ರಿಪ್ಪನ್‌ಪೇಟೆ – ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ|Rpet

ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಸುಮಾರು 60 ವರ್ಷದ ಪಟ್ಟಣದಲ್ಲಿ ಛತ್ರಿ ರಿಪೇರಿ ಮಾಡಿಕೊಂಡಿದ್ದ ವ್ಯಕ್ತಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಮೃತನನ್ನು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರೆಹೊಂಡದ ಗಂಗಪ್ಪ ಎನ್ನಲಾಗುತ್ತಿದೆ.

Read More

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

ಬಸ್ಸು ಮತ್ತು ಕಾರಿನ ನಡೆವೆ ಭೀಕರ ಅಪಘಾತ – ಓರ್ವ ಗಂಭೀರ|accident

ಬಸ್ಸಿಗೆ ಡಿಕ್ಕಿ ಹೊಡೆದ ಕಾರು – ಒಬ್ಬರಿಗೆ ಗಂಭೀರ ಗಾಯ   ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ. ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ…

Read More

ರಿಪ್ಪನ್‌ಪೇಟೆ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಎರಡು ಲಾರಿ,ಟ್ರಾಕ್ಟರ್ ಮತ್ತು ಜಂಬಿಟ್ಟಿಗೆ ಕೊಯ್ಯುವ ಯಂತ್ರ ವಶಕ್ಕೆ|illegal mining

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಯಂತ್ರ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಮದೂರು ಮತ್ತು ಹೊನಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗ್ಗೆ ಗಣಿಗಾರಿಕೆ ನಡೆಸುತಿದ್ದ ಪ್ರದೇಶಕ್ಕೆ ದಾಳಿ ನಡೆಸಿ ಎರಡು ಲಾರಿ ,ಒಂದು ಟ್ರಾಕ್ಟರ್ ಮತ್ತು ಜಂಬಿಟ್ಟಿಗ್ಗೆ ಕೊಯ್ಯುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಭೂ ಮತ್ತು ಗಣಿ…

Read More

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು…

Read More

ಬೈಕ್ ಅಪಘಾತದಲ್ಲಿ LLB ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್‌ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಗೌತಮ್‌ (21) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಡೆದಿದ್ದೇನು??? ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್​…

Read More

ಹೊಸನಗರ : ಚಲಿಸುತಿದ್ದ ಟ್ರಾಕ್ಟರ್ ಪಲ್ಟಿ – ನೀರುಗಂಟಿ ಸಾವು|Accident

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನೀರುಗಂಟಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರಿನಲ್ಲಿ(ನಗರ) ನಡೆದಿದೆ. ಬಿದನೂರು ನಗರದ ಚಿಕ್ಕಪೇಟೆ ನಿವಾಸಿ ತುಕರಾಂ(46) ಎಂಬಾತ ಮೃತ ದುರ್ದೈವಿ. ಕುಡಿಯುವ ನೀರು ಪೂರೈಸುವ ಟ್ರಾಕ್ಟರ್ ಪಲ್ಟಿಯಾದ ಕಾರಣ ನೀರುಗಂಟಿ ಸಾವನ್ನಪ್ಪಿದ್ದಾನೆ. ನಗರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರುಗಂಟಿ ಕೆಲಸ ಮಾಡುತ್ತಿದ್ದ ತುಕರಾಂ.ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮನೆಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲು ಮುಂದಾದಾಗ ಈ ಅವಘಡ ಸಂಭವಿಸಿದೆ. ನೀರು ಪೂರೈಸುವ ಟ್ರ್ಯಾಕ್ಟರ್…

Read More

ಆಗುಂಬೆ ಘಾಟ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ‌ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|Accident

ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆಗುಂಬೆ ಘಾಟ್ ನ 11 ನೇ ತಿರುವಿನ ಸಮೀಪದಲ್ಲಿ ತೀರ್ಥಹಳ್ಳಿ ಕಡೆಯಿಂದ ಹೆಬ್ರಿ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬರುತಿದ್ದ ಕೆಟಿಎಮ್ ಬೈಕ್ಬ್ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ…

Read More

ಈಜಲು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು – ಓರ್ವನ ಶವ ಪತ್ತೆ|tunga

ತೀರ್ಥಹಳ್ಳಿ : ಇಲ್ಲಿನ ತೀರ್ಥಮತ್ತೂರಿನಲ್ಲಿ ಈಜಲು ಇಳಿದ ಇಬ್ಬರು ಪ್ರಾಧ್ಯಾಪಕರು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ. ತೀರ್ಥಮತ್ತೂರು ಬಳಿ 8-10 ಜನ ಪ್ರಾಧ್ಯಾಪಕರು ತುಂಗ ನದಿಗೆ ಇಳಿದಾಗ ಓರ್ವ ಪ್ರಾಧ್ಯಾಪಕರು ನೀರು ಪಾಲಾಗಿದ್ದು ಅವರನ್ನು ರಕ್ಷಿಸಲು ಮತ್ತೋರ್ವ ಪ್ರಾಧ್ಯಾಪಕರು ಮುಂದಾಗಿದ್ದು ಅವರೂ ಸಹ ನೀರು ಪಾಲಾಗಿದ್ದಾರೆ. ನಿಟ್ಟೆ ಕಾಲೇಜಿನ ಪ್ರಾಧ್ಯಾಪಕರಾದ ಪುನೀತ್ ಮತ್ತು ಬಾಲಾಜಿ ನೀರುಪಾಲಾದ ದುರ್ಧೈವಿಗಳಾಗಿದ್ದಾರೆ. ದಕ್ಷಿಣ ಕನ್ನಡದ ನಿಟ್ಟೆ ಕಾಲೇಜಿನ 8 ರಿಂದ ಹತ್ತು ಜನ ಪ್ರಾಧ್ಯಾಪಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಜೆ…

Read More

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಯುವಕನ ಬಂಧನ|Arrested

ತೀರ್ಥಹಳ್ಳಿ : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ…

Read More