Headlines

ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಾಯ|accident

ಶಿವಮೊಗ್ಗ : ಮಂಡಗದ್ದೆ ರಸ್ತೆಯಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ  ರಸ್ತೆ ಅಪಘಾತ ಸಂಭವಿಸಿದ್ದು ಓರ್ವರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಕೆಎ 14 ಪಿ 2982 ಕ್ರಮ ಸಂಖ್ಯೆಯ ಟಾಟಾ ಸಂಸ್ತೆಯ ಕಾರಿಗೆ ಸಕ್ರೇಬೈಲಿನ ಬಳಿಯ ತಿರುವಿನಲ್ಲಿ  ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎ 11-7360 ಕ್ಯಾಂಟರ್ ಗೆ  ಡಿಕ್ಕಿ ಹೊಡೆದಿದೆ. ಅಪಘಾತ ನಡೆದ ಸ್ಥಳದಿಂದ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿ ಇಬ್ಬರು ಇದ್ದಾರೆ ಎಂಬ ಮಾಹಿತಿ ಇದ್ದು ಅದರಲ್ಲಿ…

Read More

ರಿಪ್ಪನ್‌ಪೇಟೆ : ತೋಟದಲ್ಲಿ ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ವೃದ್ದೆ ಸಾವು|snake bite

ಮನೆ ಹಿಂಬಾಗದ ಅಡಿಕೆ ತೋಟದಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಸಮೀಪದ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಮ್ಮ (72 )ಹಾವು ಕಡಿತದಿಂದ ಮೃತಪಟ್ಟ ಮಹಿಳೆಯಾಗಿದ್ದು, ಜಾನುವಾರುಗಳಿಗೆ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಶನಿವಾರ ಮಧ್ಯಾಹ್ನ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿದೆ. ಕೂಡಲೇ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮಹಿಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ…

Read More

ಅಂತರ್ ಜಿಲ್ಲಾ ಬೈಕ್ ಕಳ್ಳರು ಪೊಲೀಸರ ಬಲೆಗೆ -11 ಬೈಕ್ ವಶಕ್ಕೆ|arrested

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪೊಲೀಸರು ಅಂತರ್ ಜಿಲ್ಲಾ ಬೈಕ ಕಳ್ಳರನ್ನು ಬಂಧಿಸಿದ್ದಾರೆ. ಇತ್ತೀಚಿಗೆ ಶೇಖರಪ್ಪ ಎಂಬವರ ಬೈಕ್​ ಕಳ್ಳತನ ಪ್ರಕರಣವನ್ನು ಭೇದಿಸಿದ್ದಷ್ಟೆಅಲ್ಲದೆ ಈ ಸಂಬಂಧ 6 ಜಿಲ್ಲೆಗಳ ವಿವಿಧ ಸ್ಟೇಷನ್​ಗಳಲ್ಲಿ ವಾಂಟೆಡ್ ಆಗಿದ್ದ ಆರೋಪಿಗಳಿಬ್ಬರನ್ನ ಬಂಧಿಸಿದ್ಧಾರೆ.  ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೀರೋ ಸ್ಪೆಂಡರ್ ಪ್ರೋ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ರು. ಈ ಸಂಬಂಧ  379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ್ ಶಿರಾಳಕೊಪ್ಪ ಪೊಲೀಸರು  ನಿನ್ನೆ ದಿನಾಂಕಃ…

Read More

ಇಂಜಿನಿಯರ್ ಪತ್ನಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ ಶಿವಮೊಗ್ಗ ನಗರದ ವಿಜಯನಗರದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿಯನ್ನು ಕೊಲೆ ಮಾಡಿದ್ದ  ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 33.74  ಲಕ್ಷ ನಗದು, 1 ಕಾರು 3 ಬೈಕ್ 7 ಹೊಸ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 41.14  ಲಕ್ಷ ರೂ. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಮಿಥುನ್‌ಕುಮಾರ್, ಮುಖ್ಯ ಆರೋಪಿ…

Read More

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚನ್ನು ಕಿತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್​ ಬೆದರಿಕೆ !!! ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಬೆನವಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರಪ್ರಸಾದ್ ಎಂಬವರು ಏಕಾಏಕಿ  ಕಿತ್ತುಹಾಕಿದ್ದರು. ಈ ಹಿನ್ನೆಲೆಯಲ್ಲಿ ಅದನ್ನು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ ಮನೆಯಲ್ಲಿ ಎರಡು ಕೊಲೆಯಾಗಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು…

Read More

ವಿದ್ಯುತ್ ತಗುಲಿ ಇಬ್ಬರು ಸಾವು – ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ತೆರವಿನ ವೇಳೆ ನಡೆದ ದುರಂತ|electric-shock

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರ ಕಟಾವ್ ಮಾಡಲು ಹೋಗಿದ್ದ ಇಬ್ಬರು ಕರೆಂಟ್ ತಗುಲಿ ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ನಗರದ ಊರುಗಡೂರ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ  ಓರ್ವರು ಗುಂಟೂರು ಮೂಲದ ಚಲ್ಲಾ ಸೋಮಶೇಖರ್ ಎಂದು ಗೊತ್ತಾಗಿದ್ದು, ಇನ್ನೊಬ್ಬರ ಸುಳಿವು ಸಿಗಬೇಕಿದೆ. ಘಟನೆಯಲ್ಲಿ ಮರ ಕಡಿಯುತ್ತಿರುವ ಸಂದರ್ಭದಲ್ಲಿ ಮೇನ್​ ಲೇನ್​ ಸಂಪರ್ಕಗೊಂಡಿದ್ದು, ಅದರಿಂದ ಹರಿದ ವಿದ್ಯುತ್ನಿಂದಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣವೇ ಸ್ಥಳೀಯರು 108 ಗೆ ಕರೆ ಮಾಡಿ ಆ್ಯಂಬುಲೆನ್ಸ್​ನ್ನ ಕರೆಸಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಇಬ್ಬರನ್ನು ಶಿಫ್ಟ್ ಮಾಡಲಾಗಿದ್ದು,…

Read More

ರಿಪ್ಪನ್‌ಪೇಟೆ : ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ|crime news

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ಮದ್ಯವ್ಯಸನಿಯಾಗಿದ್ದ ಓಂಕೇಶ್ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಮತ್ತು ಸಿಬ್ಬಂದಿಗಳು ಸ್ಥಳ್ಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಾರ್ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು…

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೇಸ್ ವರ್ಕರ್|bribe

ಶಿವಮೊಗ್ಗ ಜಿಲ್ಲೆಯ ಸೊರಬ ಪುರಸಭೆಯ ಮಹಿಳಾ ಸಿಬ್ಬಂದಿ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಎಂದು ತಿಳಿದುಬಂದಿದೆ. ಮಂಜುನಾಥ ಶೆಟ್ಟಿ ಎಂಬವರು ತಮ್ಮ ಖಾತೆ ಬದಲಾವಣೆಗಾಗಿ ಪುರಸಭೆಗೆ ಹೋದಾಗ ಸಿಬ್ಬಂದಿ ಖಾತೆ ಬದಲಾವಣೆ ಮಾಡಿಸದೆ ಸತಾಯಿಸಿದ್ದಾರೆ. ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಮಂಜುನಾಥ್ ಶೆಟ್ಟಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಸೊರಬ ಪುರಸಭೆಯಲ್ಲಿ ಚಂದ್ರಕಲಾ…

Read More

ಹೆಣ್ಣು ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಅಪ್ಪ ವಿಧಿಯಾಟಕ್ಕೆ ಬಲಿ – ಆನಂದಪುರದಲ್ಲೊಂದು ಹೃದಯವಿದ್ರಾವಕ ಘಟನೆ|Accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಆನಂದಪುರದ ಕಡೆ ತೆರಳುತ್ತಿದ್ದ ಪಾದಾಚಾರಿಗೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೃತಪಟ್ಟವರು ಬನವಾಸಿ ನಿವಾಸಿ ಮಂಜುನಾಥ ಗೌಡ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More