ಜಿಲ್ಲಾ ಸುದ್ದಿ:
RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್ಪೇಟೆ
RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್ಪೇಟೆ ರಿಪ್ಪನ್ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…
RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ
ರಿಪ್ಪನ್ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…
RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ
ರಿಪ್ಪನ್ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…
RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?
ರಿಪ್ಪನ್ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…
SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ
SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. 80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು. ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…
ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ
ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…
ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ – ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!
ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ – ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…
ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ
ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…
ರಿಪ್ಪನ್ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ
ರಿಪ್ಪನ್ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ…