Headlines

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.ಕಾರಿನಲ್ಲಿ ದೊರೆತಂತ…

Read More

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read More

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.  ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…

Read More

Hosanagara | ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು  ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ  ಗ್ರಾಮದ ಗಣೇಶ್ ಪೂಜಾರಿ ಎಂಬುವವರು ಅಡಿಕೆ ತೋಟಕ್ಕೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ರೈತ ಗಣೇಶ್ ಪೂಜಾರಿ ಔಷಧಿ ಸಿಂಪಡಣೆ ಮಾಡುವಾಗ ಅಸ್ವಸ್ಥಗೊಂಡಿದ್ದು ತಕ್ಷಣವೇ ಅವರನ್ನು ಕುಟುಂಬದವರು ಹೊಸನಗರ ಆಸ್ಪತ್ರೆಗೆ ಕರೆದೊಯ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ರಕ್ತ ವಾಂತಿ ಜಾಸ್ತಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ. ಮೃತರು…

Read More

Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read More

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!???|Crime News

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹುಂಚ ಹೊಸನಗರ ಮಾರ್ಗದಲ್ಲಿರುವ ಮುತ್ತಿನಕೆರೆಯಲ್ಲಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಕೆರೆಯಲ್ಲಿ ಕಂಡುಬಂದಿದ್ದು , ಮೃತದೇಹವನ್ನು ಹಗ್ಗದಿಂದ ಕಟ್ಟಲಾಗಿದೆ ಎನ್ನಲಾಗುತಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ವಿಷಯ ತಿಳಿಯುತ್ತಿದ್ದಂತೆ…

Read More

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು, ಕಾರಿನ ಸಮೇತವೇ ಸುಟ್ಟು ಕೊಂದು ಹಾಕಿರುವ ದುರ್ಘಟನೆ ಶಿವಮೊಗ್ಗದಲ್ಲಿ(Shivamogga) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ಯುವಕವಾಗಿದ್ದಾನೆ. ಶಿಕಾರಿಪುರ(shikaripura) ತಾಲೂಕಿನ ತೊಗರ್ಸಿ(togarsi) ಬಳಿ ಇನ್ನೋವಾ ಕಾರಿನಲ್ಲಿ ಕೂಡಿಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಯುವತಿಯನ್ನು ನೋಡಲು ಯುವಕ ಬಂದಿದ್ದ ಇನೋವಾ(Innova) ಕಾರಿನಲ್ಲೇ ಕೊಲೆಗೈದು ಸುಟ್ಟು…

Read More

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು ಆನಂದಪುರ : ಇಲ್ಲಿನ ಸಮೀಪದ ಹೊಸಕೊಪ್ಪ ಬಳಿಯಲ್ಲಿ ಬೈಕ್ ಸವಾರ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೆಣಸಿನಸರ  ಗ್ರಾಮದ ನಿವಾಸಿ ಷಣ್ಮುಖಪ್ಪ ( 65 ) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೋಮವಾರ ಸಂಜೆ ಹೊಸಕೊಪ್ಪ ತಿರುವಿನಲ್ಲಿ ಈ ಅಪಘಾತ ನಡೆದಿದ್ದು ತಕ್ಷಣ ಗಾಯಾಳುಗಳನ್ನು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿ…

Read More