ಕ್ರೈಂ ಸುದ್ದಿ:
ಕಸ ಹಾಕುವ ವಿಚಾರದ ಗಲಾಟೆ ವಿಕೋಪಕ್ಕೆ – ಸ್ವಂತ ಅಣ್ಣನ ಮಗನನ್ನೆ ಮನಬಂದಂತೆ ಚಾಕುವಿನಿಂದ ಇರಿದ ವ್ಯಕ್ತಿ | Crime News
ಕಸ ಹಾಕುವ ವಿಚಾರ ಗಲಾಟೆ ವಿಕೋಪಕ್ಕೆ – ಸ್ವಂತ ಅಣ್ಣನ ಮಗನನ್ನೆ ಮನಬಂದಂತೆ ಚಾಕುವಿನಿಂದ ಇರಿದ ವ್ಯಕ್ತಿ ಕಸದ ವಿಚಾರವಾಗಿ ನಡೆದ ಗಲಾಟೆ ಅಣ್ಣನ ಮಗನಿಗೇ ಚಾಕು ಇರಿಯುವ ಹಂತಕ್ಕೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಂಡೆನಕೊಪ್ಪ ಗ್ರಾಮದಲ್ಲಿ ನಡೆದಿದೆ. ಅಣ್ಣನ ಮಗ ಆಕಾಶ್ ಗೆ ಉಮೇಶ್ ಎಂಬಾತ ಮನಬಂದಂತೆ ಚಾಕು ಇರಿದಿದ್ದು, ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಠಾಣೆ ಪೊಲೀಸರು ಉಮೇಶ್ ನನ್ನು ಬಂಧಿಸಿದ್ದಾರೆ. ನಡೆದಿದ್ದೇನು..?? ಕಸ ಹಾಕುವ ವಿಚಾರಕ್ಕೆ ಉಮೇಶ್ ಹಾಗೂ…
ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing
ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ…
ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested
ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested ಮನೆ ಹಿತ್ತಲಲ್ಲಿ ಗಾಂಜಾ ಕೃಷಿ ಮಾಡ್ತಿದ್ದ ಆರೋಪಿಯನ್ನು ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಬಂಧಿಸಿದ್ದಾರೆ. ಮರಾಠಿಕ್ಯಾಂಪ್ನ ಯುವಕನನ್ನ ಅರೆಸ್ಟ್ ಮಾಡಿದ್ದ ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಇದೀಗ ಮನೆ ಹಿತ್ತಲಲ್ಲಿ ಗಾಂಜಾ ಬೆಳದಿದ್ದ ಆರೋಪಿಯನ್ನ ಮಾಲು ಸಮೇತ ಹಿಡಿದ್ದಿದ್ದಾರೆ. ದಿನಾಂಕ 28-12-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ವಾಸಿ ನಜರತ್ ನು ತನ್ನ ಮನೆಯ ಹಿಂಬದಿ ಜಾಗದಲ್ಲಿ ಮಾದಕ ವಸ್ತು ಗಾಂಜಾ ಗಿಡಗಳನ್ನ…
Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ
Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ನೌಕರರು ಚೀಟಿ ಹಾಕಲ್ಲ ಎಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ಹೊಸನಗರ ನ್ಯಾಯಲಯದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಚೀಟಿ ಹಾಕಲ್ಲ ಎಂದವನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಹಿನ್ನಲೆ : ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ಏಜೆಂಟ್…
Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು
Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿದ್ದ ಕಾರನ್ನು ರಿಪ್ಪನ್ಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆವಿನಹಳ್ಳಿ ಸಮೀಪದ ಕುರುವಂತೆ ಗ್ರಾಮದ ನವೀನ್ ಕುಮಾರ್ ಇಂದು ಸಂಜೆ ವಡಗೆರೆ ಶಾಲೆ ಮುಂಭಾಗದಲ್ಲಿ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಆದರೆ ಅಪಘಾತ…
Ripponpete | ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು
ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಆವಿನಹಳ್ಳಿ ಸಮೀಪದ ಗುರುವಂತೆ ಗ್ರಾಮದ ನವೀನ್ ಕುಮಾರ್ ಜಿ ಕೆ ಎಂದು ಆತನ ಡ್ರೈವಿಂಗ್ ಲೈಸೆನ್ಸ್ ಆಧಾರದ ಮೇಲೆ ಗುರುತಿಸಲಾಗಿದೆ. ಆನಂದಪುರ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಬೈಕ್ ನಡು ರಸ್ತೆಯಲ್ಲಿ ಅಪಘಾತವಾಗಿ ಯುವಕನ ತಲೆ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ….
Anandapura | ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು
ಸಾಗರ : ತಾಲೂಕಿನ ನೀಚಡಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55 ) ಮೃತ ದುರ್ದೈವಿ. ನೀಚಡಿಯ ತೋಟದ ಹತ್ತಿರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Accident | ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತಿದ್ದ ಕಾರು ಅಪಘಾತ
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದ್ದ ಕಾರು ಅಪಘಾತ ಶಿವಮೊಗ್ಗ : ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತವಾಗಿದ್ದು, ಲಾರಿ ಕಾರನ್ನು ತೀವ್ರವಾಗಿ ಉಜ್ಜಿಕೊಂಡಿದೆ. ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ…
Shivamogga | ನಾಯಿ ಮೇಲೆ ಗುಂಡಿನ ದಾಳಿ – ದೂರು ದಾಖಲು
Shivamogga | ನಾಯಿ ಮೇಲೆ ಗುಂಡಿನ ದಾಳಿ – ದೂರು ದಾಖಲು ಶಿವಮೊಗ್ಗ : ಸಾಕು ನಾಯಿಯೊಂದು ಮತ್ತೊಂದು ಸಾಕು ನಾಯಿಗೆ ಕಚ್ಚಿದೆ ಎಂಬ ಕಾರಣಕ್ಕೆ ಗುಂಡು ಹಾರಿಸಿದ ಘಟನೆ ನಡೆದಿದ್ದು ಈ ಘಟನೆ ವಿರುದ್ಧ ನಾಇಯ ಮಾಲೀಕರು ದೂರು ದಾಖಲಿಸಲಾಗಿದೆ. ಅಮೀರ್ ಅಹ್ಮದ್ ಕಾಲೋನಿಯಲ್ಲಿ ಚಂದ್ರಿಕಾ ಎಂಬುವರು ಸುರಕ್ಷತೆಯ ದೃಷ್ಟಿಯಿಂದ ಹಾಗೂ ಮನೆಯಲ್ಲಿ ಕಳ್ಳತನವನ್ನ ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಸುಮಾರು 8 ವರ್ಷಗಳಿಂದ ಒಂದು ಹೆಣ್ಣು ನಾಯಿಯನ್ನು ಸಾಕಿಕೊಂಡಿದ್ದರು. ಡಿ.20 ರಂದು ಚಂದ್ರಿಕಾರವರ ಸಾಕು…
ತೀರ್ಥಹಳ್ಳಿಯಲ್ಲಿ ಐಷಾರಾಮಿ ಕಾರುಗಳಲ್ಲಿ ದನಗಳ ಸಾಗಾಟ !?ವೀಡಿಯೋ ವೈರಲ್ | Crime News
ತೀರ್ಥಹಳ್ಳಿಯಲ್ಲಿ ಐಷಾರಾಮಿ ಕಾರುಗಳಲ್ಲಿ ದನಗಳ ಸಾಗಾಟ !? ತೀರ್ಥಹಳ್ಳಿ : ಐಷಾರಾಮಿ ಕಾರುಗಳಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂಬುದಾಗಿ ಕಳೆದ 4 ದಿನಗಳಿಂದ ಪಟ್ಟಣದಲ್ಲಿ ಚರ್ಚೆ ಆಗುತ್ತಿದ್ದು ಅದಕ್ಕೆ ಪುಷ್ಟಿ ನೀಡುವಂತೆ ಇಂದು ವಿಡಿಯೋವೊಂದು ವೈರಲ್ ಆಗಿದೆ. ಸೀಬಿನಕೆರೆಯ ನ್ಯಾಯಾಲಯದ ಮುಂಭಾಗ ಮಧ್ಯರಾತ್ರಿ ಹೈಟೆಕ್ ಕಾರ್ ನಲ್ಲಿ ದನಗಳನ್ನು ಸಾಗಣೆ ಮಾಡಲಾಗಿದೆ. ಪಟ್ಟಣದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಇದನ್ನೇ ಪ್ಲಸ್ ಮಾಡಿಕೊಂಡ ದನ ಸಾಗಾಣಿಕೆಕಾರರು ಕಾರುಗಳಲ್ಲಿ ಹಾಗೂ ಪಿಕಪ್ ಇತರೆ ವಾಹನಗಳಲ್ಲಿ ದನ ಸಾಗಣೆ ಮಾಡುವ…