Headlines

ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :

ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ ಇಂದು ಕೋಡೂರು, ಹುಂಚ ವ್ಯಾಪ್ತಿಯ ರೈತರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕಲಗೋಡು ರತ್ನಾಕರ ಮತ್ತು ತಾ.ಪಂ.ಮಾಜಿ ಸದಸ್ಯ ಚಂದ್ರಮೌಳಿಗೌಡ ನೇತೃತ್ವದಲ್ಲಿ ಹೊಸನಗರದ ಮೆಸ್ಕಾಂ ಕಛೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರೈತರ ಸಮಸ್ಯೆಗೆ ಮೆಸ್ಕಾಂ ಇಲಾಖೆ ಸ್ಪಂದಿಸಿ…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರ ವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು

ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ  ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ  ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.  ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ…

Read More

ರಿಪ್ಪನ್ ಪೇಟೆ ಪಿಯು ಕಾಲೇಜಿನಲ್ಲಿ ಶಾಂತಿ ಸಭೆ : ಸರ್ಕಾರದ ಆದೇಶ ಪಾಲನೆಗೆ ಮನವಿ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ಸಮುದಾಯದ ಪೋಷಕರ ಸಭೆ ಇಂದು ಕಾಲೇಜಿನಲ್ಲಿನಡೆಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ ಶಿವಾನಂದಕೋಳಿ ಅವರು ಮಾತನಾಡಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶ ಪರಿಪಾಲನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ.  ಆ ನಿಟ್ಟಿನಲ್ಲಿ ಈಚೆಗೆ ವಿವಾದಕ್ಕೆ ಒಳಗಾಗಿರುವ ವಸ್ತ್ರಸಂಹಿತೆಯನ್ನು ಹೊರತುಪಡಿಸಿ ಶಾಲಾ-ಕಾಲೇಜಿನ ನಿಗದಿತ ಸಮವಸ್ತ್ರವನ್ನು ಧರಿಸಿ ಬರುವಂತೆ ಸೂಚಿಸಿದರು. ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದೇ ತಮ್ಮ ಮುಂದಿನ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ಪೋಷಕರೂ ಸಹ…

Read More

ರಿಪ್ಪನ್ ಪೇಟೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ :

ರಿಪ್ಪನ್ ಪೇಟೆ : ದಿನಾಂಕ 16 ರ ಬುಧವಾರ,ಸಮಯ ಸಂಜೆ 3:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ನ ಕುವೆಂಪು ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ ಕೆರೆಹಳ್ಳಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆರೆಹಳ್ಳಿ ಹೋಬಳಿಯ ರಿಪ್ಪನ್ ಪೇಟೆ ,ಬಾಳೂರು ,ಹರತಾಳು,ಬೆಳ್ಳೂರು , ಕೆಂಚನಾಲ , ಅರಸಾಳು ಗ್ರಾಪಂ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರ ಸಭೆ…

Read More

ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More

‘ರೈತ ವಿದ್ಯಾನಿಧಿ’ ಪಡೆಯಲು ಪಹಣಿ ಕಾಟ ; ನಿಯಮ ಸಡಿಲಿಸುವಂತೆ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹ

ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಘೋಷಿಸಿದ್ದ ಯೋಜನೆ ‘ರೈತ ವಿದ್ಯಾನಿಧಿ’. ಯೋಜನೆಯಲ್ಲಿ  ಪಹಣಿ ಸಮಸ್ಯೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಯೋಜನೆ ಫಲಾನುಭವಿಗಳಾಗಲು ಪಾಲಿಸಬೇಕಿರುವ ನಿಯಮಾವಳಿಯನ್ನು ಸ್ವಲ್ಪ ಸಡಿಲಿಸಬೇಕೆಂದು ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹಿಸಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯಬೇಕಿದ್ದರೆ ಅರ್ಹ ವಿದ್ಯಾರ್ಥಿ ತಂದೆಯ ಹೆಸರು ಪಹಣಿಯಲ್ಲಿ ಇರಲೇಬೇಕು ಎಂಬ ನಿಯಮವಿದೆ. ಕೃಷಿ ಇಲಾಖೆಯ ‘ಫ್ರೂಟ್ಸ್‌ ಆ್ಯಪ್‌’ನಲ್ಲಿ ಪಹಣಿಯನ್ನು ನಮೂದು ಮಾಡಿ ಅಲ್ಲೊಂದು ಐಡಿ ಪಡೆದರೆ ಮಾತ್ರ…

Read More

ರೈತ ಪರ ಹೋರಾಟಗಾರ ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂಧರ್ಭದಲ್ಲಿ ಮೃತರ ಪತ್ನಿ ಪಿತಾಂಬರಮ್ಮ ಹಾಗೂ ಪುತ್ರರಾದ ಕಗ್ಗಲಿ ಲಿಂಗಪ್ಪ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಕಾಂಗ್ರೆಸ್ ರಿಪ್ಪನ್…

Read More

ನಾಳೆ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?

ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಹಲವು ಊರುಗಳಲ್ಲಿ ನಾಳೆ 05/02/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ…

Read More

ಹೊಸನಗರದ ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ,ಮುಸಲ್ಮಾನ್,ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ : ಮೂಲೆಗದ್ದೇ ಶ್ರೀಗಳು

ಹೊಸನಗರ:- 03, ಇಂದು ಒಟ್ಟೂರು ಕೆರೆಯ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ, ಮೂಲೆಗದ್ದೆ ಮಠದ ಶ್ರೀಗಳಿಂದ, ಮಸೀದಿಯ ಗುರುಗಳು ಚರ್ಚ್ ನ ಫಾದರ್, ಸಾ,ರ ಸಂಸ್ಥೆ, ಪಟ್ಟಣ ಪಂಚಾಯಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಹೂಳೆತ್ತುವ ರ್ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಚಾಲನೆ ನೀಡಿ ಮಾತನಾಡಿದ ತಾಲ್ಲೂಕಿನ ಮೂಲೆಗದ್ದೆ ಮಠದ ಶ್ರೀ ಮ,ನಿ,ಪ್ರಾ, ಚನ್ನಬಸವ ಮಹಾ ಸ್ವಾಮಿಗಳು ಮಾತನಾಡಿ. ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ, ಮುಸಲ್ಮಾನ್, ಕ್ರೈಸ್ತ ಸೇರಿದಂತೆ ವಿವಿಧ…

Read More