Headlines

ರಿಪ್ಪನ್‌ಪೇಟೆ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಎರಡು ಲಾರಿ,ಟ್ರಾಕ್ಟರ್ ಮತ್ತು ಜಂಬಿಟ್ಟಿಗೆ ಕೊಯ್ಯುವ ಯಂತ್ರ ವಶಕ್ಕೆ|illegal mining

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಯಂತ್ರ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಮದೂರು ಮತ್ತು ಹೊನಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗ್ಗೆ ಗಣಿಗಾರಿಕೆ ನಡೆಸುತಿದ್ದ ಪ್ರದೇಶಕ್ಕೆ ದಾಳಿ ನಡೆಸಿ ಎರಡು ಲಾರಿ ,ಒಂದು ಟ್ರಾಕ್ಟರ್ ಮತ್ತು ಜಂಬಿಟ್ಟಿಗ್ಗೆ ಕೊಯ್ಯುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಭೂ ಮತ್ತು ಗಣಿ…

Read More

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು…

Read More

ಬೈಕ್ ಅಪಘಾತದಲ್ಲಿ LLB ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್‌ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಗೌತಮ್‌ (21) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಡೆದಿದ್ದೇನು??? ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್​…

Read More

ಹೊಸನಗರ : ಚಲಿಸುತಿದ್ದ ಟ್ರಾಕ್ಟರ್ ಪಲ್ಟಿ – ನೀರುಗಂಟಿ ಸಾವು|Accident

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನೀರುಗಂಟಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರಿನಲ್ಲಿ(ನಗರ) ನಡೆದಿದೆ. ಬಿದನೂರು ನಗರದ ಚಿಕ್ಕಪೇಟೆ ನಿವಾಸಿ ತುಕರಾಂ(46) ಎಂಬಾತ ಮೃತ ದುರ್ದೈವಿ. ಕುಡಿಯುವ ನೀರು ಪೂರೈಸುವ ಟ್ರಾಕ್ಟರ್ ಪಲ್ಟಿಯಾದ ಕಾರಣ ನೀರುಗಂಟಿ ಸಾವನ್ನಪ್ಪಿದ್ದಾನೆ. ನಗರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರುಗಂಟಿ ಕೆಲಸ ಮಾಡುತ್ತಿದ್ದ ತುಕರಾಂ.ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮನೆಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲು ಮುಂದಾದಾಗ ಈ ಅವಘಡ ಸಂಭವಿಸಿದೆ. ನೀರು ಪೂರೈಸುವ ಟ್ರ್ಯಾಕ್ಟರ್…

Read More

ಆಗುಂಬೆ ಘಾಟ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ‌ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|Accident

ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಗುಂಬೆ ಘಾಟ್ ನ 11 ನೇ ತಿರುವಿನ ಸಮೀಪದಲ್ಲಿ ತೀರ್ಥಹಳ್ಳಿ ಕಡೆಯಿಂದ ಹೆಬ್ರಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬರುತಿದ್ದ ಕೆಟಿಎಮ್ ಬೈಕ್ಬ್ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ…

Read More

ಈಜಲು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು – ಓರ್ವನ ಶವ ಪತ್ತೆ|tunga

ತೀರ್ಥಹಳ್ಳಿ : ಇಲ್ಲಿನ ತೀರ್ಥಮತ್ತೂರಿನಲ್ಲಿ ಈಜಲು ಇಳಿದ ಇಬ್ಬರು ಪ್ರಾಧ್ಯಾಪಕರು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ. ತೀರ್ಥಮತ್ತೂರು ಬಳಿ 8-10 ಜನ ಪ್ರಾಧ್ಯಾಪಕರು ತುಂಗ ನದಿಗೆ ಇಳಿದಾಗ ಓರ್ವ ಪ್ರಾಧ್ಯಾಪಕರು ನೀರು ಪಾಲಾಗಿದ್ದು ಅವರನ್ನು ರಕ್ಷಿಸಲು ಮತ್ತೋರ್ವ ಪ್ರಾಧ್ಯಾಪಕರು ಮುಂದಾಗಿದ್ದು ಅವರೂ ಸಹ ನೀರು ಪಾಲಾಗಿದ್ದಾರೆ. ನಿಟ್ಟೆ ಕಾಲೇಜಿನ ಪ್ರಾಧ್ಯಾಪಕರಾದ ಪುನೀತ್ ಮತ್ತು ಬಾಲಾಜಿ ನೀರುಪಾಲಾದ ದುರ್ಧೈವಿಗಳಾಗಿದ್ದಾರೆ. ದಕ್ಷಿಣ ಕನ್ನಡದ ನಿಟ್ಟೆ ಕಾಲೇಜಿನ 8 ರಿಂದ ಹತ್ತು ಜನ ಪ್ರಾಧ್ಯಾಪಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಜೆ…

Read More

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಯುವಕನ ಬಂಧನ|Arrested

ತೀರ್ಥಹಳ್ಳಿ : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ…

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…

Read More

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಯುವಕನಿಗೆ ಲಕ್ಷಾಂತರ ರೂ ವಂಚಿಸಿದ ನಟಿ – ಬಂಧನ|Arrested

ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಚಿತ್ರನಟಿ ಉಷಾ.ಆರ್ ಅವರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಕಿರುತೆರೆ ನಟನಿಗೆ ವಂಚನೆ ಪ್ರಕರಣದಲ್ಲಿ ನಟಿಯನ್ನು ವಿನೋಬ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ಎಂಬಾಕೆ ವಿರುದ್ಧ ವಾರೆಂಟ್‌ ಜಾರಿಯಾಗಿತ್ತು. ಬೆಂಗಳೂರಿನಲ್ಲಿ ನಟಿ  ಉಷಾಳನ್ನು ಬಂಧಿಸಿದ್ದ ವಿನೋಬನಗರ ಠಾಣೆ ಪೊಲೀಸರು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಟಿ ಉಷಾ ವಿರುದ್ಧ ಶಿವಮೊಗ್ಗದ ಶರವಣನ್‌ ಎಂಬಾತ ವಂಚನೆ ದೂರು ನೀಡಿದ್ದರು….

Read More