Headlines

Hosanagara | ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು  ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ  ಗ್ರಾಮದ ಗಣೇಶ್ ಪೂಜಾರಿ ಎಂಬುವವರು ಅಡಿಕೆ ತೋಟಕ್ಕೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ರೈತ ಗಣೇಶ್ ಪೂಜಾರಿ ಔಷಧಿ ಸಿಂಪಡಣೆ ಮಾಡುವಾಗ ಅಸ್ವಸ್ಥಗೊಂಡಿದ್ದು ತಕ್ಷಣವೇ ಅವರನ್ನು ಕುಟುಂಬದವರು ಹೊಸನಗರ ಆಸ್ಪತ್ರೆಗೆ ಕರೆದೊಯ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ರಕ್ತ ವಾಂತಿ ಜಾಸ್ತಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ. ಮೃತರು…

Read More

Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read More

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!???|Crime News

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹುಂಚ ಹೊಸನಗರ ಮಾರ್ಗದಲ್ಲಿರುವ ಮುತ್ತಿನಕೆರೆಯಲ್ಲಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಕೆರೆಯಲ್ಲಿ ಕಂಡುಬಂದಿದ್ದು , ಮೃತದೇಹವನ್ನು ಹಗ್ಗದಿಂದ ಕಟ್ಟಲಾಗಿದೆ ಎನ್ನಲಾಗುತಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ವಿಷಯ ತಿಳಿಯುತ್ತಿದ್ದಂತೆ…

Read More

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು, ಕಾರಿನ ಸಮೇತವೇ ಸುಟ್ಟು ಕೊಂದು ಹಾಕಿರುವ ದುರ್ಘಟನೆ ಶಿವಮೊಗ್ಗದಲ್ಲಿ(Shivamogga) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ಯುವಕವಾಗಿದ್ದಾನೆ. ಶಿಕಾರಿಪುರ(shikaripura) ತಾಲೂಕಿನ ತೊಗರ್ಸಿ(togarsi) ಬಳಿ ಇನ್ನೋವಾ ಕಾರಿನಲ್ಲಿ ಕೂಡಿಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಯುವತಿಯನ್ನು ನೋಡಲು ಯುವಕ ಬಂದಿದ್ದ ಇನೋವಾ(Innova) ಕಾರಿನಲ್ಲೇ ಕೊಲೆಗೈದು ಸುಟ್ಟು…

Read More

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು ಆನಂದಪುರ : ಇಲ್ಲಿನ ಸಮೀಪದ ಹೊಸಕೊಪ್ಪ ಬಳಿಯಲ್ಲಿ ಬೈಕ್ ಸವಾರ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೆಣಸಿನಸರ  ಗ್ರಾಮದ ನಿವಾಸಿ ಷಣ್ಮುಖಪ್ಪ ( 65 ) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೋಮವಾರ ಸಂಜೆ ಹೊಸಕೊಪ್ಪ ತಿರುವಿನಲ್ಲಿ ಈ ಅಪಘಾತ ನಡೆದಿದ್ದು ತಕ್ಷಣ ಗಾಯಾಳುಗಳನ್ನು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿ…

Read More

Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳ ನಾಲ್ಕು ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನೇಶ್ ಮೂಡುಬ ಎಂಬಾತನಿಗೆ ಸೇರಿದ(KA 19 AD 2001) ,ಸುರೇ೦ದ್ರಕೋಟ್ಯಾನ್…

Read More

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಸಮೇತ ವಾಹನ ವಶಕ್ಕೆ | Crime News

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ ಆನಂದಪುರ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ರಬ್ಬರ್ ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ. ಆರೋಪಿಗಳಾದ ರಾಘವೇಂದ್ರ @ರಾಘು ಹರತಾಳು, ಪ್ರವೀಣ್ ಹುಳಿಗದ್ದೆ , ನಾಗಭೂಷಣ್@ನಾಗ ಶಿವಪುರ ಮತ್ತು ಪ್ರತಾಪ್ ಸಿಂಗ್ ವಡಗೆರೆ ಬಂಧಿತ ಆರೋಪಿಯಾಗಿದ್ದಾರೆ. 2023 ರ ಆಗಸ್ಟ್ ತಿಂಗಳಿನಲ್ಲಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆರೆಹಿತ್ಲು…

Read More

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ ನ್ಯಾಮತಿ : ಕಡದಕಟ್ಟೆ ಗ್ರಾಮದ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ದೂರು ಕೊಟ್ಟ 24 ಗಂಟೆಯೊಳಗೆ ತನಿಖೆ ನಡೆಸಿದ ನ್ಯಾಮತಿ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡದಕಟ್ಟೆ ನಿವಾಸಿ ರವಿನಾಯ್ಕ್(44) ಬಂಧಿತ ಆರೋಪಿಯಾಗಿದ್ದಾನೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕಡದಕಟ್ಟೆ ನಿವಾಸಿ ಅಶೋಕ್…

Read More

Ripponpete | ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ |

ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಪಿಎಸ್ಐ ನಿಂಗರಾಜ್ | ಕಿಡಿಕೇಡಿಗಳ ನಿದ್ದೆಗೆಡಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಸಿಸಿಟಿವಿ ಕಣ್ಗಾವಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಪಿಎಸ್‌ಐ ನಿಂಗರಾಜ್ ಕೆ ವೈ ತೆಗೆದುಕೊಂಡ ಕ್ರಮ ಕಿಡಿಗೇಡಿಗಳ ನಿದ್ದೆಗೆಡಿಸಿದೆ. ಹೌದು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ , ಕೋಡೂರು ಗ್ರಾಮಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕೆಲವು ಘಟನೆಗಳು ಪೊಲೀಸರ ತಲೆ ನೋವಿಗೆ…

Read More

Ripponpete | ಅರಸಾಳುವಿನಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಅರಸಾಳು ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಅರಣ್ಯ ಇಲಾಖೆ ಕಛೇರಿಯ ಮುಂಭಾಗದ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸಾಳು ಅರಣ್ಯ ಇಲಾಖೆಯ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಬೆಳಿಗ್ಗೆ 7.45 ರ ಬೆಂಗಳೂರು – ತಾಳಗುಪ್ಪ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಮೃತ ವ್ಯಕ್ತಿಯ ಮಾಹಿತಿ ಇನ್ನೂ ತಿಳಿದುಬಂದಿರುವುದಿಲ್ಲ. ಘಟನೆಯಲ್ಲಿ ವ್ಯಕ್ತಿಯ ರುಂಡ ಮುಂಡ ಬೇರ್ಪಟ್ಟಿದ್ದು ರೈಲಿಗೆ ತಲೆ ಇಟ್ಟು…

Read More