ಕ್ರೈಂ ಸುದ್ದಿ:
ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ 30 ಸಾವಿರ ರೂ. ದಂಡ
ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ 30 ಸಾವಿರ ರೂ. ದಂಡ ಶಿವಮೊಗ್ಗ : 17 ವರ್ಷದ ಬಾಲಕನಿಗೆ ವಾಹನ ಚಾಲನ ಪರವಾನಗಿ ಇಲ್ಲದೇ ದ್ವಿಚಕ್ರ ವಾಹನ ನೀಡಿದ್ದ ತಾಯಿಗೆ ಶಿವಮೊಗ್ಗ ನ್ಯಾಯಾಲಯ 30 ಸಾವಿರ ರೂ. ದಂಡ ವಿಧಿಸಿದೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಪಿಎಂ ರಸ್ತೆ ಬಳಿ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುವಾಗ ಬಾಲಕನನ್ನು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ, ಆತ ಅಪ್ರಾಪ್ತನಾಗಿರುವುದು ಮತ್ತು ಚಲಾಯಿಸುತ್ತಿದ್ದ ಬೈಕ್ ಆತನ…
ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard
ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…
ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ
ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್ನಲ್ಲಿ ರೆಸ್ಟೋರೆಂಟ್ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…
ಖಬರ್ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News
ಖಬರ್ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…
ನಿಗೂಢ ಕೆಲಸಕ್ಕಾಗಿ 42 ಸಿಮ್ ಖರೀದಿ – ನಾಲ್ವರು ಯುವಕರ ಬಂಧನ
ನಿಗೂಢ ಕೆಲಸಕ್ಕಾಗಿ 42 ಸಿಮ್ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…
ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ | Crime News
ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಎಚ್ಎಂ ಟಿಂಬರ್ ಆಯಂಡ್ ಫರ್ನಿಚರ್ ಅಂಗಡಿ ಹಿಂಭಾಗದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆ ಸಂಬಂಧ ಆರೋಪಿ ಮೋಮಿನ್ ಎಂಬಾತನನ್ನು ಬಂಧಿಸಿದ ಪೊಲೀಸರು. ಹಿಂದೂ ಸಂಘಟನೆ ಕಾರ್ಯಕರ್ತ ಅರಳಿಹಳ್ಳಿ ದೇವರಾಜ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ರಾಶಿ ರಾಶಿ ಗೋವಿನ ಮೂಳೆ ಪತ್ತೆ ಮಾಡಿದ್ದಾರೆ….
Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??
Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!?? ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ…
ಅಕ್ರಮ ಗೋ ಸಾಗಾಟ – ವಾಹನ ಸಮೇತ ಹಸುಗಳನ್ನು ಪೊಲೀಸ್ ವಶಕ್ಕೆ ನೀಡಿದ ಸ್ಥಳೀಯರು | crime news
ಅಕ್ರಮ ಗೋ ಸಾಗಾಟ – ವಾಹನ ಸಮೇತ ಪೊಲೀಸ್ ವಶಕ್ಕೆ! ತೀರ್ಥಹಳ್ಳಿ : ಯಾವುದೇ ದಾಖಲೆ ಇಲ್ಲದೆ ಟಾಟಾ ಲೈಲ್ಯಾಂಡ್ ವಾಹನದಲ್ಲಿ 3 ಹಸುಗಳನ್ನು ತುಂಬಿಕೊಂಡು ಹೋಗುತ್ತಿದ್ದಾಗ ಕುರುವಳ್ಳಿಯಲ್ಲಿ ಸ್ಥಳೀಯರು ಹಿಡಿದು ವಾಹನ ಸಮೇತ ಹಸುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಂಠಿಕಟ್ಟೆಯಿಂದ – ಭದ್ರಾವತಿಗೆ ಹಸುವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು ಯಾವುದೇ ದಾಖಲಾತಿ ಇರದ ಕಾರಣ ವಶಕ್ಕೆ ಪಡೆಯಲಾಗಿದೆ. ಯಾವ ಕಾರಣಕ್ಕೆ ಹಸು ಸಾಗಿಸಲಾಗುತ್ತಿತ್ತು ಎಂಬುದು ತಿಳಿದು ಬಂದಿಲ್ಲ. ದಾಖಲೆ ಇಲ್ಲದ ಕಾರಣ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು ತೀರ್ಥಹಳ್ಳಿ…
ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ
ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ ಹೊಸನಗರ(Hosanagara) ತಾಲೂಕಿನ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 25 ವರ್ಷದ ಯುವಕನಿಗೆ ಶಿವಮೊಗ್ಗ(shivamogga)ದ ಫಾಸ್ಟ್ಟ್ರ್ಯಾಕ್ ಸ್ಪೆಷಲ್ ಕೋರ್ಟ್ 20 ವರ್ಷಗಳ ಕಠಿಣ ಸಜೆ ವಿಧಿಸಿದೆ. ಹೊಸನಗರ ತಾಲೂಕು ಗ್ರಾಮ ಒಂದರಲ್ಲಿ 2022ರಲ್ಲಿ ಆರೋಪಿ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇದರಿಂದ ಬೇಸತ್ತ ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಇದಾದ ಬಳಿಕ ಬಾಲಕಿ ಹೊಸನಗರ…
ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು | Crime News
ಪ್ರೀತಿಗೆ ಪೋಷಕರ ನಿರಾಕರಣೆ – ಅಣ್ಣ ತಂಗಿ ವರಸೆಯ ಪ್ರೇಮಿಗಳಿಬ್ಬರು ನೇಣಿಗೆ ಶರಣು ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು…