Headlines

ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide

ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ. ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ‌ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು…

Read More

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…

Read More

ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…

Read More

ಸಾಗರ : ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸಿನಿಮೀಯ ರೀತಿಯಲ್ಲಿ ಅಪರಿಚಿತರಿಂದ ಹಲ್ಲೆ…!!! – ಆಸ್ಪತ್ರೆಗೆ ದಾಖಲು|assault

ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ  ಮೇಲೆ ಹಲ್ಲೆ :  ಆಸ್ಪತ್ರೆಗೆ ದಾಖಲು…!!! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚಿಪ್ಪಳ್ಳಿ ಬಳಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗ್ರಾಪಂ ಸದಸ್ಯ ಆನಂದ್ ಹರಟೆ ಸಾಗರದಿಂದ ಐಗಿನಬೈಲಿನ ತಮ್ಮ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಚಿಪ್ಪಳಿ ಬಳಿ ತಮ್ಮ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.  ಈ ಸಂಧರ್ಭದಲ್ಲಿ ಆನಂದ್ ಹರಟೆ ಕಾರಿನಿಂದ ಇಳಿಯುತ್ತಿದ್ದಂತೆ…

Read More

OLX ನಲ್ಲಿ ಕಾರು ಖರೀದಿಸಲು ಹೋಗಿ ವಂಚನೆಗೊಳಗಾದ ಬ್ಯಾಂಕ್ ಉದ್ಯೋಗಿ

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್​ ನಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು OLX  ನಲ್ಲಿ ಕಾರೊಂದನ್ನ ಖರೀದಿಸಲು ಮುಂದಾಗಿ ಲಕ್ಷಾಂತರ ರೂ ಮೋಸವಾಗಿರುವ ಘಟನೆ ನಡೆದಿದೆ.  ಕಾರಿನ ಜಾಹಿರಾತು ನೀಡಿದ್ದ ಮಾಲೀಕ ತನ್ನನ್ನ ಆಯುಶ್ ಎಂದು ಪರಿಚಯಸಿಕೊಂಡು ಅಡ್ವಾನ್ಸ್ ಮಾಡಲು ಹೇಳಿದ್ದ. ಅದರಂತೆ ಉದ್ಯೋಗಿ 6 ಸಾವಿರ ರೂಪಾಯಿ ಅಡ್ವಾನ್ಸ್ ಮಾಡಿದ್ದಾರೆ. ಆ ಬಳಿಕ ಆಯುಶ್ ಕಾರ್​ ಡಿಲೇವರಿ ಇವತ್ತೆ ತೆಗೆದುಕೊಳ್ಳಿ ದೆಹಲಿಯ ಪಟೇಲ್​ ನಗರದ ಮೆಟ್ರೋ ಪಿಲ್ಲರ್​ ಬಳಿರುವ ಗ್ಯಾರೇಜಿನಲ್ಲಿ ಕಾರಿದೆ. ಬಾಕಿ ಹಣ…

Read More

ಮಿನಿ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಚಾಲಕ ಆಸ್ಪತ್ರೆಗೆ ದಾಖಲು|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ.  ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹರಿಹರದಲ್ಲಿ  ಔಷಧಿ ಸಾಗಣೆಯ ವಾಹನವೊಂದು ತೆರೆದ ಚರಂಡಿಗೆ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ನಗರದ ಹಳೆ ಪಿ.ಬಿ.ರಸ್ತೆ ಬಳಿಯಲ್ಲಿ ಸಂಭವಿಸಿದೆ. …

Read More

ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ ಅಕ್ರಮವಾಗಿ ನಾಟಾ ಸಾಗಿಸುತ್ತಿದ್ದ ಲಾರಿ – ಲಾರಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು – |illegal wood

ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮಪಂಚಾಯಿತಿಯ ಹೊಸಕೊಪ್ಪದಿಂದ ಅಕ್ರಮವಾಗಿ ನಾಟ ತುಂಬಿಸಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿಯನ್ನು ಕೆರೆಕೊಪ್ಪ ಬಳಿ ತಡೆಹಿಡಿಯಲಾಗಿದೆ. ಮೂರು ಲಕ್ಷಕ್ಕೂ ಅಧಿಕ ಮೊತ್ತದ ಅಕೇಶಿಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. KA-41-B 6435 ಸಂಖ್ಯೆಯ ಲಾರಿ ಶುಕ್ರವಾರ ಮದ್ಯ ರಾತ್ರಿಯ ವೇಳೆ ಅಕ್ರಮವಾಗಿ ಅಕೇಶಿಯ ನಾಟವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ ಅಕೇಶಿಯ ಮರದ ತುಂಡು ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ್ದು ಈ ಸಂದರ್ಭದಲ್ಲಿ ಅಕ್ಕಪಕ್ಕದ ಮನೆಗಳ ಫ್ರಿಡ್ಜ್, ಟಿವಿ, ಯುಪಿಎಸ್ ಸೇರಿ ಹಲವು ಉಪಕರಣ ಹಾಳಾಗಿದೆ….

Read More

ಕೌಟುಂಬಿಕ ಕಲಹ : ಪತಿಯಿಂದ ಪತ್ನಿಯ ಮೇಲೆ ಆಸಿಡ್ ದಾಳಿ|acid

ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ಸಿಟ್ಟಿನಿಂದ ಹೆಂಡತಿಯ ಮೈಮೇಲೆ ಆಸಿಡ್ ಎರಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಗ್ರಾಮವೊಂದರ ನಿವಾಸಿಯಾದ ಸಂತ್ರಸ್ತೆಯು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ಧಾರೆ. ಬಿಡುವಾದಾಗ ತನ್ನ ಮಕ್ಕಳನ್ನು ನೋಡಲು ತನ್ನ ತಾಯಿ ಮನೆಗೆ ಬರುತ್ತಿದ್ದರು. ಇನ್ನೂ ಪತ್ನಿಯ ಜೊತೆಗೆ ಜಗಳ ತೆಗೆದು ದೂರವೇ ಇದ್ದ ಪತಿಯು ಆಗಾಗ ಪತ್ನಿಯ ತಾಯಿ ಮನೆಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದನಂತೆ. ಈ ನಡುವೆ ಕಳೆದ ಸಂಕ್ರಾಂತಿಯ ಸಂದರ್ಭದಲ್ಲಿ ಪತ್ನಿಯ ತಾಯಿ ಮನೆಗೆ ಬಂದ ಗಂಡ, ಅದೇ…

Read More

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ – ಗಾಂಜಾ ಸಮೇತ ಆರೋಪಿಯ ಬಂಧನ|Arrested

ಸಾಗರ : ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂರಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸೊರಬ ತಾಲೂಕಿನ ಗಣಪತಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಮಾರು 500 ಗ್ರಾಂ ಒಣ ಗಾಂಜಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More