ಜಿಲ್ಲಾ ಸುದ್ದಿ:
ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್
ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್ ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್ನಲ್ಲಿ ಹಾಲ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ…
ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ
ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…
ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.!
ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ಗ್ರಾಮದಲ್ಲಿ ಇಸ್ಪೀಡ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಾಗೂ ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಹಳೆ ಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…
RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ
RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ ರಿಪ್ಪನ್ಪೇಟೆ : ಬಟ್ಟೆಮಲ್ಲಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರನ್ನು ಶಿವಮೊಗ್ಗದಲ್ಲಿ ರಿಪ್ಪನ್ಪೇಟೆ ಪೊಲೀಸರು ಪತ್ತೆ ಹಚ್ಚಿ, ಪಟ್ಟಣಕ್ಕೆ ವಾಪಾಸು ಕರೆತಂದಿದ್ದು, ಮರಳಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿಗಳಾದ ಸಾತ್ವಿಕ್ (13) ನಿರಂಜನ್ (13)ಎಂಬ ಇಬ್ಬರು ಬಾಲಕರು ಬಟ್ಟೆಮಲ್ಲಪ್ಪದಿಂದ ಶಾಲೆಗೆ ತೆರಳುತ್ತೇವೆ ಎಂದು ಗುರುವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಶಾಲಾ ಸಮವಸ್ತ್ರ ದೊಂದಿಗೆ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಬಗ್ಗೆ ಪೋಷಕಕರಿಗೆ ತಿಳಿಯುತಿದ್ದಂತೆ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ…
ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ
ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ ತನ್ನ ಪತ್ನಿಯನ್ನ ಮನೆಗೆ ವಾಪಸ್ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳಸಿದ್ದ ಅಡಿಕೆ ತೋಟದಲ್ಲಿ ಅಡಿಕೆ ಸಸಿಗಳನ್ನ ಅಳಿಯನೊಬ್ಬ ಕಡಿದು ಹಾಕಿದ ಘಟನೆ ಬಗ್ಗೆ ವರದಿಯಾಗಿದೆ. ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದರ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರುದಾರರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳನ್ನ ಕೊಟ್ಟಿದ್ದರು. ವಿವಿಧ ವಿಚಾರಗಳಿಗೆ…
ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್ ಯಶಸ್ವಿ
ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…
HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ
ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…
ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ…