Headlines

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು  ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ. ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ…

Read More

ಹೊಸನಗರದ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ರೇಡ್ | Lokayukta Raid

ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ರೇಡ್ |  ಹೊಸನಗರ ತಾಲ್ಲೂಕಿನ ಜಯನಗರ ಸಮೀಪದ ಮಣಸಟ್ಟೆ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರವಾರದ ಅಬಕಾರಿ ಅಧಿಕಾರಿ ರೂಪ ಎಂಬುವವರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ.ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ  ಇನ್ನೂ ಹಲವಾರು ಕಡೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುತ್ತಾ ಬಳಿಯ ಮಣಸಟ್ಟೆ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಕುರಿತು ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ…

Read More

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!?? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಿಂದ…

Read More

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಂದಾಸುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂದಾಸುರದ ಶಿಲ್ಪ (40) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮನೆಯ ಮುಂಭಾಗದ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಂಡು ಬರುತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶಿಲ್ಪಳಿಗೆ ಡಿಕ್ಕಿಯಾದ ಟಿಪ್ಪರ್ ವಾಹನ 200 ಮೀಟರ್ ಅಷ್ಟು…

Read More

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್‌.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು. ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಆನಂದಪುರದ ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿ ಪರಶುರಾಮ್ ನೇಣಿಗೆ ಶರಣಾದ ದುರ್ದೈವಿ. ಮನೆಯ ಹಿತ್ತಲಿನ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – KTM ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ನಗರದ ನವುಲೆಯ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.  ಜೆಎನ್ ಸಿಸಿ ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ,ಕಾಶಿಪುರದ ನಿವಾಸಿ ಪುನೀತ್( 20) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಕೆಟಿಎಂ ಬೈಕ್ ಹಾಗೂ ಹೀರೋ ಹೋಂಡಾ ಪ್ಯಾಶನ್ ಪ್ರೊ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಂತರದಲ್ಲಿ ಕೆಟಿಎಮ್ ಬೈಕ್ ಎದುರಿನಲ್ಲಿದ್ದ KMF ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ‌.ಈ ಅಪಘಾತದ ರಭಸಕ್ಕೆ ಕೆಟಿಎಮ್ ಬೈಕ್ ಸವಾರ ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಇನ್ನೊಂದು…

Read More

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read More