Headlines

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ…

Read More

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು!| Crime News

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು! ತನ್ನನ್ನು ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಯುವಕನ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಗೊಂದಿಚಟ್ನಿ ಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ (14) ಆತ್ಮಹತ್ಯೆಗೆ ಶರಣಾದ ಬಾಲಕಿ. ತ್ಯಾಗರಾಜ್ ಎಂಬ ಯುವಕ ಬಾಲಕಿಗೆ ತನ್ನನ್ನು ಪ್ರೀತಿಸು ಎಂದು ಬೆನ್ನುಬಿದ್ದಿದ್ದ. ಆದರೆ ಬಾಲಕಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಸುಮಾರು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ತ್ಯಾಗರಾಜ್ ಬಾಲಕಿಗೆ ಟಾರ್ಚರ್ ನೀಡಿದ್ದು,…

Read More

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಕಳ್ಳತನವಾದ ಬೈಕ್‌ನ್ನು ಕೇವಲ 2 ಗಂಟೆಯೊಳಗೆ ಪತ್ತೆ ಮಾಡಿ ಮಾಲು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ತೊಪ್ಪಿನಘಟ್ಟದ ಡ್ರೈವರ್ ಕೆಲಸ ಮಾಡುವ 23 ವರ್ಷದ ಸತೀಶ್ ಎಲ್ ಎಸ್ ಹಾಗೂ ಅಪ್ರಾಪ್ತ (ಕಾನೂನು ಸಂಘರ್ಷಕ್ಕೊಳಗಾದ ಬಾಲಕ) ಸೇರಿದಂತೆ ಇಬ್ಬರು ಬಂಧಿತ ಆರೋಪಿಗಳಾಗಿದ್ದಾರೆ. ಶನಿವಾರ ರಾತ್ರಿ ದೂನ…

Read More

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು | Crime News

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು 13 ವರ್ಷದ ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಟ್ರೇಶ್ ಮೃತ ಬಾಲಕನಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಬಾಲಕ ಶಾಲೆ ಮುಗಿಸಿ ಮನೆಗೆ ಬಂದು ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಹಗ್ಗ ಸಿಲುಕಿ ಈ ಸಂಭವಿಸಿದೆ. ಶನಿವಾರ ಮುಂಜಾನೆಯ ಶಾಲೆ ಮುಗಿಸಿ ಮನೆಗೆ ಬಂದ…

Read More

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ | Crime News

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ  ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ.  ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ…

Read More

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ ಹೊಸನಗರ : ಮಾರುತಿ ಓಮಿನಿ‌ ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾದ ಘಟನೆ ಕರಿನಗೊಳ್ಳಿ ಸಮೀಪದಲ್ಲಿ ನಡೆದಿದೆ. ಕಾರಿನಲ್ಲಿದ್ದ 4 ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ. ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಮಾರುತಿ ಓಮ್ನಿ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಹೊಸನಗರ ಕಡೆಗೆ…

Read More

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….

Read More

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ | Crime News

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೇ ಕೋಡಿಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ್ (29) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಈತ ಫೆ.19 ರಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು, ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ…

Read More

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

Hosanagara | ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಕಾರ್ಪೆಂಟರ್ ರಾಘು ಆತ್ಮಹತ್ಯೆ

ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಕಾರ್ಪೆಂಟರ್ ರಾಘು ಆತ್ಮಹತ್ಯೆ ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ 45 ರ ಹರೆಯದ ಕಾರ್ಪೆಂಟರ್ ವೃತ್ತಿ ಮಾಡುವ ರಾಘವೇಂದ್ರ ಆಚಾರ್ ಇಂದು ಸೋಮವಾರ ಮಧ್ಯಾಹ್ನ ಸಾಗರ ರಸ್ತೆಯ ಕಳೂರು ಗ್ರಾಮದ ಅಕೇಶಿಯ ಪ್ಲಾಂಟೇಶನ್ ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ರಾಘವೇಂದ್ರ ಉತ್ತಮ ಮರಗೆಲಸ ಮಾಡುತ್ತಿದ್ದು ವಿವಾಹಿತನಾಗಿದ್ದು ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು ಬಳಗದವರನ್ನು ಹೊಂದಿದ್ದು ಆತನು ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ…

Read More