Headlines

ಜಂಬಳ್ಳಿ ತಿರುವಿನಲ್ಲಿ ಅಪಘಾತ – ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ|accident

ತೀರ್ಥಹಳ್ಳಿ : ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ  ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ.  ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ …

Read More

ಕೊಲೆ ಮಾಡಿ ಶವವನ್ನು ಬೈಕಿನಲ್ಲಿ ಕೂರಿಸಿಕೊಂಡು ಬಂದು ಸರ್ಕಲ್ ನಲ್ಲಿ ಮಲಗಿಸಿ ಹೋದ ಆರೋಪಿಗಳು – ಅನೈತಿಕ ಸಂಬಂಧದ ಶಂಕೆ|crime news

ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯ ಶವವನ್ನು ಕೂರಿಸಿಕೊಂಡು ಬಂದು ಊರಿನ ಸರ್ಕಲ್ ನಲ್ಲಿ ಮಲಗಿಸಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಮುತ್ತಳ್ಳಿ ಗ್ರಾಮದಲ್ಲಿ ನಡೆದಿದೆ.ಇದು ಕೊಲೆ ಎಂದು ಕುಟುಂಬ ಆರೋಪಿಸಿದೆ. ಘಟನೆಯ ಹಿನ್ನಲೆ :  ಶಿರಾಳಕೊಪ್ಪ ಪೊಲೀಸ್ ಠಾಣೆಯ ಮುತ್ತಳ್ಳಿ ಗ್ರಾಮದಲ್ಲಿ ಕೃಷಿ ಕಾರ್ಮಿಕನಾಗಿರುವ ಸೋಮಪ್ಪ(30) ಈತನಿಗೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಗಂಗಮ್ಮ ಎಂಬ ಮಹಿಳೆಯೊಂದಿಗೆ ಸ್ನೇಹವಿದ್ದು, ಆಕೆಯೇ ಕರೆಯಿಸಿ ಸೋಮಪ್ಪನನ್ನ ಕೊಲೆ ಮಾಡಿ ಕಳುಹಿಸಿರುವುದಾಗಿ ಮೃತನ‌ ಕುಟುಂಬ ಆರೋಪಿಸಿದೆ. ಸೋಮಪ್ಪ ಈ ಹಿಂದೆ ಕೆಲಸದ…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಮರ – ಓರ್ವನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನಲೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ಇಬ್ಬರು ಸಿಲುಕಿ ಕೊಂಡಿದ್ದಾರೆ ತಕ್ಷಣ ಸ್ಥಳೀಯರು ಹಾಗೂ…

Read More

Crime News – ಅಡಿಕೆ ಮಂಡಿ ವರ್ತಕನ ಪತ್ನಿ ನೇಣಿಗೆ ಶರಣು

ಶಿವಮೊಗ್ಗ ನಗರದ ಅಡಿಕೆ ಮಂಡಿ ವರ್ತಕರೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಅಡಿಕೆ ಮಂಡಿ ವರ್ತಕ ಪ್ರಶಾಂತ್‌ ಎನ್ನುವವರ ಪತ್ನಿ ಶ್ವೇತಾ (40) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಡಿಯ ಕೋಣೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಇನ್ನು ಸಾವಿಗೆ ಪತಿಯ ಸಾಲ ಹಾಗೂ ಜಮೀನು ಮಾರಾಟದ ವಿಷಯವೇ ಕಾರಣ ಎಂದು ಹೇಳಲಾಗುತ್ತಿದೆ.  ಸಂಸಾರದಲ್ಲಿ ಅದೇನು ಕಲಹವಿತ್ತೋ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು…

Read More

ಹೊಸನಗರ : ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು|sonale

ಹೊಸನಗರ : ನೀರು ತುಂಬಿದ ಬಕೆಟ್‌ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೋನಲೆ ಗ್ರಾ.ಪಂ ವ್ಯಾಪ್ತಿಯ ಹೊಸಕೊಪ್ಪ ಎಂಬಲ್ಲಿ ನಡೆದಿದೆ. ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪೋಷಕರು ಬಕೆಟ್‌ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ.  ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು.ತಲೆಕೆಳಗಾಗಿ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಎಸ್ಕಾರ್ಟ್ ಸಿಬ್ಬಂದಿ|Accident

ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನ ಎಸ್ಕಾರ್ಟ್ ಪೊಲೀಸರಿಬ್ಬರು ಮೆಗ್ಗಾನ್ ಗೆ ತಮ್ಮ ವಾಹನದಲ್ಲಿಯೇ ಕೂರಿಸಿಕೊಂಡು ಬಂದು ದಾಖಲಿಸಿ ಕರ್ತವ್ಯ ಮತ್ತು ಮಾನವೀಯತೆ ಮೆರೆದಿದ್ದಾರೆ. ಅಬ್ಬಲಗೆರೆಯ ದೇವಸ್ಥಾನದ ಎದುರು ಎರಡು ಬೈಕ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯಲ್ಲಿ ಗಾಯಗೊಂಡವರನ್ನ ಜಗದೀಶ್ ನಾಯ್ಕ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಜಗದೀಶ್ ನಾಯ್ಕ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ….

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ರಿಪ್ಪನ್‌ಪೇಟೆ : ದೇವಸ್ಥಾನದ ಬೀಗ ಮುರಿದು ಸಾವಿರಾರು ರೂ ಕಳ್ಳತನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವುಣೆ ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕಳ್ಳರು ರಾತ್ರಿಯ ವೇಳೆಯಲ್ಲಿ ದೇವಸ್ಥಾನದ ಮುಂಭಾಗಿಲಿನ ಬೀಗ ಮುರಿದು ದೇವಸ್ಥಾನದ ಒಳಭಾಗಕ್ಕೆ ಪ್ರವೇಶಿಸಿ ದೇವರ ಮುಂಭಾಗದಲಿದ್ದ ಒಂದು ಕಬ್ಬಿಣದ ಮತ್ತು ಸ್ಟೀಲ್ ನ ಕಾಣಿಕೆ ಡಬ್ಬಿಗಳನ್ನು ದೇವಸ್ಥಾನದ ಹೊರಭಾಗ ಎತ್ತಿಕೊಂಡು ಹೋಗಿ ಅಲ್ಲಿ ಅವುಗಳ ಬೀಗವನ್ನು ಮುರಿದು ಅದರ ಒಳಭಾಗದಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಕಾಣಿಕೆ ಡಬ್ಬಿಗಳು…

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More