Headlines

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು|train

ಶಿವಮೊಗ್ಗ  : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ  ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ರೈಲ್ವೆ…

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More

ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹ ಪತ್ತೆ|beach death

ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿ ಸಮುದ್ರಪಾಲಾಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹಗಳು ಪತ್ತೆಯಾಗಿವೆ. ಸಾಗರ ತಾಲೂಕಿನ ತುಮರಿ ಗ್ರಾಮದ ಪುನೀತ್ ಚೌಡಪ್ಪ(30) ಹಾಗೂ ರಾಘವೇಂದ್ರ(22) ಮೃತಪಟ್ಟವರು. ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿದ್ದ ಪುನೀತ್ ಮತ್ತು ರಾಘವೇಂದ್ರರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಪುನೀತ, ರಾಘವೇಂದ್ರ ಸೇರಿದಂತೆ ಮೂವರು ಯುವಕರು ಸೋಮವಾರ ಸಂಜೆ ಮುರ್ಡೇಶ್ವರಕ್ಕೆ ಪ್ರವಾಸ ಬಂದಿದ್ದರು. ಈ ವೇಳೆ ಸಮುದ್ರಕ್ಕೆ ಈಜಲು ಇಳಿದ ಇಬ್ಬರು ನಾಪತ್ತೆಯಾಗಿದ್ದರು. ಇಬ್ಬರ ಮೃತದೇಹ…

Read More

ಕೆಂಚನಾಲದಲ್ಲಿ ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಪ್ರಕರಣ – ಆರೋಪಿಯ ಬಂಧನ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಆನಂದಪುರ ಸಮೀಪದ ಮುರುಘಾಮಠ ಗ್ರಾಮದ ಜಾವದ್ ಅಹಮ್ಮದ್ ಬಿನ್ ಇಪ್ತಿಕಾರ್ ಅಹಮದ್ ಬಂಧಿತ ಆರೋಪಿ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್…

Read More

ಹೋರಿ ಬೆದರಿಸುವ ಸ್ಪರ್ಧೆ : ಇಬ್ಬರು ಸಾವು – 6 ಜನರಿಗೆ ಗಾಯ|bull competition

ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ…

Read More

ಆನಂದಪುರದಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|crime

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಪ್ರಕರಣದಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ಮೊದ್ಲೆಸರ ಗ್ರಾಮದ  ಕೀರ್ತನಾ(15) ಮೃತಪಟ್ಟ ದುರ್ಧೈವಿಯಾದ್ದಾರೆ. ಆನಂದಪುರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9 ನೇ ತರಗತಿ ವ್ಯಾಸಾಂಗ ಮಾಡುತಿದ್ದ ಕೀರ್ತನಾ ಶನಿವಾರ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂದು ಶಿವಮೊಗ್ಗದ ಆಸ್ಪತ್ರೆಗೆ ದಾಖಾಲಾಗಿದ್ದಳು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಶನಿವಾರ ವಿದ್ಯಾರ್ಥಿನಿಯರಿಬ್ಬರು…

Read More

ಗರ್ತಿಕೆರೆ ಬೈಕ್ ಹಾಗೂ ಕಾರಿನ ನಡುವೆ ಅಪಘಾತ : ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿ ವೀಕ್ಷಿಸಿ👇|cctv

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದ ಕಾರು ಹಾಗು ಬೈಕ್ ನಡುವೆ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಗರ್ತಿಕೆರೆ ಪೆಟ್ರೋಲ್ ಬಂಕ್ ಮುಂಭಾಗ ಬೈಕ್ ಚಾಲಕನ ಅಜಾಗರೂಕತೆಯಿಂದ ಹಿಂಬದಿ ಗಮನಿಸದೆ ಬಲಕ್ಕೆ ತಿರುಗಿಸಿದ್ದಾನೆ ಆ ಸಂಧರ್ಭದಲ್ಲಿ ಅತೀ ವೇಗವಾಗಿ ಬಂದ ಕಾರು ಬೈಕ್ ನ್ನು ತಪ್ಪಿಸಲು ಬಲಕ್ಕೆ ತಿರುಗಿಸಿದ್ದರೂ ಬೈಕ್ ಗೆ ಕಾರು ತಗುಲಿದ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ…

Read More

ಗರ್ತಿಕೆರೆ ಬಳಿ ಕಾರು ಹಾಗೂ ಬೈಕ್‌ ನಡುವೆ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಕಾರು ಹಾಗು ಬೈಕ್ ನಡುವೆ ಅಪಘಾತ ನಡೆದಿದೆ. ಪೆಟ್ರೋಲ್ ಬಂಕ್ ಮುಂಭಾಗ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ ಬ್ರೀಜಾ(KA 15 N 8990) ಕಾರು ತೀರ್ಥಹಳ್ಳಿ ಕಡೆಗೆ ಸಂಚರಿಸುತ್ತಿದ್ದು ಈ ವೇಳೆ ರಸ್ತೆಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿದ್ದು ಈ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More