ಕ್ರೈಂ ಸುದ್ದಿ:
ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft
ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….
ರಿಪ್ಪನ್ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ|crime news
ರಿಪ್ಪನ್ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ರೈತನೊಬ್ಬ ಸಾಲಭಾದೆ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಭಾನುವಾರದಂದು ಬೆಳೆಗೆ ಸಿಂಪಡಿಸಿದ್ದ ಕ್ರಿಮಿನಾಶಕವನ್ನು ಸೇವನೆ ಮಾಡಿ ಅಸ್ವಸ್ಥಗೊಂಡವರನ್ನು ಅವರ ಹೆಂಡತಿ ಮಗ ಉಪಚರಿಸಿ ತಕ್ಷಣ ಚಿಕಿತ್ಸೆಗಾಗಿ ರಿಪ್ಪನ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…
ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident
ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಿಪ್ಪನ್ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ. ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…
ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident
ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36) ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…
ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರು ನಡುವೆ ಡಿಕ್ಕಿ – 9 ಮಂದಿಗೆ ಗಾಯ
ಕೆಎಸ್ಆರ್ಟಿಸಿ ಬಸ್ಸು- ಕಾರು ಡಿಕ್ಕಿ, 9 ಮಂದಿಗೆ ಗಾಯ ಶಿವಮೊಗ್ಗದಿಂದ ತರೀಕೆರೆಗೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ….
ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!!|awareness news
ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!! ಶಿವಮೊಗ್ಗ : ಚಾಲನಾ ಪರವಾನಗಿ (ಡಿ.ಎಲ್) ಇಲ್ಲದೇ ಒಮಿನಿ ವಾಹನ ಚಲಾಯಿಸುತ್ತಿದ್ದ ಬಾಲಕನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹ 25 ಸಾವಿರ ದಂಡ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದ ನಿವಾಸಿ ಇಲಿಯಾಸ್ (41) ದಂಡ ಪಾವತಿಸಬೇಕಾದವರು. ಇಲಿಯಾಸ್ ಅವರ 17 ವರ್ಷದ ಪುತ್ರ ಕಳೆದ ಸೆ.9ರಂದು ಶಿವಮೊಗ್ಗ ನಗರದಲ್ಲಿ ಒಮಿನಿ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಕರ್ನಾಟಕ ಸಂಘದ ಬಳಿಯ…
ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ..!!|crime news
ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ! ತೀರ್ಥಹಳ್ಳಿ: ಬೆಂಗಳೂರಿಂದ ಭೀಮನ ಕಟ್ಟೆಗೆ ಪ್ರವಾಸಕ್ಕೆ ಬಂದಿದ್ದ ಮೂರು ಯುವಕರಲ್ಲಿ ಇಬ್ಬರು ಯುವಕರು ನೀರಿನಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದರು. ಇವರು ನೀರಿನಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿ ರಾತ್ರಿಯಿಡಿ ತೀರ್ಥಹಳ್ಳಿ ಪೊಲೀಸರು,ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು. ಇದೀಗ ಗೌತಮ್ ( 26) ವರ್ಷ ಅವರ ಮೃತದೇಹವನ್ನು ನೀರಿನಿಂದ ಮೇಲೆ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.
ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕ ದಳದಿಂದ ಶೋಧ|missing
ಭೀಮನಕಟ್ಟೆ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕದಳದಿಂದ ಶೋಧ ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಯಲ್ಲಿ ತೊಡಕಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ 27 ವರ್ಷ ಹಾಗೂ ಸಂಜಯ್ 25 ನೀರಿನಲ್ಲಿ ಮುಳುಗಿರುವ ಯುವಕರು ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದಿಂದ ನಾಪತ್ತೆಯಾಗಿರುವ ಯುವಕರ ತೀವ್ರ ಶೋಧ…
ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire
ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕಾರು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಂತೆ ಡಸ್ಟರ್ ಕಾರು ಧಗ ಧಗನೆ ಹೊತ್ತು ಉರಿದಿರುವ ಘಟನೆ ಇಂದು ಮಧ್ಯಾಹ್ನ ಶಿವಮೊಗ್ಗದ ಹೊರವಲಯದಲ್ಲಿ ಸಂಭವಿಸಿದೆ. ನಗರದ ಮುದ್ದಿನಕೊಪ್ಪದ ಬಳಿ ಭದ್ರಾವತಿಯ ಸಿದ್ದಾಪುರದ ಕಿರಣ್ ಕುಮಾರ್ ಎಂಬುವರ ಡಸ್ಟರ್ ಕಾರು ಕೆಎ 25 ಎಂ ಎ 1169 ಕ್ರಮ ಸಂಖ್ಯೆಯ ಡಸ್ಟರ್ ಕಾರಿನಲ್ಲಿ ಮುಂದಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರಸ್ತೆ ಬದಿಗೆ ಕಾರು…
ಅಕ್ಕಿ ಕಳ್ಳತನದ ಆರೋಪಿಗಳ ಬಂಧನ|arrested
ಶಿವಮೊಗ್ಗ ನಗರದ ಸಾಗರ ರಸ್ತೆ ಎಪಿಎಂಸಿ ಮಾರ್ಕೇಟ್ ನಲ್ಲಿನ ಎನ್.ಬಿ.ಎಂ ಎಂಟರ್ ಪ್ರೈಸಸ್ ನಲ್ಲಿನ ಮಳಿಗೆಯಲ್ಲಿ ಸೆ.04 ರಂದು ಅಕ್ಕಿ ಪಾಕೇಟ್ ಗಳು ಕಳ್ಳತನವಾದ ಬಗ್ಗೆ ಮಂಜುನಾಥ ಬಿ ಎಂ, ಎಂಬುವರು ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಮತ್ತು ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ಎಂ ಡಿ. ಪ್ರಭಾರ ಪ್ರೊಬೇಷನರಿ ಐಪಿಎಸ್ ಕುಮಾರಿ…