ಕ್ರೈಂ ಸುದ್ದಿ:
ರಿಪ್ಪನ್ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested
ರಿಪ್ಪನ್ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…
ಐತಿಹಾಸಿಕ ಚಂದ್ರಗುತ್ತಿ ದೇವಸ್ಥಾನದಲ್ಲಿನ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮೂವರ ಬಂಧನ|CHANDRAGUTTI
SORABA : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆ.3ರಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿತ್ತು. ಹುಂಡಿ ಒಡೆಯುವ ಪ್ರಯತ್ನವಾಗಿತ್ತು. ದೇವರ ಬೆಳ್ಳಿಯ ಮುಖವಾಡವನ್ನು ಕಳಚಲಾಗಿತ್ತು. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ…
ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ|police raid
ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ. ಎಸ್ಪಿ ಮಿಥುನ್ ಕುಮಾರ್ ಹಾಗೂ ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ…
ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news
ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….
2 ಕೆಜಿ ಗಾಂಜಾ ಸಹಿತ ಆರೋಪಿಗಳು ಅರೆಸ್ಟ್! ಗಡಿಪಾರಾದ ರೌಡಿಶೀಟರ್ ನಿಂದ ಆಂಧ್ರದ ಗಾಂಜಾ ಜಿಲ್ಲಾದ್ಯಂತ ಸಪ್ಲೈ..!!???
ಶಿವಮೊಗ್ಗ ಪೊಲೀಸರು ಗಾಂಜಾ ವಿಚಾರದಲ್ಲಿ ಇವತ್ತು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಸಿಟಿ ಲಿಮಿಟ್ನಲ್ಲಿಯೇ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 2 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ಧಾರೆ. ಶಿವಮೊಗ್ಗ ನಗರದ ಎಂ.ಆರ್.ಎಸ್. ನಿಂದ ವಡ್ಡಿನಕೊಪ್ಪದ ಕಡೆಗೆ ಹೋಗುವ ರಸ್ತೆಯ ಸಮೀಪ ಇರುವ ಕೆಇಬಿ ಖಾಲಿ ಜಾಗದಲ್ಲಿ ಕೆಲವರು ಗಾಂಜಾ ಮಾರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ನೇತ್ರತ್ವದಲ್ಲಿ ಸಿಇಎನ್ ಕ್ರೈಂ ಪೊಲೀಸ್ ಠಾಣೆ ದೀಪಕ್, ಎಂ.ಎಸ್ ಟೀಂ …
ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ!|ayanuru
ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ ಯುವಕನಿಗೆ ತನ್ನನ್ನು ಮದುವೆಯಾಗುವ ಯುವತಿಯ ವಯಸ್ಸು ತನಗಿಂತ ಹೆಚ್ಚಿದೆ ಎಂಬ ಕಾರಣವೇ ಮರಣ ಶಾಸನವಾಗಿ ಪರಿಣಮಿಸಿದೆ. ಹೌದು, ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳೆಂಬ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಕಳೆನಾಶಕ ಸೇವಿಸಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವು…
ಫಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ಬಂಧಿಸಿದ ತೀರ್ಥಹಳ್ಳಿ ಪೊಲೀಸರು|arrested
ಶಿವಮೊಗ್ಗದಿಂದ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಯುವಕರಾದ ಯೂಸುಫ್ ಖಾನ್ , ಅತೀಫ್, ಮನೋಜ್ ಎನ್ನುವ ಮೂವರು ತೀರ್ಥಹಳ್ಳಿ ಮೂಲದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನಾ ವಾಮನ್ ಸುತಾರ್ ಅವರ ಮಾರ್ಗದರ್ಶನದಲ್ಲಿ ಮಾಲೂರು ಠಾಣೆಯ ನವೀನ್ ಮಠಪತಿ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳು ಸೇರಿ ಫಾರ್ಚೂನರ್ ಕಾರನ್ನು ತಡೆದು ಪರಿಶೀಲಿಸಿದಾಗ 200 ಗ್ರಾಂ ಗಾಂಜಾ ಪತ್ತೆಯಾಗಿದೆ. ಕಾರನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿಯ…
ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ|tunga
ಸೆಲ್ಪಿ ತೆಗೆಯಲು ಹೋಗಿ ನೀರುಪಾಲಾದ ಯುವಕ – ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ಕೊಲ್ಲೂರು ಅರಶಿನ ಗುಂಡಿ ಫಾಲ್ಸ್ನ ಘಟನೆ ಕಣ್ಮುಂದೆ ಇರುವಾಗಲೇ ಶಿವಮೊಗ್ಗ ಇನ್ನೊಬ್ಬ ಯುವಕ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ತುಂಗಾ ಡ್ಯಾಂನ ಎದುರು , ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ತಡವಾಗಿ ವರದಿಯಾಗಿದ್ದು, ನಿನ್ನೆಯಿಡಿ ಅಗ್ನಿಶಾಮಕ ಸಿಬ್ಬಂದಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇವತ್ತು ಕೂಡ ಹುಡುಕಾಟ ಮುಂದುವರಿಸುವ ಸಾಧ್ಯತೆ ಇದೆ. ಗಾಜನೂರು ಜಲಾಶಯದ ಮೇಲೆ…
ರಿಪ್ಪನ್ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್ಪೇಟೆ ಪಿಎಸ್ಐ|accident
ರಿಪ್ಪನ್ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್ಪೇಟೆ ಪಿಎಸ್ಐ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯಲ್ಲಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿಯ ಸೇತುವೆ ಬಳಿಯಲ್ಲಿ ರಿಪ್ಪನ್ಪೇಟೆ ಕಡೆಯಿಂದ ಹೊಸನಗರದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ….
ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್ ಮ್ಯಾನೇಜರ್ಗೆ ಜೀವ ಬೆದರಿಕೆ: ಆರೋಪ|FIR
ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್ ಮ್ಯಾನೇಜರ್ಗೆ ಜೀವ ಬೆದರಿಕೆ: ಆರೋಪ ಶಿವಮೊಗ್ಗ ತಾಲೂಕಿನ ಹೊಸಳ್ಳಿ ಶಾಖೆಯ ಯುನಿಯನ್ ಬ್ಯಾಂಕ್ನಲ್ಲಿ ಮ್ಯಾನೇಜರ್ ಒಬ್ಬರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೇ ಸಾಲ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಆ.7ರಂದು ಮಧ್ಯಾಹ್ನವ್ಯಕ್ತಿಯೊಬ್ಬಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ಬ್ಯಾಂಕ್ ಮ್ಯಾನೇಜರ್ ನಿರಂಜನ್ಗೆ ಚಾಕು ತೋರಿಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ. ಚಾಕು ತೋರಿಸಿದ ವ್ಯಕ್ತಿಯನ್ನು ಅದೇ ಮೊದಲು…