ಕ್ರೈಂ ಸುದ್ದಿ:
ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite
ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…
ಸಹೋದರಿಯರ ಮಕ್ಕಳ ಜೊತೆ ಯುವಕ ನೀರುಪಾಲು|Water disaster
ಈಜಲು ನೀರಿಗಿಳಿದಿದ್ದ ವೇಳೆ ಭದ್ರಾ ಚಾನಲ್ನಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಬೆಳಗ್ಗೆ ಅನನ್ಯ ಎಂಬಾಕೆಯ ಶವ ಪತ್ತೆಯಾಗಿತ್ತು.ಬಳಿಕ ರವಿ ಎಂಬವರ ಶವ ಪತ್ತೆಯಾಗಿದೆ. ನೀರಿನಲ್ಲಿ ಆಟವಾಡುವಾಗ ಕಾಲು ಜಾರಿ ಲಕ್ಕವಳ್ಳಿ ಡ್ಯಾಮ್ ಸಮೀಪದ ಭದ್ರಾ ಕಾಲುವೆಯಲ್ಲಿ ಮೂವರು ಕೊಚ್ಚಿಕೊಂಡು ಹೋಗಿದ್ಧರು. ಮೃತರನ್ನು ಲಕ್ಕವಳ್ಳಿ ಮೂಲದ ರವಿ (31), ಶಿವಮೊಗ್ಗ ಮೂಲದ ಹದಿನಾರು ವರ್ಷದ ಅನನ್ಯ ಹಾಗೂ ಚಾಮರಾಜನಗರ ಜಿಲ್ಲೆ, ನಂಜನಗೂಡು ಮೂಲದ 19 ವರ್ಷದ ಶಾಮವೇಣಿ ಎಂದು ಗುರುತಿಸಲಾಗಿದೆ. ಮೃತ ಶಾಮವೇಣಿ…
ಹೊಸನಗರ : ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ|Accident
ಮಂಗಳೂರಿನಿಂದ ಶಿವಮೊಗ್ಗದತ್ತ ಹೊರಟಿದ್ದ ಪೆಟ್ರೋಲ್ ಟ್ಯಾಂಕರ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಇಂದು ಸಂಜೆ ನಡೆದಿದೆ. ಬಿದನೂರು ನಗರದ ಶಾಂತಿಕೆರೆ ಸರ್ಕಲ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹೊಸನಗರ – ನಗರ ರಸ್ತೆ ಸಂಚಾರ ವ್ಯತ್ಯಯವಾಗಿದ್ದು, ಸಾವಿರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿದ್ದ ಹಿನ್ನಲೆಯಲ್ಲಿ ನಗರ ಪೊಲೀಸ್…
ಚಾಲಕನಿಗೆ ನಿದ್ರೆ ಮಂಪರು – ಕಾರು ಪಲ್ಟಿ|Accident
ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ…
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪತಿಯ ಅತಿಯಾದ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!!kuruvalli
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನ ಕುರುವಳ್ಳಿಯ ಸಮೀಪ ಕೆರೆಗೆ ಹಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಶೃತಿ (36) ಎಂಬ ಯುವತಿ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ತಿಳಿದುಬಂದಿದೆ. ಈಕೆ ಕುರುವಳ್ಳಿಯಲ್ಲಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದು, ಈಕೆಗೆ ನಾಲ್ಕು ಮಂದಿ ಅವಳಿ ಜವಳಿ ಮಕ್ಕಳು ಇವೆ. ಪತಿಯ ಅತಿಯಾದ ಸಾಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಶೃತಿ ಧರ್ಮಸ್ಥಳ ಸಂಘದ ಕಾರ್ಯಕರ್ತೆಯಾಗಿ ಮುತ್ತೂರು ಹೋಬಳಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಅತ್ಯಂತ…
ಹೊಸನಗರ : ಮೇಯಲು ಹೋದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು – ದೂರು ದಾಖಲು|hosanagara
ಹೊಸನಗರ ತಾಲೂಕಿನ ನಿಟ್ಟೂರಿನ ಗೌರಿಕೆರೆ ಬಳಿಯಲ್ಲಿ ಹಸುವೊಂದರ ಕಾಲನ್ನು ಕಡಿದು ಹಾಕಿರುವ ಬಗ್ಗೆ ವರದಿಯಾಗಿದೆ. ದುಷ್ಕರ್ಮಿಗಳ ಕೃತ್ಯ ಇದಾಗಿದ್ದು, ಸಿಡ್ಲಕುಣಿ ಸುಭಾಷ್ ಎಂಬುವವರಿಗೆ ಸೇರಿದ ಹಸುವು ಕಾಲಿಗೆ ಕತ್ತಿಯಿಂದ ಏಟು ತಿಂದು ನಡೆಯಲಾಗದೇ ನರಳಾಡುತ್ತಿದೆ. ಘಟನೆಯಲ್ಲಿ ಕಾಲಿನ ನರ ಕಟ್ ಆಗಿದ್ದರಿಂದ ದನ ನೆಲದಿಂದ ಏಳುತ್ತಿಲ್ಲ. ಮಲೆನಾಡಲ್ಲಿ ರಾಸುಗಳನ್ನ ಬೆಳಗ್ಗೆ ಹೊರಗೆ ಅಟ್ಟಲಾಗುತ್ತದೆ. ಅವುಗಳು ಮೇವು ಮುಗಿಸಿ ಸಂಜೆ ಮನೆಗಳಿಗೆ ವಾಪಸ್ ಆಗುತ್ತವೆ.ಸಂಜೆಯಾದರು ಹಸು ಹಟ್ಟಿಗೆ ವಾಪಾಸು ಬರದ ಹಿನ್ನೆಲೆಯಲ್ಲಿ ಸುಭಾಷ್ರವರು ಅದನ್ನು ಹುಡುಕಿಕೊಂಡು ಹೋಗಿದ್ದಾರೆ. ಈ…
ಕಾರು ಡಿಕ್ಕಿಯಾಗಿ ಪಾದಚಾರಿ ಸಾವು – ಚಾಲಕ ಪರಾರಿ|accident
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಶಿವಕುಮಾರ್ (56) ಮೃತ ದುರ್ದೈವಿ. ಪೊಲೀಸರು ಹಿಟ್ ಅಂಡ್ ರನ್ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಶಿವಕುಮಾರ್ ಅವರು ಆನಂದಪುರದಿಂದ ಹೊರಟು ಯಡೆಹಳ್ಳಿಯ ಪೆಟ್ರೋಲ್ ಬಂಕ್ನಿಂದ ಸ್ವಲ್ಪವೇ ದೂರದಲ್ಲಿದ್ದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಶಿವಕುಮಾರ್ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು….
ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ : ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…
ತೀರ್ಥಹಳ್ಳಿಯಲ್ಲಿ ಜೋಡಿ ಕೊಲೆ – ಓರ್ವನ ಬಂಧನ|murder
ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ಧಾರೆ. ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ. ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಕೆಲವೇ ದಿನದಲ್ಲಿ ಸಮುದಾಯ ಭವನ ಉದ್ಘಾಟನೆಯಾಗಬೇಕಿದ್ದು, ಅದರ ನಡುವೆ ಸಮುದಾಯದ ಭವನದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಮೂವರು ಕಾರ್ಮಿಕರ…