ಕ್ರೈಂ ಸುದ್ದಿ:
ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident
ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್ ಸವಾರ ಟರ್ನ್ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್ ಮುಂದಿನ ಬೈಕ್ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಆಯನೂರು…
ರಿಪ್ಪನ್ಪೇಟೆ – ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ|dengue
ರಿಪ್ಪನ್ಪೇಟೆ : ಡೆಂಗ್ಯೂ ಜ್ವರದಿಂದ ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಶಬರೀಶನಗರದಲ್ಲಿ ನಡೆದಿದೆ. ಮಧುರ (31) ಮೃತಪಟ್ಟ ಮಹಿಳೆ,ಕಳೆದ ಆರು ತಿಂಗಳ ಹಿಂದೆ ಶಬರೀಶನಗರದ ಮಂಜುನಾಥ್ ಎಂಬುವವರೊಂದಿಗೆ ವಿವಾಹವಾಗಿತ್ತು. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರದ ಹಿನ್ನಲೆಯಲ್ಲಿ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ನಿನ್ನೆ ಬೆಳಿಗ್ಗೆ ಡಿಸ್ಚಾರ್ಜ್ ಆಗಿ ತಾಯಿ ಮನೆಯಾದ ತಾಳಗುಪ್ಪಕ್ಕೆ ತೆರಳಿದ್ದಾರೆ ರಾತ್ರಿ ಸಮಯದಲ್ಲಿ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಾಗರ ಆಸ್ಪತ್ರೆಗೆ ಕರೆತರಲಾಗಿತ್ತು ಆದರೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಂತೆ…
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿಯಲ್ಲಿ ಬೆಂಕಿ ಅವಘಡ – ಮೂವರ ಸಜೀವ ದಹನ,ಓರ್ವ ಗಂಭೀರ|fire accident
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿಯಲ್ಲಿ ಬೆಂಕಿ ಅವಘಡ – ಮೂವರ ಸಜೀವ ದಹನ,ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ.ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55),…
ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ|court news
ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ. ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ…
ಕೆಂಚನಾಲ : ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ – ಎರಡು ಪ್ರತ್ಯೇಕ ಪ್ರಕರಣ ದಾಖಲು|rpet
ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ ರಿಪ್ಪನ್ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ. ನಡೆದಿದ್ದೇನು..?? ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು…
ರಿಪ್ಪನ್ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident
ರಿಪ್ಪನ್ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಟಿಂಬರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಮರದ ತುಂಡುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ….
ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news
ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ. ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ…
ರಿಪ್ಪನ್ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident
ರಿಪ್ಪನ್ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಹುಂಚ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…
ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ
ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ. ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು. ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್…
ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ|Sagara news
ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು…