ಕ್ರೈಂ ಸುದ್ದಿ:
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ 10 ವರ್ಷ ಶಿಕ್ಷೆ,ಒಂದೂವರೆ ಲಕ್ಷ ದಂಡ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. 2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು…
ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಮಾಂಸದ ಮೂಟೆ|
ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್|ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ| ಸಾಗರ : ಐಗಿನ ಬೈಲ್ ಬಳಿಯಲ್ಲಿ ಖಾಸಗಿ ಬಸ್ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್ಬಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ ನ್ಯಾಯಾದೀಶರೊಬ್ಬರು ಶಿವಮೊಗ್ಗದಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಕ್ಕೆ ಹೋಗುತ್ತಿದ್ದಾಗ ಈ…
ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ|loan app
ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ಶಿವಮೊಗ್ಗ : ಆ್ಯಪ್ ಮೂಲಕ ಸಾಲ ಪಡೆದ ಯುವಕನಿಗೆ ಪೊಲೀಸರ ಹೆಸರಿನಲ್ಲಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹೌದು ಜಿಲ್ಲೆಯ ಭದ್ರಾವತಿ ತಾಲೂಕಿನ ಉಕ್ಕುಂದ ನಿವಾಸಿ, ಆಟೋ ಚಾಲಕ ಸತೀಶ್ ಆ್ಯಪ್ ವೊಂದರ ಮೂಲಕ ಕಳೆದ 4 ತಿಂಗಳ ಹಿಂದೆ 06 ಸಾವಿರ ಸಾಲ ಪಡೆದಿದ್ದರು. ಆದರೆ ಈ ವೇಳೆ ಸತೀಶನ ಕೈಗೆ ಸಿಕ್ಕಿದ್ದ ನಾಲ್ಕುವರೆ (4,500) ಸಾವಿರ ಮಾತ್ರ. ಪಡೆದ ಲೋನ್ ಹಣಕ್ಕೆ ಸತೀಶ್…
ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ|theft
ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ : ವಾಯುವಿಹಾರಕ್ಕೆ ಹೋಗಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸರಗಳ್ಳರು ಕಿತ್ತುಕೊಂಡು ಹೋಗಿರುವ ಘಟನೆ ಇಂದು ನಡೆದಿದ್ದು ಕಳ್ಳರ ಚಲನ ವಲನಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಲತಾ ಎಂಬ 50 ವರ್ಷದ ಮಹಿಳೆ ಚಿಕ್ಕಲ್ ನ ಪಾರ್ಕ್ ನಲ್ಲಿ ವಾಕ್ ಗೆ ಹೋಗುವ ವೇಳೆ ಹಿಂಬದಿ ಬೈಕ್ ನಲ್ಲಿ ಬಂದ ಇಬ್ಬರು ಸರಗಳ್ಳರು ಮಹಿಳೆಯ ಮಾಂಗಲ್ಯ ಸರಕ್ಕೆ ಕೈಹಾಕಿದ್ದಾರೆ….
ರಿಪ್ಪನ್ಪೇಟೆ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ|accident
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಆಸ್ಪತ್ರೆಗೆ ದಾಖಲು ರಿಪ್ಪನ್ಪೇಟೆ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಗರ್ತಿಕೆರೆ ನಿವಾಸಿ ನವೀನ್ ಎಂಬಾತನಿಗೆ ಗಂಭೀರ ಪೆಟ್ಟಾಗಿದೆ. ಗರ್ತಿಕೆರೆಯಿಂದ ರಿಪ್ಪನ್ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಪಲ್ಸರ್ ಮತ್ತು ರಿಪ್ಪನ್ಪೇಟೆ ಕಡೆಯಿಂದ ಜ್ಯೋತಿ ಮಾಂಗಲ್ಯ ಮಂದಿರದ ಕಡೆಗೆ ತೆರಳುತಿದ್ದ…
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise
ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಾಪುರ ಹಾಗೂ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಮಾದಾಪುರ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ವಿಜಯ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ಬಾಳೂರು ಗ್ರಾಮದ ಕಿರಾಣಿ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ…
ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested
ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…
ಸಾಗರ : ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ವ್ಯಕ್ತಿಯ ಖಾತೆಯಲ್ಲಿದ್ದ 7.25 ಲಕ್ಷ ರೂ ವಂಚನೆ
ಸಾಗರ : ಬ್ಯಾಂಕ್ನಿಂದ ಪಾನ್ ಅಪ್ಡೇಟ್ಗೆ ಬಂದ ವಾಟ್ಸ್ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ. ನಗರದ ಕೆನರಾ ಬ್ಯಾಂಕ್ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್ರ ಮೊಬೈಲ್ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್ಡೇಟ್ ಮಾಡಲು ವಾಟ್ಸ್ಅಪ್ ಸಂದೇಶ…
ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ – ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು|crime news
ಸಾಗರ : ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಓದುತ್ತಿದ್ದ 19ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ…
ತೀರ್ಥಹಳ್ಳಿ : ಹಾಡಹಗಲೇ ಜನಸಮೂಹದ ಮಧ್ಯೆ ತಲ್ವಾರ್ ಅಬ್ಬರ – ಮೂವರಿಗೆ ಗಾಯ|ಕುಡಿದ ಮತ್ತಿನಲ್ಲಿ ಮಂಗಾಟcrime news
ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ. ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ. ಮತ್ತೊಬ್ಬ…