Headlines

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More

SAGARA|ಬೈಕ್ ಗೆ ಲಾರಿ ಡಿಕ್ಕಿ – ಮಹಿಳೆ ಸ್ಥಳದಲ್ಲಿಯೇ ಸಾವು

ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ಷಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳಲಮಕ್ಕಿಯ 34ವರ್ಷದ ಪದ್ಮಾ ಅವರನ್ನು ಬೈಕ್‌ನಲ್ಲಿ ಅವರ ಮೈದುನ ರಘು ಕರೆದೊಯ್ಯುತ್ತಿದ್ದಾಗ ಬೃಹತ್ ಲಾರಿ ಹಿಮ್ಮುಖವಾಗಿ ಚಲಿಸಿದಾಗ ಬೈಕ್ ಉರುಳಿದೆ. ಈ ಸಂದರ್ಭದಲ್ಲಿ ಲಾರಿಯ ಚಕ್ರ ಪದ್ಮಾ ಅವರ ಮೇಲೆ ಹರಿದು ತೀವ್ರವಾಗಿ…

Read More

ತೋಟದಲ್ಲಿ ಕೆಲಸ ಮಾಡುತಿದ್ದ ರೈತನ ಮೇಲೆ ಕರಡಿ ದಾಳಿ – ಗಂಭೀರ ಗಾಯ|Bear attack

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಬಳಿಯ ಹೆನ್ನಿ ಗ್ರಾಮದಲ್ಲಿ ಕರಡಿ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ದಾಳಿಯಲ್ಲಿ ತಿಮ್ಮನಾಯ್ಕ್ ಎಂಬವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.  ಸೌದೆ ಒಟ್ಟು ಮಾಡಲು ಅಂತಾ ತೋಟಕ್ಕೆ ತೆರಳಿದ್ದ ಅವರ ಮೇಲೆ ಅಲ್ಲಿದ್ದ ಕರಡಿಯು ದಾಳಿ ನಡೆಸಿದೆ. ಏಕಾಯೇಕಿ ನಡೆದ ದಾಳಿಯಲ್ಲಿ ತಿಮ್ಮನಾಯ್ಕ್​ರಿಗೆ ತಪ್ಪಿಸಿಕೊಳ್ಳಲು ಸಹ ಆಗಲಿಲ್ಲ. ಜೋರಾಗಿ ಕಿರುಚಿಕೊಂಡಿದ್ದಾರೆ. ಈ ವೇಳೇ ಕರಡಿ ಅಲ್ಲಿಂದ ಕಾಲ್ಕಿತ್ತಿದೆ.  ಇವರ ಚೀರಾಟ ಕೇಳಿಸ್ತಿದ್ದಂತೆ, ಸ್ಥಳೀಯರು ಓಡಿ ಬಂದಿದ್ದಾರೆ. ತೀವ್ರವಾದ ಗಾಯಗಳಾಗಿದ್ದ ತಿಮ್ಮನಾಯ್ಕ್​ರನ್ನ ತಕ್ಷಣವೆ…

Read More

ವೈದ್ಯಕೀಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು|SMG

ಶಿವಮೊಗ್ಗ : ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೊಬ್ಬ, ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಅಭಯ್ ರೆಡ್ಡಿ (22) ಮೃತ ವೈದ್ಯಕೀಯ ವಿದ್ಯಾರ್ಥಿ.  ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗೋಡೆ ಮೇಲೆ ಡೆತ್ ನೋಟ್ ಬರೆದು ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

ಮಾಸ್ತಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ|accident

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಲಕ್ಷ್ಮಿ ನರಸಿಂಹ ದೇವಸ್ಥಾನದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಲಕ್ಷ್ಮಿನರಸಿಂಹ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಬಸ್ ಅಪಘಾತದಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹೊಸನಗರ 108 ಆ್ಯಂಬುಲೆನ್ಸ್…

Read More

ರಿಪ್ಪನ್‌ಪೇಟೆ – ಕಾರು ಮತ್ತು ಬಸ್ ನಡುವೆ‌ ಮುಖಾಮುಖಿ ಡಿಕ್ಕಿ|accident

ರಿಪ್ಪನ್‌ಪೇಟೆ – ಕಾರು ಮತ್ತು ಬಸ್ ನಡುವೆ‌ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಿರೇಜೇನಿ ಗ್ರಾಮದಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ‌ರುವ ಘಟನೆ ನಡೆದಿದೆ. ಹೊಸನಗರದಿಂದ ರಿಪ್ಪನ್‌ಪೇಟೆಗೆ ತೆರಳುತಿದ್ದ ಭಾಗ್ಯಲಕ್ಷ್ಮಿ ಬಸ್ ಹಾಗೂ ರಿಪ್ಪನ್‌ಪೇಟೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್ ನ ಬಲ ಭಾಗಕ್ಕೆ ಕಾರು ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ಅಪಘಾತದಲ್ಲಿ ಯಾವುದೇ ಗಂಭೀರ ಗಾಯಗಳಾಗಿಲ್ಲ ಎನ್ನಲಾಗುತಿದ್ದು ಹೆಚ್ಚಿನ…

Read More

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಸ್ಪತ್ರೆ ಎದುರಲ್ಲಿ ಬಿಸಾಡಿ ಹೋದ ಪತಿರಾಯ|Assault

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪದ  ಕೈನಲ್ಲಿ ಎಂಬ ಗ್ರಾಮದ ಮುರುಳಿ ಎಂಬಾತ ತನ್ನ ಪತ್ನಿ ಮೇಲೆ ಹಲ್ಲೆ ನೆಡೆಸಿ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯ ಬಳಿ ಬಿಸಾಕಿ ಹೋದ ಅಮಾನವೀಯ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಬೆಂಗಳೂರು ಮೂಲದ ಮುರುಳಿ ಕೈನಲ್ಲಿಯ ಮಹಿಳೆಯೊಬ್ಬರನ್ನು ಮದುವೆಯಾಗಿದ್ದನು. ನಂತರ ಇಲ್ಲೇ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಆತ ತನ್ನ ಪತ್ನಿಯ ಮೇಲೆ ಭೀಕರ ರೀತಿಯಲ್ಲಿ ಹಲ್ಲೆ ನೆಡೆಸಿ ಆಸ್ಪತ್ರೆ ಬಳಿ ಬಿಸಾಕಿ ಹೋಗಿದ್ದಾನೆ. ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಡಿಕ್ಕಿ – ಚಾಲಕ ಸಾವು|accident

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರು ಕಾಂಪೌಂಡ್‌ಗೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಗೌತಮಪುರ ಸಂಭವಿಸಿದೆ. ಮೃತನನ್ನು ಪ್ರಜ್ವಲ್‌ ಎಂದು ಗುರುತಿಸಲಾಗಿದೆ. ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಮನೆಯೊಂದರ  ಕಾಂಪೌಂಡ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಪ್ರಜ್ವಲ್‌ ಗಂಭೀರವಾಗಿ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ.  ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಾಗರ – ಶಿಕಾರಿಪುರದಲ್ಲಿ ಎಟಿಎಂ ವಾಹನದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ|ATM

ಶಿವಮೊಗ್ಗ: ಜಿಲ್ಲೆಯ ಮೂರು ಕಡೆಗಳಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 9.15 ಕೋಟಿ ರೂ. ದಾಖಲೆ ಇಲ್ಲದ ಹಣ ಪತ್ತೆಯಾಗಿದೆ.  ಶಿವಮೊಗ್ಗದ ಸಾಗರ, ಸೊರಬ ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಬೃಹತ್‌ ಮೊತ್ತದ ಹಣ ಪತ್ತೆಯಾಗಿದೆ. ಎಟಿಎಂಗೆ ಹಣ ತುಂಬುವ ವಾಹನಗಳಲ್ಲಿ ಈ ಹಣವನ್ನು ಅನಧಿಕೃತವಾಗಿ ತುಂಬಿಕೊಂಡು ಹೋಗಲಾಗುತ್ತಿತ್ತು. ಇದು ಯಾರ ಹಣ, ಎಲ್ಲಿಗೆ ಸಾಗಿಸಲಾಗುತ್ತಿತ್ತು? ಚುನಾವಣೆಗೂ ಇದಕ್ಕೂ ಏನಾದರೂ ಸಂಬಂಧವಿದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎಟಿಎಂಗೆ…

Read More