ಕ್ರೈಂ ಸುದ್ದಿ:
Shikaripura | ಹೋರಿ ಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!
Shikaripura | ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು! ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು…
Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು
Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು ಮಲೆನಾಡಿನಲ್ಲೊಂದು ಲವ್, ಮ್ಯಾರೇಜ್ ಮೋಸ ಪ್ರಕರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ಆದರೆ ವಿಚಿತ್ರವೇನೆಂದರೇ ಹಲವಾರು ಪ್ರಕರಣಗಳಲ್ಲಿ ಯುವಕ ಯುವತಿಗೆ ಮೋಸ ಲವ್ ,ಮ್ಯಾರೇಜ್ ದೋಖಾ ಮಾಮೂಲಿ ಆದರೆ ಈ ಪ್ರಕರಣ ಸ್ವಲ್ಪ ತದ್ವಿರುದ್ದವಾಗಿದೆ. ಘಟನೆಯ ಹಿನ್ನಲೆ : ಶಿವಮೊಗ್ಗದ ಬೊಮ್ಮನ್ ಕಟ್ಟೆಯ ನಿವಾಸಿ ಸಂಕೇತ್ ಎಂಬ ಯುವಕನಿಗೆ ಹೊಸನಗರ ತಾಲೂಕಿನ ಹೆಂಡೆಗದ್ದೆ ಗ್ರಾಮದ ನಿವಾಸಿ ಸನ್ನಿಧಿ…
Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ
Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪಿಎಸ್ಐ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದ್ದಾರೆ. ಸೋಮವಾರ ರಾತ್ರಿ ಖಚಿತ ಮಾಹಿತಿಯ ಹಿನ್ನಲೆಯಲ್ಲಿ ಪಟ್ಟಣದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ…
SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು
SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು ಸಾಗರ : ಯುವಕನೋರ್ವ ಪಾನಮತ್ತನಾಗಿ ನಡು ರಸ್ತೆಯಲ್ಲಿ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ. ನಕಲಿ ಗನ್ ಹಿಡಿದು ಯುವಕ ಪಾನಮತ್ತನಾಗಿ ನಡು ರಸ್ತೆಯಲ್ಲಿ ಶೂಟ್ ಮಾಡುತ್ತೇನೆ ಎಂದು ಸ್ಥಳೀಯರಿಗೆ ಧಮ್ಕಿ ಹಾಕಿದ್ದಾನೆ. ಗನ್ ನೋಡಿ ಕೆಲಕಾಲ ಜನರು ಭಯಭೀತರಾಗಿದ್ದಾರೆ. ಅವಾಜ್ ಹಾಕಿದ ಯುವಕನಿಗೆ ಸ್ಥಳೀಯ ಯುವಕರು ಥಳಿಸಿದ್ದಾರೆ. ಪ್ರಕರಣ ಸಂಬಂಧ ಸಾಗರ ಪೊಲೀಸರು ಇಬ್ಬರನ್ನು…
Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ
ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…
NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ
NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ ಶಿವಮೊಗ್ಗ : ಕಳೆದ 6 ತಿಂಗಳಲ್ಲಿ ನಡೆದ ಗಾಂಜಾ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ 825 ಗ್ರಾಂ ಒಣ ಗಾಂಜಾವನ್ನ ಇಂದು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಸಮ್ಮುಖದಲ್ಲಿ ನಾಶ ಪಡಿಸಲಾಯಿತು. ಜಿಲ್ಲೆಯಾದ್ಯಂತ 42 ಎನ್ ಡಿ ಪಿ ಎಸ್ ಪ್ರಕರಣಗಳು ದಾಖಲಾಗಿದ್ದು ಈ ವೇಳೆ ಸಂಗ್ರಹಿಸಲಾದ ಗಾಂಜಾವನ್ನ ಬೆಂಕಿಗೆ ಹಾಕಿ…
ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News
ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ – ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …
ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ 30 ಸಾವಿರ ರೂ. ದಂಡ
ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಾಯಿಗೆ 30 ಸಾವಿರ ರೂ. ದಂಡ ಶಿವಮೊಗ್ಗ : 17 ವರ್ಷದ ಬಾಲಕನಿಗೆ ವಾಹನ ಚಾಲನ ಪರವಾನಗಿ ಇಲ್ಲದೇ ದ್ವಿಚಕ್ರ ವಾಹನ ನೀಡಿದ್ದ ತಾಯಿಗೆ ಶಿವಮೊಗ್ಗ ನ್ಯಾಯಾಲಯ 30 ಸಾವಿರ ರೂ. ದಂಡ ವಿಧಿಸಿದೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಪಿಎಂ ರಸ್ತೆ ಬಳಿ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುವಾಗ ಬಾಲಕನನ್ನು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ, ಆತ ಅಪ್ರಾಪ್ತನಾಗಿರುವುದು ಮತ್ತು ಚಲಾಯಿಸುತ್ತಿದ್ದ ಬೈಕ್ ಆತನ…
ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard
ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…
ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ
ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್ನಲ್ಲಿ ರೆಸ್ಟೋರೆಂಟ್ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…