ಕ್ರೈಂ ಸುದ್ದಿ:
ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ|theft
ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ : ವಾಯುವಿಹಾರಕ್ಕೆ ಹೋಗಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸರಗಳ್ಳರು ಕಿತ್ತುಕೊಂಡು ಹೋಗಿರುವ ಘಟನೆ ಇಂದು ನಡೆದಿದ್ದು ಕಳ್ಳರ ಚಲನ ವಲನಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಲತಾ ಎಂಬ 50 ವರ್ಷದ ಮಹಿಳೆ ಚಿಕ್ಕಲ್ ನ ಪಾರ್ಕ್ ನಲ್ಲಿ ವಾಕ್ ಗೆ ಹೋಗುವ ವೇಳೆ ಹಿಂಬದಿ ಬೈಕ್ ನಲ್ಲಿ ಬಂದ ಇಬ್ಬರು ಸರಗಳ್ಳರು ಮಹಿಳೆಯ ಮಾಂಗಲ್ಯ ಸರಕ್ಕೆ ಕೈಹಾಕಿದ್ದಾರೆ….
ರಿಪ್ಪನ್ಪೇಟೆ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ|accident
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಆಸ್ಪತ್ರೆಗೆ ದಾಖಲು ರಿಪ್ಪನ್ಪೇಟೆ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಗರ್ತಿಕೆರೆ ನಿವಾಸಿ ನವೀನ್ ಎಂಬಾತನಿಗೆ ಗಂಭೀರ ಪೆಟ್ಟಾಗಿದೆ. ಗರ್ತಿಕೆರೆಯಿಂದ ರಿಪ್ಪನ್ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಪಲ್ಸರ್ ಮತ್ತು ರಿಪ್ಪನ್ಪೇಟೆ ಕಡೆಯಿಂದ ಜ್ಯೋತಿ ಮಾಂಗಲ್ಯ ಮಂದಿರದ ಕಡೆಗೆ ತೆರಳುತಿದ್ದ…
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise
ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಾಪುರ ಹಾಗೂ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಮಾದಾಪುರ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ವಿಜಯ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ಬಾಳೂರು ಗ್ರಾಮದ ಕಿರಾಣಿ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ…
ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested
ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…
ಸಾಗರ : ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ವ್ಯಕ್ತಿಯ ಖಾತೆಯಲ್ಲಿದ್ದ 7.25 ಲಕ್ಷ ರೂ ವಂಚನೆ
ಸಾಗರ : ಬ್ಯಾಂಕ್ನಿಂದ ಪಾನ್ ಅಪ್ಡೇಟ್ಗೆ ಬಂದ ವಾಟ್ಸ್ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ. ನಗರದ ಕೆನರಾ ಬ್ಯಾಂಕ್ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್ರ ಮೊಬೈಲ್ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್ಡೇಟ್ ಮಾಡಲು ವಾಟ್ಸ್ಅಪ್ ಸಂದೇಶ…
ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ – ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು|crime news
ಸಾಗರ : ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಓದುತ್ತಿದ್ದ 19ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ…
ತೀರ್ಥಹಳ್ಳಿ : ಹಾಡಹಗಲೇ ಜನಸಮೂಹದ ಮಧ್ಯೆ ತಲ್ವಾರ್ ಅಬ್ಬರ – ಮೂವರಿಗೆ ಗಾಯ|ಕುಡಿದ ಮತ್ತಿನಲ್ಲಿ ಮಂಗಾಟcrime news
ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ. ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ. ಮತ್ತೊಬ್ಬ…
ರೈಲಿಗೆ ಸಿಲುಕಿ ಯುವಕನ ಕಾಲು ಮುರಿತ|train accident
ಯಶವಂತಪುರ – ಶಿವಮೊಗ್ಗ (16581 Town Express) ರೈಲಿಗೆ ಸಿಲುಕಿ ತರಬೇತಿಯಲ್ಲಿರುವ ಪೊಲೀಸ್ ಸಿಬ್ಬಂದಿಯ ಕಾಲು ತುಂಡಾಗಿದೆ. ಈ ಘಟನೆ ಶಿವಮೊಗ್ಗ ನಗರದ ಮಹಾದೇವಿ ಟಾಕೀಸ್ ಬಳಿ ಇರುವ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಇವತ್ತು ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಗರಾಜ್ ಎಂಬವರ ಕಾಲು ಕಟ್ ಆಗಿದ್ದು, ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಯಶವಂತಪುರದಿಂದ ಬರುತ್ತಿದ್ದ ಟ್ರೈನ್ನಲ್ಲಿ ನಾಗರಾಜ್ ರವರು ಆಗಮನಿಸಿದ್ದಾರೆ. ನಿಲ್ದಾಣದ ಬಳಿ ಅವರು ಇಳಿಯುವಾಗ ಎಡವಿ ಟ್ರೈನ್ಗೆ ಕಾಲು ಸಿಲುಕಿಕೊಂಡಿದೆ. ತಕ್ಷಣವೇ ಅಲ್ಲಿದ್ದವರು ಬಂದು…
12 ದೇವಸ್ಥಾನದಲ್ಲಿ ಹುಂಡಿ ಕಳುವು ಮಾಡಿದ್ದ ಅಂತರ್ ಜಿಲ್ಲಾ ಹುಂಡಿ ಕಳ್ಳರ ಬಂಧನ :
ಶಿವಮೊಗ್ಗ: ಅಂತರ ಜಿಲ್ಲಾ ದೇವಾಲಯಗಳಲ್ಲಿ ಕಳವು ಮಾಡಿದ್ದ ಇಬ್ಬರು ಹುಂಡಿ ಕಳ್ಳರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಹಾವೇರಿ ದಾವಣಗೆರೆ ಜಿಲ್ಲೆಯ ಒಟ್ಟು 12 ದೇವಾಲಯಗಳಲ್ಲಿ ಹುಂಡಿಗಳ ಕಳ್ಳತನ ಮಾಡಿರುವುದು ಬಯಲಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಹೂನ್ನಾಳಿ ತಾಲೂಕು ಬುಳ್ಳಾಪುರ ಗ್ರಾಮದ ಚಿನ್ನು ಅಲಿಯಾಸ್ ಡಿ.ಜೆ (26) ಹಾಗೂ ಶಿವಮೊಗ್ಗ ತಾಲೂಕು ತರಗನಹಳ್ಳಿ ಗ್ರಾಮದ ಮಣಿಕಂಠ ಅಲಿಯಾಸ್ ಮಣಿ(26) ಬಂಧಿತ ಕಳ್ಳರು. ಕಳೆದ ತಿಂಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ದೇವಾಲಯದ ಹುಂಡಿ…
ಕ್ರಿಕೆಟ್ ಬೆಟ್ಟಿಂಗ್ ನಿಂದ ಜೀವ ಕಳೆದುಕೊಂಡನಾ ತೀರ್ಥಹಳ್ಳಿಯ ಯುವಕ !???TTH
ಕ್ರಿಕೆಟ್ ಬೆಟ್ಟಿಂಗ್ ನಿಂದ ಜೀವ ಕಳೆದುಕೊಂಡನಾ ತೀರ್ಥಹಳ್ಳಿಯ ಯುವಕ !? ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಟ್ಟೆಹಕ್ಲಿನಲ್ಲಿ ಮೊಬೈಲ್ ಅಂಗಡಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಿಥುನ್ ಶೆಟ್ಟಿ ( 22 ವರ್ಷ) ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಮಿಥುನ್ ಶೆಟ್ಟಿ ಉತ್ತಮ ಕ್ರಿಕೆಟ್ ಪಟುವಾಗಿದ್ದು, ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾಗಿರುವುದಾಗಿ ನೆರೆಹೊರೆಯವರ ಆರೋಪವಾಗಿದೆ. ಆನ್ ಲೈನ್ ಬೆಟ್ಟಿಂಗ್ ನಿಂದಾಗಿ ಸಾಲವನ್ನು…