ಕ್ರೈಂ ಸುದ್ದಿ:
ರಿಪ್ಪನ್ಪೇಟೆ : ಆಟೋ ಮತ್ತು ಬೈಕ್ನಡುವೆ ಭೀಕರ ಅಪಘಾತ – ಓರ್ವನ ಸ್ಥಿತಿ ಗಂಭೀರ : ರಕ್ತದ ಮಡುವಿನಲ್ಲಿ ಸಹಾಯಕ್ಕೆ ಅಂಗಲಾಚಿದ ಗಾಯಾಳು|Accident
ರಿಪ್ಪನ್ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆ ಬಳಿ ಬೈಕ್ ಹಾಗೂ ಲಗೇಜ್ ಆಟೋ ಭೀಕರ ಅಪಘಾತವಾಗಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೆಂಡರ್ (KA 01 S 8450) ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ಅಪಘಾತ…
ಸಿಟಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ – ರೊಚ್ಚಿಗೆದ್ದ ಜನರಿಂದ ಬಸ್ ಗ್ಲಾಸ್ ಗೆ ಕಲ್ಲು ತೂರಾಟ|Accident
ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಸಿಟಿ ಬಸ್ಸೊಂದು ಸಿಗ್ನಲ್ ಜಂಪ್ ಮಾಡಿ ಸ್ಕೂಟರ್ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ ಕಾಲ ಟ್ರಾಫಿಕ್…
ಕಾರು ಅಪಘಾತ – ಹೊಸನಗರ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ಸ್ಥಳದಲ್ಲೇ ಸಾವು|accident
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ತುರುಕೋಡು ನಾಗರಾಜ್ ಗೌಡ (55) ಎಂದು ಗುರುತಿಸಲಾಗಿದೆ. ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ ಇಂದು ಮಧ್ಯಾಹ್ನ ಗೌತಮಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹೊಸನಗರ ತಾಲೂಕಿನ ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ…
ಹೊಸನಗರ : ಬಾಲಕಿಯನ್ನು ಅಡ್ಡಗಟ್ಟಿ ನಂಬರ್ ಕೊಡುವಂತೆ ಕಿರುಕುಳ – ಇಬ್ಬರು ವಶಕ್ಕೆ|Crime News
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪೊಲೀಸ್ ಸ್ಟೇಷನ್ ಒಂದರಲ್ಲಿ ಅಪ್ತಾಪ್ತೆಯೊಬ್ಬಳನ್ನ ಅಡ್ಡಗಟ್ಟಿ ಫೋನ್ ನಂಬರ್ ಕೇಳಿ ಕಿರುಕುಳ ನೀಡಿದ ಆರೋಪ ಸಂಬಂಧ ಕೇಸ್ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಕೇರಳದಲ್ಲಿ ಓದುತ್ತಿರುವ ಅಪ್ರಾಪ್ತೆಯೊಬ್ಬರು ಹೊಸನಗರ ತಾಲ್ಲೂಕಿನ ಗ್ರಾಮವೊಂದರಲ್ಲಿರುವ ತಮ್ಮ ಅಜ್ಜಿ ಮನೆಗೆ ಬಂದಿದ್ದಾರೆ. ಕಳೆದ ಭಾನುವಾರ ಚರ್ಚ್ವೊಂದರಲ್ಲಿ ಪ್ರಾರ್ಥನೆ ಮುಗಿಸಿ ವಾಪಸ್ ಆಗುವಾಗ ಇಬ್ಬರು ಆಕೆಯನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ಧಾರೆ. ಅಲ್ಲದೆ ಬೈಕ್ನಲ್ಲಿ ಬಂದ ಆರೋಪಿಗಳು ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ…
Crime News | ಸಾಗರದಲ್ಲಿ ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಕಳ್ಳತನ..!!!
ಶಿವಮೊಗ್ಗ ಜಿಲ್ಲೆ ಸಾಗರ ಟೌನ್ನಲ್ಲಿ ಬರೋಬ್ಬರಿ 17 ಲಕ್ಷ ರೂಪಾಯಿಯ ಸಿಗರೇಟ್ ಕಳ್ಳತನವಾಗಿದೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಸ್ಟೇಷನ್ನಲ್ಲಿ ದೂರು ಕೂಡ ದಾಖಲಾಗಿದೆ. ಇಲ್ಲಿನ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿಯಲ್ಲಿ ಭಾನುವಾರ ರಾತ್ರಿ ₹17 ಲಕ್ಷ ಮೌಲ್ಯದ ಸಿಗರೇಟ್ ಬಂಡಲ್ಗಳು ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಸಾಗರ ತಾಲ್ಲೂಕಿನ ವಿವಿಧ ಅಂಗಡಿಗಳಿಗೆ ಸಿಗರೇಟ್ ಪೂರೈಕೆ ಮಾಡುವ ಕೆಲಸಮಾಡುತ್ತಿರುವ ಈ ಅಂಗಡಿಯಲ್ಲಿ ರೋಲಿಂಗ್ ಶೆಟ್ಟರ್ ಒಡೆದು ಕಳ್ಳತನ ಮಾಡಲಾಗಿದೆ. ಶೆಟರ್ ಮುರಿದು ಒಳಕ್ಕೆ ಬಂದಿರುವ ಕಳ್ಳರು,…
ಆಂಬ್ಯುಲೆನ್ಸ್ ಮತ್ತು ಬೈಕ್ ನಡುವೆ ಡಿಕ್ಕಿ – ಯುವಕ ಸ್ಥಳದಲ್ಲಿಯೇ ಸಾವು|accident
ಬೈಕ್ ಮತ್ತು ಆಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ನ್ಯಾಮತಿ ತಾಲೂಕಿನ ಪುನೀತ್(26) ಅಲಿಯಾಸ್ ಕುಲ್ಡ ಪುನೀತ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆಯನೂರಿನ ಚೆನ್ನಳ್ಳಿ ಕ್ರಾಸ್ ಬಳಿ ಸಾಗರದಿಂದ ಬರುತ್ತಿದ್ದ ಸರ್ಕಾರಿ ಅಂಬ್ಯುಲೆನ್ಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದಿಂದ ಆಯನೂರು ಮೂಲಕ ಬೆಳಗುತ್ತಿಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪುನೀತ್ ಬೆಳಗುತ್ತಿಯಲ್ಲಿ ಕೋಳಿ ಮಾಂಸದ ಅಂಗಡಿ ನಡೆಸುತಿದ್ದರು ಎನ್ನಲಾಗುತ್ತಿದೆ….
ಹೊಸನಗರದ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ – ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ|missing
ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ ಸದಾನಂದ ಎಂ.ಎಂ. ಎಂಬುವವರ ಪತ್ನಿ ಗೀತಾ (30) ಎಂಬ ಮಹಿಳೆಯು ತನ್ನ 11 ವರ್ಷದ ಮಗಳು ಪ್ರಿಯಾಂಕ ಹಾಗೂ 9 ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ಏ.11 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 5 ಅಡಿ ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು ಇರುತ್ತದೆ. ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಈ…
ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ
ನಿನ್ನೆ ಚೋರಡಿಯಲ್ಲಿ ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ. ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…
ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident
ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ….
ಚೋರಡಿಯ ಬಳಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ – 8 ರಿಂದ ಹತ್ತು ಮಂದಿ ಸಾವನ್ನಪ್ಪಿರುವ ಶಂಕೆ
ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿಯಲ್ಲಿ ಕೆಲವು ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ 8 ರಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.ಅನೇಕ ಮಂದಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಇದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಬಸ್ಸು ಹಾಗೂ ಶಿಕಾರಿಪುರದಿಂದ (ಹಿತ್ಲ ಕಲ್ಮನೆ ಮಾರ್ಗ) ಶಿವಮೊಗ್ಗಕ್ಕೆ ತೆರಳುತಿದ್ದ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಅಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ…