Headlines

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ಮಾನಸಿಕ ಖಿನ್ನತೆಗೊಳಗಾಗಿದ್ದ ಹೊಸನಗರ ತಾಲೂಕಿನ ಯುವಕನನ್ನು ಭೇಟಿಯಾದ ಚಿತ್ರನಟ ದರ್ಶನ್ – ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ|DBOSS

ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾಗಿದ್ದ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕನನ್ನು ದರ್ಶನ್ ಇಂದು ಭೇಟಿಯಾಗಿದ್ದಾರೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ ಅಭಿಮಾನವನ್ನಿಟ್ಟು ಕೊಂಡಿರುವ ಸುದೀಪ ದರ್ಶನ್ ರವರನ್ನು ಹಲವು ಬಾರಿ ಭೇಟಿ ಮಾಡಲು ಪ್ರಯತ್ನಿಸಿ ವಿಫಲನಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನ ಬಗ್ಗೆ ಇತ್ತೀಚಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆ ಕಳೆದ ವಾರ ಯುವಕನನ್ನು ಆತನ ಮನೆಯಲ್ಲಿ ಭೇಟಿ ಮಾಡಿ ಸಂದರ್ಶಿಸಿ ಈ…

Read More

ಎಲ್ಲಾ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ : ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!!! ಇಲ್ಲಿದೆ ಸಂಪೂರ್ಣ ಮಾಹಿತಿ|congress

ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರೆಂಟಿಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ. ಮಹತ್ವದ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಸರ್ಕಾರ, 5 ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದೆ. ಐದು ಯೋಜನೆಗಳು ಮಹಿಳೆಯರ ಬಸ್ ಪ್ರಯಾಣ ಜೂನ್ 11 ರಿಂದ ಆರಂಭಗೊಂಡರೆ, ಇತರ ನಾಲ್ಕು ಯೋಜನೆಗಳು ಜುಲೈ 1 ರಿಂದ ಆರಂಭಗೊಳ್ಳುತ್ತಿದೆ. ಗ್ಯಾರೆಂಟಿ ಯೋಜನೆ ಜಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಗ್ಯಾರೆಂಟಿ ಯೋಜನೆ ಪಡೆಯಲು ಅರ್ಹರು ಯಾವ ದಾಖಲೆ ನೀಡಬೇಕು…

Read More

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಮೇ 31 ರಿಂದ ಆರಂಭವಾಗಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಆರಂಭವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ. ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ….

Read More

ಸಚಿವರ ಪ್ರಮಾಣವಚನ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ..??? ಇಲ್ಲಿದೆ ಸಂಪೂರ್ಣ ಮಾಹಿತಿ|Cabinet

ಕರ್ನಾಟಕ ರಾಜ್ಯ ಸರ್ಕಾರದ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಿಗೆ ಈ ರೀತಿಯಾಗಿ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗುತಿದ್ದು ಆ ಪಟ್ಟಿ ಇಲ್ಲಿದೆ. ಯಾರಿಗೆ ಯಾವ್ಯಾವ ಜವಾಬ್ದಾರಿ..? ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಡಾ.ಜಿ.ಪರಮೇಶ್ವರ್ -ಗೃಹ ಸಚಿವ…

Read More

ಡಿ ಕೆ ಸುರೇಶ್ ನಿವಾಸದಲ್ಲಿ ಶಾಸಕರು ಹಾಗೂ ಆಪ್ತರೊಂದಿಗೆ ಡಿಕೆಶಿ ಸಮಾಲೋಚನೆ – ಬೇಳೂರು ,ಆರ್ ಎಂ ಮಂಜುನಾಥ್ ಗೌಡ ಭಾಗಿ|DK

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂಸದ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರು ಹಾಗೂ ಆಪ್ತರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಕೆಪಿಸಿಸಿ ಸಹಕಾರ ವಿಭಾಗದ ಕಾರ್ಯಾಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಸಿ.ಕೆ ವೀರೇಂದ್ರ ಪಪ್ಪಿ, ಡಾ.ರಂಗನಾಥ್, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್. ಪರಿಷತ್ ಸದಸ್ಯ ಎಸ್.ರವಿ ಸೇರಿ ಕೆಲವು ಆಪ್ತರ ಜೊತೆ ಡಿ.ಕೆ…

Read More

EXIT POLL | ರಾಜ್ಯದಲ್ಲಿ ಅತಂತ್ರ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ನಾಲ್ಕು ಸಮೀಕ್ಷೆಗಳು – ಐದು ಸಮೀಕ್ಷೆಗಳಲ್ಲಿ ಯಾವ ಪಾರ್ಟಿಗೆ ಎಷ್ಟು ಸ್ಥಾನ??? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಅತಂತ್ರ ಅಸೆಂಬ್ಲಿಯತ್ತ ಸಾಗುತ್ತಿದೆ ಎಂದು ಐದು ಎಕ್ಸಿಟ್ ಪೋಲ್‌ಗಳಲ್ಲಿ 4 ಭವಿಷ್ಯ ನುಡಿದಿವೆ ಮತ್ತು ಅವುಗಳಲ್ಲಿ ಬಹುಪಾಲು ಕಾಂಗ್ರೆಸ್‌ಗೆ ಸ್ವಲ್ಪಮಟ್ಟಿನ ಲಾಭವಿರುವ ಕುರಿತು ಭವಿಷ್ಯ ನುಡಿದಿವೆ. ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ ಸೆಕ್ಯುಲರ್ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಹೇಳಿವೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ.ಕೇವಲ ಒಂದು ಎಕ್ಸಿಟ್ ಪೋಲ್ – ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ. ಇನ್ನೆರಡು…

Read More

ನಾಳೆ SSLC ಫಲಿತಾಂಶ ಪ್ರಕಟ – ಕಡಿಮೆ ಅಂಕ ಅಥವಾ ಫೇಲ್ ಆಗುತ್ತೀರಿ ಎಂದನಿಸಿದರೆ ಇದನ್ನು ಒಮ್ಮೆ ಓದಿ

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಬೆಳಗ್ಗೆ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸೋ ಫಲಿತಾಂಶ ಬಿಡುಗಡೆ ಆಗುತ್ತಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEEB) ಮಹತ್ವದ ಸುದ್ದಿಗೋಷ್ಟಿ ಕರೆದಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ….

Read More

IPLಬೆಂಗಳೂರು – ರಾಜಸ್ಥಾನ ಪಂದ್ಯಾವಳಿಯಲ್ಲಿ ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪ್ಲೇ ಕಾರ್ಡ್ ಪ್ರದರ್ಶನ

ಸಾಗರ : ವಿಧಾನಸಭಾ ಚುನಾವಣೆ ಈ ಬಾರಿ ಕದನ ಕುತೂಹಲವಾಗಿದೆ. ಅದರಲ್ಲೂ ಮಲೆನಾಡಿನ ಕ್ಷೇತ್ರಗಳು ರಣ ರೋಚಕವಾಗಿದೆ. ಅದರಲ್ಲೂ ಸಾಗರದಲ್ಲಿ ಚುನಾವಣೆ ಕಾವು ರಂಗೇರಿದೆ.  ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪನವರ ನಡುವೆ ಈ ಬಾರಿ ಸೆಣಸಾಟ ಜೋರಾಗಿದೆ. ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಡೆದ ಆರ್ ಸಿ ಬಿ ಮತ್ತು ರಾಜಸ್ಥಾನದ ಪಂದ್ಯದ ವೇಳೆ ಸಾಗರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿನ ಪ್ಲೆ ಕಾರ್ಡ್ ಹಿಡಿದು ಸಾಗರದ ಬಾಳೆಗುಂಡಿ…

Read More