ಕ್ರೈಂ ಸುದ್ದಿ:
ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ – ಇಬ್ಬರ ಸ್ಥಿತಿ ಗಂಭೀರ
ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪ ಅರೆಕಲ್ಲು ಬಳಿ ಆಗುಂಬೆ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಭದ್ರಾವತಿಯ ದಡಮಘಟ್ಟದಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ರೋಗಿಯೊಬ್ಬರನ್ನ ನೋಡಲು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವತ್ತು ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ಭದ್ರಾವತಿಯಿಂದ ಹೊರಟಿದ್ದರು. ಈ ವೇಳೆ ಆಗುಂಬೆಯ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್ ಸ್ಪೀಡ್ನಲ್ಲಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ನಲ್ಲಿದ್ದ ಇಬ್ಬರು ಸಹ ಬಹಳಷ್ಟು ದೂರ…
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು|accident
ತೀರ್ಥಹಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ಮತ್ತು ಕೊಪ್ಪ ಮಾರ್ಗದ ದೇವಂಗಿ ವಾಟಿಗಾರು ಬಳಿ ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಎರಡು ಕಾರಿನಲ್ಲಿದ್ದ ತಲಾ ಮೂವರು ಗಂಭೀರ ಗಾಯಗೊಂಡಿದ್ದರು. ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು…
ರಿಪ್ಪನ್ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಗವಟೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಬಲೆನೋ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು ಅವರಿಗೆ ಪಟ್ಟಣದ ನಂದಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗಳಾದ ವರದಿಯಾಗಿಲ್ಲ.ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತಿದ್ದರು ಎನ್ನಲಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ…
ರಿಪ್ಪನ್ಪೇಟೆ – ಕ್ಯಾಂಟರ್ ಲಾರಿ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident
ಕ್ಯಾಂಟರ್ ಲಾರಿ ಹಾಗೂ ಟೊಯೋಟಾ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಸೂಡೂರು ಗೇಟ್ ಸಮೀಪದಲ್ಲಿ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಟೊಯೋಟಾ ಇನ್ನೋವಾ ಕಾರು ಹಾಗೂ ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ ಕ್ಯಾಂಟರ್ ಲಾರಿ ನಡುವೆ ಸೂಡೂರು ಗೇಟ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಿಪ್ಪನ್ಪೇಟೆ – ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ|rpet
ರಿಪ್ಪನ್ಪೇಟೆ ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಚಿಪ್ಪಿಗರ ಕೆರೆ ಬಳಿಯ ಪಾರ್ಕ್ ಸಮೀಪ ಸುಮಾರು 45 ರಿಂದ 50 ವಯೋಮಾನದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪಟ್ಟಣದಲ್ಲಿ ಕಳೆದ ಕೆಲವು ವರ್ಷಗಳಿಂದ ಚಿಂದಿ ಆಯುತಿದ್ದ ಮಹಿಳೆ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ,ಸದಸ್ಯರಾದ ಆಸೀಫ಼್ ಭಾಷಾಸಾಬ್ ,ಪ್ರಕಾಶ್ ಪಾಲೇಕರ್…
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident
ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
SAGARA|ಬೈಕ್ ಗೆ ಲಾರಿ ಡಿಕ್ಕಿ – ಮಹಿಳೆ ಸ್ಥಳದಲ್ಲಿಯೇ ಸಾವು
ಬೃಹತ್ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ಷಾಹಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಬೆಳಲಮಕ್ಕಿಯ 34ವರ್ಷದ ಪದ್ಮಾ ಅವರನ್ನು ಬೈಕ್ನಲ್ಲಿ ಅವರ ಮೈದುನ ರಘು ಕರೆದೊಯ್ಯುತ್ತಿದ್ದಾಗ ಬೃಹತ್ ಲಾರಿ ಹಿಮ್ಮುಖವಾಗಿ ಚಲಿಸಿದಾಗ ಬೈಕ್ ಉರುಳಿದೆ. ಈ ಸಂದರ್ಭದಲ್ಲಿ ಲಾರಿಯ ಚಕ್ರ ಪದ್ಮಾ ಅವರ ಮೇಲೆ ಹರಿದು ತೀವ್ರವಾಗಿ…
ತೋಟದಲ್ಲಿ ಕೆಲಸ ಮಾಡುತಿದ್ದ ರೈತನ ಮೇಲೆ ಕರಡಿ ದಾಳಿ – ಗಂಭೀರ ಗಾಯ|Bear attack
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಬಳಿಯ ಹೆನ್ನಿ ಗ್ರಾಮದಲ್ಲಿ ಕರಡಿ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ದಾಳಿಯಲ್ಲಿ ತಿಮ್ಮನಾಯ್ಕ್ ಎಂಬವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಸೌದೆ ಒಟ್ಟು ಮಾಡಲು ಅಂತಾ ತೋಟಕ್ಕೆ ತೆರಳಿದ್ದ ಅವರ ಮೇಲೆ ಅಲ್ಲಿದ್ದ ಕರಡಿಯು ದಾಳಿ ನಡೆಸಿದೆ. ಏಕಾಯೇಕಿ ನಡೆದ ದಾಳಿಯಲ್ಲಿ ತಿಮ್ಮನಾಯ್ಕ್ರಿಗೆ ತಪ್ಪಿಸಿಕೊಳ್ಳಲು ಸಹ ಆಗಲಿಲ್ಲ. ಜೋರಾಗಿ ಕಿರುಚಿಕೊಂಡಿದ್ದಾರೆ. ಈ ವೇಳೇ ಕರಡಿ ಅಲ್ಲಿಂದ ಕಾಲ್ಕಿತ್ತಿದೆ. ಇವರ ಚೀರಾಟ ಕೇಳಿಸ್ತಿದ್ದಂತೆ, ಸ್ಥಳೀಯರು ಓಡಿ ಬಂದಿದ್ದಾರೆ. ತೀವ್ರವಾದ ಗಾಯಗಳಾಗಿದ್ದ ತಿಮ್ಮನಾಯ್ಕ್ರನ್ನ ತಕ್ಷಣವೆ…
ವೈದ್ಯಕೀಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು|SMG
ಶಿವಮೊಗ್ಗ : ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೊಬ್ಬ, ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಅಭಯ್ ರೆಡ್ಡಿ (22) ಮೃತ ವೈದ್ಯಕೀಯ ವಿದ್ಯಾರ್ಥಿ. ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗೋಡೆ ಮೇಲೆ ಡೆತ್ ನೋಟ್ ಬರೆದು ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾಸ್ತಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ|accident
ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಲಕ್ಷ್ಮಿ ನರಸಿಂಹ ದೇವಸ್ಥಾನದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಲಕ್ಷ್ಮಿನರಸಿಂಹ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ ಅಪಘಾತದಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹೊಸನಗರ 108 ಆ್ಯಂಬುಲೆನ್ಸ್…