Headlines

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ|arrested

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ ಸಾಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಂಟಿ ಮನೆಗಳ ಗುರುತಿಸಿ ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪಶ್ಚಿಮಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆ, ಭಗಂಗೋಲ್ ತಾಲೂಕಿನ ರಾಣಿಲ್ ಗ್ರಾಮದ ಹದೀದ್ ಷಾ ಬಂಧಿತ ಆರೋಪಿ. ಈತ ಆವಿನಹಳ್ಳಿ ಹೋಬಳಿಯ ಕೋಳೂರು, ಗೆಣಸಿನಕುಣಿ, ಗಿಣಿವಾರ, ಕೌತಿ, ಹುಲಿದೇವರಬನ, ಅಂಬಾರಗೋಡ್ಲು ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಸುತ್ತಾಡುತ್ತಿದ್ದ….

Read More

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !!!|students drowned in Tunga river

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !! ಶಿವಮೊಗ್ಗ : ಮೀನು ಹಿಡಿಯಲೆಂದು ತುಂಗಾ ನದಿಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಮೊಯಿನ್‌ ಖಾನ್‌(18) ಮತ್ತು ಅಂಜುಂ ಖಾನ್‌(18) ನೀರಿನಲ್ಲಿ ಕಣ್ಮರೆಯಾದವರು. ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು…

Read More

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ|arrested

ಬಸ್ ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಸಗಿ ಬಸ್‌ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಸಾಗರ ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ…

Read More

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching

ಸಾಗರ – ಬೈಕ್ ಮೇಲೆ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ|chine snatching ಸಾಗರ : ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ…

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ|sand

ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|viral

ತೀರ್ಥಹಳ್ಳಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್​ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್​ ಆಗಿ ಕೇಸ್​ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ.  ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ  ಕೇಸ್​ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು….

Read More

ರೈಲ್ವೆ ಪೊಲೀಸರ ಮಿಂಚಿನ ಕಾರ್ಯಾಚರಣೆ – ತಾಮ್ರದ ತಂತಿ ಕಳ್ಳತನವೆಸಗಿದ್ದ ಆರೋಪಿಗಳ ಬಂಧನ|arrested

2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿ ಕಳ್ಳತನ ; ಆರೋಪಿಗಳ ಬಂಧನ ಸಾಗರ : ಆನಂದಪುರ ಬಳಿ ಸುಮಾರು 2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ. ಸೆ.13 ರಂದು ರಾತ್ರಿ ರೈಲ್ವೆ ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ…

Read More

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ|arrested

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಆರೋಪಿ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ. ಅರಾಫತ್ ಅಲಿ ಕೀನ್ಯಾದ ನೈರೋಬಿಯಿಂದ ಬರುತ್ತಿದ್ದಾಗ ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಈ ಮೂಲಕ ವಿದೇಶಿ ಮೂಲದ ಮಾಡ್ಯೂಲ್‌ಗಳ ಪಿತೂರಿಯನ್ನು ಎನ್‌ಐಎ ಭೇದಿಸಿದಂತಾಗಿದೆ. ಈ ಬೆಳವಣಿಗೆಯಿಂದ ಎನ್‌ಐಎ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಐಸಿಸ್ ಪ್ರಚಾರ ಚಟುವಟಿಕೆಯಲ್ಲಿ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More