ಕ್ರೈಂ ಸುದ್ದಿ:
ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ|accident
ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಸೂಡೂರು ಸೇತುವೆ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋಮೀಟರ್ ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಕುಂದಾಪುರ ಕಡೆಯಿಂದ ಆಗಮಿಸಿದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ…
ಶಾಲಾ ವಾಹನ ಅಪಘಾತ – ಬಸ್ ಗಾಗಿ ಕಾಯುತಿದ್ದ ವ್ಯಕ್ತಿ ಸಾವು|accident
ಶಾಲಾ ವಾಹನಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವಿಶ್ವನಾಥ ಕೊಟ್ರಪ್ಪ ಬಾಜಿಗೊಂಡರ್ (37) ಸಾವನ್ಬಪ್ಪಿರುವ ದುರ್ದೈವಿಯಾಗಿದ್ದಾನೆ. ಬಾಜಿಗೊಂಡರ್ ಹಾವೇರಿ ಜಿಲ್ಲೆಯ ಬೆಳವಗಿ ಗ್ರಾಮದ ನಿವಾಸಿಯಾಗಿದ್ದಾನೆ. ಹಾವೇರಿ ಜಿಲ್ಲೆಯ ವಾಸಿಯಾದ ಬಾಜಿಗೊಂಡರ್ ಶಿವಮೊಗ್ಗದಲ್ಲಿ ಚಾಲಕ ವೃತ್ತಿ ನಿರ್ವಹಿಸುತ್ತಿದ್ದ. ದಾವಣಗೆರೆ ಕಡೆ ಹೋಗಲು ಕೂಡ್ಲಿಗೆರೆಯ ಗ್ರಾಮ ಪಂಚಾಯಿತಿ ಮುಂಭಾಗದ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದನು. ಭದ್ರಾವತಿಗೆ ಬಂದು ಭದ್ರಾವತಿಯ ಮೂಲಕ ದಾವಣಗೆರೆಕಡೆ ಹೊರಡಲು ಸಜ್ಜಾಗಿದ್ದ ಬಾಜಿಗೊಂಡರ್ ಗೆ…
ದೇವಸ್ಥಾನದಲ್ಲಿ ಭಕ್ತರ ಚಿನ್ನ ಕದ್ದಿದ್ದ ತೀರ್ಥಹಳ್ಳಿ ಮೂಲದ ಕಳ್ಳ ಬಂಧನ|arrested
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಭಕ್ತರ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿ ತೀರ್ಥಹಳ್ಳಿ ಮೂಲದ ಬಿ.ಜೆ.ಗಿರೀಶ್ ಎಂದು ತಿಳಿದುಬಂದಿದೆ. ಕಾಸರಗೋಡು ಮೂಲದ ಮಹಿಳೆಯೊಬ್ಬರ ವ್ಯಾನಿಟಿಬ್ಯಾಗ್ನ್ನು ಆರೋಪಿ ಕಳವು ಮಾಡಿದ್ದನು. ಕಳೆದ .ಜೂನ್ 04 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿನ ಆವರಣದಲ್ಲಿ ಕಳ್ಳತನ ನಡೆದಿತ್ತು. ಈ ಪ್ರಕರಣ ಸಂಬಂಧ ಆರೋಪಿಯನ್ನ ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ಧಾರೆ. ಆರೋಪಿ ತೀರ್ಥಹಳ್ಳಿಯ ಕಂಧಕ ಗ್ರಾಮದ ನಿವಾಸಿಯಾಗಿದ್ಧಾನೆ. ಈತನ ಬಳಿಯಿಂದ 4,75,000 ರೂ. ಮೌಲ್ಯದ 108…
ಕಾರು ಮತ್ತು ನವದುರ್ಗ ಬಸ್ಸಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ..!!|accident
ಶಿವಮೊಗ್ಗ : ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ನವದುರ್ಗ ಬಸ್ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ ಎಂದು…
ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|crime news
ತೀರ್ಥಹಳ್ಳಿ: ಮಲೆನಾಡಿನ ತವರೂರು, ಸುಸಂಸ್ಕೃತರ ನಾಡು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿ ಇತ್ತೀಚೆಗೆ ಅಶ್ಲೀಲ ವಿಡಿಯೋ ಪ್ರಕರಣಗಳಿಂದ ಸುದ್ದಿ ಮಾಡುತ್ತಲಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಯುವತಿಯರ ಅಶ್ಲೀಲ ವಿಡಿಯೋಗಳು ಬಾರಿ ಸದ್ದು ಮಾಡುತ್ತಿದೆ. ಈಗ ಮತ್ತೊಂದು ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು ಸತ್ಯಾಸತ್ಯತೆ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕಾಗಿದೆ. ತೀರ್ಥಹಳ್ಳಿಯ ಯುವಕನು ಯುವತಿಯೊಬ್ಬಳೊಂದಿಗೆ ವಾಟ್ಸಪ್ ಚಾಟ್ ನಲ್ಲಿ ಅಶ್ಲೀಲವಾಗಿ ನೆಡೆದುಕೊಂಡಿರುವ ವಿಡಿಯೋ ಹರಿದಾಡುತ್ತಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ…
ರೌಡಿ ಶೀಟರ್ ಸೈಫು ಕಾಲಿಗೆ ಪೊಲೀಸರ ಗುಂಡೇಟು|firing
ಶಿವಮೊಗ್ಗ : ಕೊಲೆ ಯತ್ನ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ನಡೆದಿದೆ. ಮಾರ್ಕೆಟ್ ಫೌಜನ್ ಗ್ಯಾಂಗ್ನ ಸದಸ್ಯನಾಗಿರುವ ರೌಡಿಶೀಟರ್ ಸೈಫುಲ್ಲಾ ಖಾನ್ ಅಲಿಯಾಸ್ ಸೈಫುಗೆ ಜಯನಗರ ಠಾಣೆ ಪಿಎಸ್ಐ ನವೀನ್ರಿಂದ ಫೈರಿಂಗ್ ಮಾಡಲಾಗಿದೆ. ಕೊಲೆ ಪ್ರಕರಣ ಸಂಬಂಧ ಬಂಧಿಸಲು ತೆರಳಿದ್ದಾಗ ಕಾನ್ಸ್ಟೇಬಲ್ ನಾಗರಾಜ್ ಮೇಲೆ ಸೈಫುಲ್ಲಾ ಖಾನ್ನಿಂದ ಹಲ್ಲೆ ಮಾಡಲಾಗಿದೆ. ಆತ್ಮರಕ್ಷಣೆಗಾಗಿ ಸೈಫು ಕಾಲಿಗೆ ಗುಂಡು ಹಾರಿಸಲಾಗಿದೆ. ಸದ್ಯ ಗಾಯಾಳು ಸೈಫುಲ್ಲಾ ಸೇರಿದಂತೆ ಪೊಲೀಸರಿಗೆ ಮೆಗ್ಗಾನ್…
ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಾಯ|accident
ಶಿವಮೊಗ್ಗ : ಮಂಡಗದ್ದೆ ರಸ್ತೆಯಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ಓರ್ವರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಕೆಎ 14 ಪಿ 2982 ಕ್ರಮ ಸಂಖ್ಯೆಯ ಟಾಟಾ ಸಂಸ್ತೆಯ ಕಾರಿಗೆ ಸಕ್ರೇಬೈಲಿನ ಬಳಿಯ ತಿರುವಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎ 11-7360 ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತ ನಡೆದ ಸ್ಥಳದಿಂದ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿ ಇಬ್ಬರು ಇದ್ದಾರೆ ಎಂಬ ಮಾಹಿತಿ ಇದ್ದು ಅದರಲ್ಲಿ…
ರಿಪ್ಪನ್ಪೇಟೆ : ತೋಟದಲ್ಲಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ವೃದ್ದೆ ಸಾವು|snake bite
ಮನೆ ಹಿಂಬಾಗದ ಅಡಿಕೆ ತೋಟದಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಸಮೀಪದ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಮ್ಮ (72 )ಹಾವು ಕಡಿತದಿಂದ ಮೃತಪಟ್ಟ ಮಹಿಳೆಯಾಗಿದ್ದು, ಜಾನುವಾರುಗಳಿಗೆ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಶನಿವಾರ ಮಧ್ಯಾಹ್ನ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿದೆ. ಕೂಡಲೇ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮಹಿಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತದೇಹವನ್ನು ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ…
ಅಂತರ್ ಜಿಲ್ಲಾ ಬೈಕ್ ಕಳ್ಳರು ಪೊಲೀಸರ ಬಲೆಗೆ -11 ಬೈಕ್ ವಶಕ್ಕೆ|arrested
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪೊಲೀಸರು ಅಂತರ್ ಜಿಲ್ಲಾ ಬೈಕ ಕಳ್ಳರನ್ನು ಬಂಧಿಸಿದ್ದಾರೆ. ಇತ್ತೀಚಿಗೆ ಶೇಖರಪ್ಪ ಎಂಬವರ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಷ್ಟೆಅಲ್ಲದೆ ಈ ಸಂಬಂಧ 6 ಜಿಲ್ಲೆಗಳ ವಿವಿಧ ಸ್ಟೇಷನ್ಗಳಲ್ಲಿ ವಾಂಟೆಡ್ ಆಗಿದ್ದ ಆರೋಪಿಗಳಿಬ್ಬರನ್ನ ಬಂಧಿಸಿದ್ಧಾರೆ. ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೀರೋ ಸ್ಪೆಂಡರ್ ಪ್ರೋ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ರು. ಈ ಸಂಬಂಧ 379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ್ ಶಿರಾಳಕೊಪ್ಪ ಪೊಲೀಸರು ನಿನ್ನೆ ದಿನಾಂಕಃ…
ಇಂಜಿನಿಯರ್ ಪತ್ನಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ|arrested
ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ ಶಿವಮೊಗ್ಗ ನಗರದ ವಿಜಯನಗರದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿಯನ್ನು ಕೊಲೆ ಮಾಡಿದ್ದ ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 33.74 ಲಕ್ಷ ನಗದು, 1 ಕಾರು 3 ಬೈಕ್ 7 ಹೊಸ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 41.14 ಲಕ್ಷ ರೂ. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಮಿಥುನ್ಕುಮಾರ್, ಮುಖ್ಯ ಆರೋಪಿ…