Headlines

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!!| Crime News

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!! ಅದು ಅಪರಿಚಿತ ಮಹಿಳೆಯ ಕೊಲೆ ಪ್ರಕರಣ. ಪೊಲೀಸರಿಗೆ ಸವಾಲಾಗಿದ್ದ ಈ ಪ್ರಕರಣವನ್ನು ಕೇವಲ ಹತ್ತು ದಿನಗಳೊಳಗೆ ಬೇಧಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ರಿಪ್ಪನ್‌ಪೇಟೆಯ ಚಾಣಾಕ್ಷ ಪೊಲೀಸರ ತಂಡ. ಚಾಣಾಕ್ಷತನದಿಂದ ಕೊಲೆಗೈದು ಮೃತ ದೇಹವನ್ನು ಕೆರೆಗೆ ಬಿಸಾಡಿದ್ದ ಕೋಡೂರು ಗ್ರಾಮದ ಮಯೂರ್ ಭಟ್ ಹಾಗೂ ಕಾನೂನು ಸಂಘರ್ಷಕ್ಕೊಳ್ಳಗಾದ ಸ್ನೇಹಿತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… ಹೌದು… ಶಿವಮೊಗ್ಗ…

Read More

Accident | ಜನನಿಬಿಡ ಪ್ರದೇಶದಲ್ಲಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ

ಜನನಿಬಿಡ ಪ್ರದೇಶದಲ್ಲಿ ಸಿಟಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ | ಜನರಲ್ಲಿ ಆತಂಕ ಶಿವಮೊಗ್ಗ: ನಗರದ ನೆಹರೂ ರಸ್ತೆಯಲ್ಲಿ ಸಿಟಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಒಳಗಿದ್ದ ಬಾಲಕಿ ಕೆಳಕ್ಕೆ ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೆಹರೂ ರಸ್ತೆಯಲ್ಲಿ ವೀರಭದ್ರೇಶ್ವರ ಸಿಟಿ ಬಸ್ ಟೈರ್ ಸ್ಪೋಟಗೊಂಡಿದೆ. ಪರಿಣಾಮವಾಗಿ ಬಸ್ ತೂತ ಬಿದ್ದಿದ್ದು ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ. ಚಾಲಕನ ಹಿಂಬದಿಯ ಸೀಟಿನಲ್ಲಿ ಬಾಲಕಿ ಕುಳಿತಿದ್ದಳು. ಟೈರ್ ಬ್ಲಾಸ್ಟ್ ಆದ…

Read More

Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು

Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು  ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಬಲಾತ್ಕಾರ ನಡೆಸಿರುವ ಬಗ್ಗೆ ಆಕೆಯ ಸೋದರ ಮಾವನ ವಿರುದ್ಧವೇ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಸಂಸ್ಥೆಗಳಿಗೆ ಕಾರ್ಮಿಕರನ್ನು ಒದಗಿಸುವ ಸುನೀಲ್ ಎಂಬುವನಿಂದ ನಿರಂತರ ಬಲಾತ್ಕಾರವಾಗಿರುವ ಬಗ್ಗೆ ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ಬಾಲಕಿಯ ಮೇಲೆ ಬಲಾತ್ಕಾರ ನಡೆಸಿರುವ ಆರೋಪದಲ್ಲಿ…

Read More

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ | Crime News

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಹತೈಗೈದು ಬಿಸಾಡಿದ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಳಲೂರು ಗ್ರಾಮದ ಜಯಮ್ಮ(62) ಎಂಬುವವರನ್ನು ಕೋಡೂರು ನಿವಾಸಿ ಮಯೂರ (24) ತನ್ನ ಅಪ್ರಾಪ್ತ ಸ್ನೇಹಿತನೊಂದಿಗೆ ಸೇರಿಕೊಂಡು ಮೈಮೇಲಿದ್ದ ಒಡವೆಗಾಗಿ ಕೊಲೆ ಮಾಡಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು ..?? ದಿನಾಂಕ:18/03/2024 ರಂದು ಶಿವಮೊಗ್ಗ…

Read More

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga   ಶಿವಮೊಗ್ಗ : ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ನಗರದ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ (31) ಮೃತ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ…

Read More

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…

Read More

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…

Read More

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ…

Read More

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್

ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್ ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿರುವಂತಹ ಘಟನೆ ನಡೆದಿತ್ತು.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯ ವಿದ್ಯಾರ್ಥಿ ರಾಕೇಶ್ ನನ್ನು ಕಿಡ್ನಾಪ್ ಮಾಡಲಾಗಿತ್ತು. ನಡೆದಿದ್ದೇನು..?? ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಯುವಕರಿಂದ ಕಿಡ್ನಾಪ್​ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು…

Read More

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊಸನಗರ : ತಾಲ್ಲೂಕಿನ ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ 6 ಅಡಿ ಸುತ್ತಳತೆಯ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥರಾಗಿದ್ದು ಬೇರೆ-ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ…

Read More