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…
ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು
ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು : ರಿಪ್ಪನ್ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ರಿಪ್ಪನ್ಪೇಟೆ ಪಿಎಸ್ಐ…
ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಹಾಗೂ ಜಾಗೃತಿ
ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಅಭಿಯಾನ ರಿಪ್ಪನ್ಪೇಟೆ : ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್ಪೇಟೆ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಂದು ಸ್ವಚ್ಚತೆ ಕುರಿತು ಜಾಗ್ರತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ ಪೇಟೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ …
RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ರಿಪ್ಪನ್ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ…
ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…
ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ
ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ. ಸೆ.29 ರ ಭಾನುವಾರ ಬೆಳಿಗ್ಗೆ ಶಿರಸಿಯಲ್ಲಿ ನಡೆಯುವ ಮಲೆನಾಡ ಅಕ್ಷರೋತ್ಸವ -2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಉತ್ತರ ಕನ್ನಡ ಇದರ ಕಚೇರಿ ಪ್ರಕಟಣೆಯಲ್ಲಿ…
ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು
ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು ರಿಪ್ಪನ್ಪೇಟೆ;-ಕೂಡಿ ಬಾಳಿದರೆ ಸುಖ ಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ.ಮನುಷ್ಯತ್ವ ಮೀರಿದ ಯಾವುದೇ ಧರ್ಮವಿಲ್ಲ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಧರ್ಮಗುರುಗಳ ಹೆಗಲ ಮೇಲಿದೆ.ವಿವಿಧ ಜಾತಿ ಧರ್ಮ ಸಂಸ್ಕೃತಿಯುಳ್ಳ ದೇಶ ನಮ್ಮದಾಗಿದೆ ಎಂದು ಗರ್ತಿಕೆರೆ ನಿಟ್ಟೂರು ಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್ಪೇಟೆಯ ಮಹಮ್ಮದ್ ಜುಮ್ಮಾ ಮಸೀಧಿ ಗವಟೂರು ತಲಿಝೀಝುಲ್ ಇಸ್ಲಾಂ ಮದ್ರಸ ಬದ್ರಿಯಾ ಮಸ್ಜಿದ್.ಮೀಲಾದ್ ಸಮಿತಿ.ಹಾಗೂ ಎಸ್.ವೈ.ಎಸ್.ಎಸ್.ಎಸ್.ಎಫ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ…
ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು
ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರಿಪ್ಪನ್ಪೇಟೆ : ನಮ್ಮ ಆತ್ಮ ಶುದ್ದೀಕರಣವಿದ್ದರೆ ಮಾತ್ರ ಅದು ಧರ್ಮವಾಗಿರುತ್ತದೆ, ಆಯಾ ಧರ್ಮದ ಸಾರವನ್ನು ಅರ್ಥ ಮಾಡಿಕೊಂಡು ಆ ಪ್ರಕಾರ ಜೀವನ ನಡೆಸಿದಲ್ಲಿ ಎಲ್ಲರೂ ಸಂತಸದಿಂದ ಬದುಕಿ ಬಾಳಬಹುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ಹೇಳಿದರು. ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಹಾಗೂ ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ…
ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ
ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ…